AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nainital Accident: ನೈನಿತಾಲ್​ನ​ ನದಿಯಲ್ಲಿ ಕೊಚ್ಚಿಹೋದ ಕಾರು; 9 ಜನ ಸಾವು, ಮಹಿಳೆಯ ರಕ್ಷಣೆ

ಪ್ರವಾಸ ಹೊರಟಿದ್ದಾಗ ವಾಹನ ಧೇಲಾ ನದಿಯಲ್ಲಿ ಮುಳುಗಿದ್ದು, ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ. ಐವರ ಶವ ಇನ್ನೂ ಕಾರಿನಲ್ಲಿ ಉಳಿದಿದೆ. ನಾಜಿಯಾ ಎಂಬ 22 ವರ್ಷದ ಮಹಿಳೆಯನ್ನು ಆ ವಾಹನದಿಂದ ಜೀವಂತವಾಗಿ ರಕ್ಷಿಸಲಾಗಿದೆ.

Nainital Accident: ನೈನಿತಾಲ್​ನ​ ನದಿಯಲ್ಲಿ ಕೊಚ್ಚಿಹೋದ ಕಾರು; 9 ಜನ ಸಾವು, ಮಹಿಳೆಯ ರಕ್ಷಣೆ
ನೈನಿತಾಲ್​ನಲ್ಲಿ ಕೊಚ್ಚಿಹೋದ ವಾಹನImage Credit source: Indian Express
TV9 Web
| Updated By: ಸುಷ್ಮಾ ಚಕ್ರೆ|

Updated on:Jul 08, 2022 | 10:27 AM

Share

ನೈನಿತಾಲ್: ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದು ಬೆಳಗ್ಗೆ ಉತ್ತರಾಖಂಡದ ರಾಮನಗರದಲ್ಲಿ ಕಾರೊಂದು ಧೇಲಾ ನದಿಗೆ (Dhela River) ಬಿದ್ದು, ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ. ಈ ದುರಂತದಲ್ಲಿ ಪಂಜಾಬ್‌ನ 9 ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಬ್ಬರನ್ನು ರಕ್ಷಿಸಲಾಗಿದೆ. ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 5 ಶವಗಳು ಕಾರಿನೊಳಗೆ ಸಿಲುಕಿಕೊಂಡಿವೆ. ನೀರಿನಲ್ಲಿ ಮುಳುಗಿದ್ದ ಒಬ್ಬರನ್ನು ರಕ್ಷಿಸಲಾಗಿದೆ.

ಪ್ರವಾಸ ಹೊರಟಿದ್ದಾಗ ವಾಹನ ಧೇಲಾ ನದಿಯಲ್ಲಿ ಮುಳುಗಿದ್ದು, ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ. ಐವರ ಶವ ಇನ್ನೂ ಕಾರಿನಲ್ಲಿ ಉಳಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇಂದು ಮುಂಜಾನೆ ಮಳೆಯಿಂದಾಗಿ ಭಾರೀ ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಕುಮಾವೂನ್ ರೇಂಜ್‌ನ ಡಿಐಜಿ ಆನಂದ್ ಭರನ್ ANIಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ಹಿಂದೂಗಳು ನಮ್ಮ ಪೂರ್ವಜರು, ಗೋಹತ್ಯೆ ಮಾಡಬೇಡಿ: ಬದ್ರುದ್ದೀನ್ ಅಜ್ಮಲ್
Image
ವಾರಾಣಸಿಯಲ್ಲಿ ಮಕ್ಕಳ ಜೊತೆ ನರೇಂದ್ರ ಮೋದಿ ಸಂವಾದ; ಹಾಡು, ನೃತ್ಯ ನೋಡಿ ಶಹಬ್ಭಾಸ್ ಎಂದ ಪ್ರಧಾನಿ
Image
Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು

ಇದನ್ನೂ ಓದಿ: Kerala Rain: ಕೇರಳದಲ್ಲಿ ಐದು ದಿನ ಭಾರೀ ಮಳೆ: ಮುಖ್ಯಮಂತ್ರಿ ಕಚೇರಿಯಿಂದ ಸಿದ್ಧತೆಗೆ ಸೂಚನೆ

ಉತ್ತರಾಖಂಡದ ರಾಮನಗರದ ಧೇಲಾ ನದಿಗೆ ಕಾರು ಬಿದ್ದಿದ್ದರಿಂದ ಪಂಜಾಬ್‌ನ ಒಂಬತ್ತು ಪ್ರವಾಸಿಗರು ಇಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿ, ಬಲವಾದ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಐವರ ಶವ ಇನ್ನೂ ಕಾರಿನೊಳಗೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಜಿಯಾ ಎಂಬ 22 ವರ್ಷದ ಮಹಿಳೆಯನ್ನು ಆ ವಾಹನದಿಂದ ಜೀವಂತವಾಗಿ ರಕ್ಷಿಸಲಾಗಿದೆ. ಆಕೆಯನ್ನು ರಾಮನಗರ ಆಸ್ಪತ್ರೆಗೆ ಕಳುಹಿಸಲಾಗಿದೆ.

Published On - 10:26 am, Fri, 8 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್