AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪಾನ ಮಾಡುವಾಗ 2 ವಯಾಗ್ರ ಮಾತ್ರೆ ನುಂಗಿ ವ್ಯಕ್ತಿ ಸಾವು

ಮದ್ಯಪಾನ ಮಾಡುವಾಗ 2 ವಯಾಗ್ರ ಮಾತ್ರೆ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಾಗ್ಪುರದಲ್ಲಿ ವರದಿಯಾಗಿದೆ. ಆ ವ್ಯಕ್ತಿ ಸ್ನೇಹಿತನನ್ನು ಭೇಟಿಯಾಗಲು ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ಎಂದು ವೈದ್ಯರು ಹೇಳಿದ್ದಾರೆ.

ಮದ್ಯಪಾನ ಮಾಡುವಾಗ 2 ವಯಾಗ್ರ ಮಾತ್ರೆ ನುಂಗಿ ವ್ಯಕ್ತಿ ಸಾವು
ವಯಾಗ್ರ ಮಾತ್ರೆಗಳು
ನಯನಾ ರಾಜೀವ್
|

Updated on: Mar 07, 2023 | 2:47 PM

Share

ಮದ್ಯಪಾನ ಮಾಡುವಾಗ 2 ವಯಾಗ್ರ ಮಾತ್ರೆ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಾಗ್ಪುರದಲ್ಲಿ ವರದಿಯಾಗಿದೆ. ಆ ವ್ಯಕ್ತಿ ಸ್ನೇಹಿತನನ್ನು ಭೇಟಿಯಾಗಲು ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ಎಂದು ವೈದ್ಯರು ಹೇಳಿದ್ದಾರೆ. ಅಲ್ಲಿ ಅವರು ಮದ್ಯಪಾನ ಮಾಡುವಾಗ ಸಿಲ್ಡೆನಾಫಿಲ್​ನ ಎರಡು 50 ಎಂಜಿ ಮಾತ್ರಗಳನ್ನು ಸೇವಿಸಿದ್ದಾರೆ. ಈ ಸಂಯೋಜನೆಯನ್ನು ವಯಾಗ್ರ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. ಈ ವ್ಯಕ್ತಿಗೆ ಯಾವುದೇ ವೈದ್ಯಕೀಯ ಅಥವಾ ಶಸ್ತ್ರಚಿಕಿತ್ಸೆಯ ಇತಿಹಾಸವಿಲ್ಲ ಎಂಬುದು ತಿಳಿದುಬಂದಿದೆ.

ಮರುದಿನ ಬೆಳಗ್ಗೆಯಷ್ಟೊತ್ತಿಗೆ ಅವರ ಆರೋಗ್ಯ ಹದಗೆಡಲಾರಂಭಿಸಿತ್ತು. ವಾಂತಿ ಶುರುವಾಗಿತ್ತು, ಅವರ ಸ್ನೇಹಿತರು ವೈದ್ಯರನ್ನು ಭೇಟಿ ಮಾಡುವಂತೆ ಕೇಳಿದ್ದರು. ಆದರೆ ಆ ವ್ಯಕ್ತಿ ಆರೋಗ್ಯ ಈ ಮೊದಲು ಹದಗೆಟ್ಟಿತ್ತು ಹೀಗಾಗಿ ಸ್ವಲ್ಪ ಸಮಯದ ಬಳಿಕ ಸರಿ ಹೋಗುತ್ತೆ ಆಸ್ಪತ್ರೆಗೆ ಹೋಗುವುದು ಬೇಡ ಎಂದು ನಿರ್ಧರಿಸಿದ್ದರು.

ಸ್ವಲ್ಪ ಸಮಯದ ನಂತರ, ಅವರ ಸ್ಥಿತಿಯು ತೀರಾ ಹದಗೆಟ್ಟಾಗ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಅಧ್ಯಯನದ ಪ್ರಕಾರ, ಈ ವ್ಯಕ್ತಿಯು ಸೆರೆಬ್ರೊವಾಸ್ಕುಲರ್ ಹೆಮರೇಜ್‌ನಿಂದ ಸಾವನ್ನಪ್ಪಿದ್ದಾನೆ, ಇದರಲ್ಲಿ ಮೆದುಳಿಗೆ ಆಮ್ಲಜನಕದ ಪೂರೈಕೆ ನಿಲ್ಲುತ್ತದೆ.

ಮತ್ತಷ್ಟು ಓದಿ: ಇದು ವಿಶ್ವದ ದುಬಾರಿ ವಯಾಗ್ರ; ಹಿಮಾಲಯದಲ್ಲಿ ಸಿಗುವ ಈ ಔಷಧದ ಬೆಲೆ ಕೆಜಿಗೆ 20 ಲಕ್ಷ ರೂಪಾಯಿ

ಮರಣೋತ್ತರ ಪರೀಕ್ಷೆಯಲ್ಲಿ 300mg ರಕ್ತ ಹೆಪ್ಪುಗಟ್ಟುವಿಕೆ ಕಂಡುಬಂದಿದೆ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ, ವೈದ್ಯರು 300mg ಹೆಪ್ಪುಗಟ್ಟಿದ ರಕ್ತ ಹೆಪ್ಪುಗಟ್ಟುವಿಕೆ ಆಗಿರುವುದು ತಿಳಿದುಬಂದಿತ್ತು.

ಆಲ್ಕೋಹಾಲ್ ಮತ್ತು ಡ್ರಗ್ಸ್ ಮಿಶ್ರಣದಿಂದ ಅಧಿಕ ರಕ್ತದೊತ್ತಡದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ವೈದ್ಯರ ಸಲಹೆ ಇಲ್ಲದೆ ಯಾವುದೇ ಔಷಧಗಳನ್ನು ತೆಗೆದುಕೊಳ್ಳುವುದು ಜೀವಕ್ಕೆ ಕುತ್ತುತರಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!