Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ

ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು.

ನಾಗಾಲ್ಯಾಂಡ್​​ನ ಸಾಂಪ್ರದಾಯಿಕ ನೃತ್ಯ ತಂಡದೊಂದಿಗೆ ಹೆಜ್ಜೆ ಹಾಕಿದ ಸಚಿವ ತೆಮ್ಜೆನ್ ಇಮ್ನಾ
ಸಚಿವರ ಡ್ಯಾನ್ಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 02, 2022 | 2:57 PM

ನಾಗಾಲ್ಯಾಂಡ್​​ನ (Nagaland) ಉನ್ನತ ಶಿಕ್ಷಣ ಸಚಿವ, ಬುಡಕಟ್ಟು ವ್ಯವಹಾರಗಳ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರ ಡ್ಯಾನ್ಸ್ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಾರಗಳ ಹಿಂದೆ ಇಮ್ನಾ ಅವರ ಭಾಷಣದ ತುಣುಕೊಂದು ವೈರಲ್ ಆಗಿತ್ತು. ನಾಗಾಲ್ಯಾಂಡ್​​​ನ ಬಿಜೆಪಿ ಅಧ್ಯಕ್ಷರೂ ಆಗಿರುವ ಇಮ್ನಾ, ಈಶಾನ್ಯ ರಾಜ್ಯದ ಜನರ ಕಣ್ಣುಗಳು ಚಿಕ್ಕದು ಎಂದು ಲೇವಡಿ ಮಾಡುವ ಜನರಿಗೆ ತಮ್ಮ ಭಾಷಣದಲ್ಲಿ ಹಾಸ್ಯದಿಂದಲೇ ಚುರುಕು ಮುಟ್ಟಿಸಿದ್ದರು. ಚಿಕ್ಕ ಕಣ್ಣು ಇರುವ ಕಾರಣ ನನ್ನ ಕಣ್ಣೊಳಗೆ ಕಸ ಹೋಗುವುದು ಸಣ್ಣ ಪ್ರಮಾಣದಲ್ಲೇ. ಸುದೀರ್ಘ ಹೊತ್ತಿನ ಟಿವಿ ಶೋನೋಡುತ್ತಿದ್ದರೆ ಸುಲಭವಾಗಿ ನಿದ್ದೆ ಮಾಡಬಹುದು. ನನ್ನಂತೆಯೇ ನೀವೂ ಸಿಂಗಲ್ ಆಗಿ ಇರಿ, ಸಿಂಗಲ್ಸ್ ಅಭಿಯಾನಕ್ಕೆ ಕೈ ಜೋಡಿಸಿ ಎಂದು ಯುವಕರಿಗೆ ಕರೆ ನೀಡಿದ್ದರು ಇಮ್ನಾ. ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ಜನಸಂಖ್ಯಾ ಏರಿಕೆ ಬಗ್ಗೆ , ಮಗುವನ್ನು ಹೆರುವ ಆಯ್ಕೆ ಬಗ್ಗೆ ನಾವು ಸಂವೇದನಾಶೀಲರಾಗಿರೋಣ. ಅಥವಾ ನನ್ನಂತೆ ಸಿಂಗಲ್ ಆಗಿರಿ. ಈ ಮೂಲಕ ನಾವು ಭವಿಷ್ಯಕ್ಕೆ ಕೊಡುಗೆ ನೀಡೋಣ. ಇಂದೇ ಸಿಂಗಲ್ಸ್ ಅಭಿಯಾನಕ್ಕೆ ಕೈಜೋಡಿಸಿ ಎಂದು ಇಮ್ನಾ ಟ್ವೀಟ್ ಮಾಡಿದ್ದರು.

ಇದೀಗ ತುಸೆಂಗ್ರಮೋಂಗ್ ಹಬ್ಬದಲ್ಲಿ ಸಾಂಪ್ರದಾಯಿಕ ನಾಗಮೀಸ್ ನೃತ್ಯ ಮಾಡುತ್ತಿರುವ ವಿಡಿಯೊವನ್ನು ಇಮ್ನಾ ಪೋಸ್ಟ್ ಮಾಡಿದ್ದಾರೆ.

ನೋಡಿ, ನಾನು ಡ್ಯಾನ್ಸ್ ಮಾಡಬಲ್ಲೆ. ತುಸೆಂಗ್ರಮೋಂಗ್- ಆವೊ ನಾಗಾಗಳ ಸುಗ್ಗಿಯ ಹಬ್ಬ. ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಿ ಅದನ್ನು ಯುವ ಜನಾಂಗಕ್ಕೆ ದಾಟಿಸಲಾಗುತ್ತಿದೆ. ನಾಗಾಲ್ಯಾಂಡ್ ನ ಸಂಸ್ಕೃತಿಯನ್ನು ನೋಡಲು ಇಲ್ಲಿಗೆ ಬನ್ನಿ, ಸ್ಥಳೀಯರೊಂದಿಗೆ ನೃತ್ಯ ಮಾಡಿ ಎಂದು ಇಮ್ನಾ ಬರೆದಿದ್ದಾರೆ.

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ