AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nainital Accident: ನೈನಿತಾಲ್​ನ​ ನದಿಯಲ್ಲಿ ಕೊಚ್ಚಿಹೋದ ಕಾರು; 9 ಜನ ಸಾವು, ಮಹಿಳೆಯ ರಕ್ಷಣೆ

ಪ್ರವಾಸ ಹೊರಟಿದ್ದಾಗ ವಾಹನ ಧೇಲಾ ನದಿಯಲ್ಲಿ ಮುಳುಗಿದ್ದು, ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ. ಐವರ ಶವ ಇನ್ನೂ ಕಾರಿನಲ್ಲಿ ಉಳಿದಿದೆ. ನಾಜಿಯಾ ಎಂಬ 22 ವರ್ಷದ ಮಹಿಳೆಯನ್ನು ಆ ವಾಹನದಿಂದ ಜೀವಂತವಾಗಿ ರಕ್ಷಿಸಲಾಗಿದೆ.

Nainital Accident: ನೈನಿತಾಲ್​ನ​ ನದಿಯಲ್ಲಿ ಕೊಚ್ಚಿಹೋದ ಕಾರು; 9 ಜನ ಸಾವು, ಮಹಿಳೆಯ ರಕ್ಷಣೆ
ನೈನಿತಾಲ್​ನಲ್ಲಿ ಕೊಚ್ಚಿಹೋದ ವಾಹನImage Credit source: Indian Express
TV9 Web
| Edited By: |

Updated on:Jul 08, 2022 | 10:27 AM

Share

ನೈನಿತಾಲ್: ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದು ಬೆಳಗ್ಗೆ ಉತ್ತರಾಖಂಡದ ರಾಮನಗರದಲ್ಲಿ ಕಾರೊಂದು ಧೇಲಾ ನದಿಗೆ (Dhela River) ಬಿದ್ದು, ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ. ಈ ದುರಂತದಲ್ಲಿ ಪಂಜಾಬ್‌ನ 9 ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಬ್ಬರನ್ನು ರಕ್ಷಿಸಲಾಗಿದೆ. ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 5 ಶವಗಳು ಕಾರಿನೊಳಗೆ ಸಿಲುಕಿಕೊಂಡಿವೆ. ನೀರಿನಲ್ಲಿ ಮುಳುಗಿದ್ದ ಒಬ್ಬರನ್ನು ರಕ್ಷಿಸಲಾಗಿದೆ.

ಪ್ರವಾಸ ಹೊರಟಿದ್ದಾಗ ವಾಹನ ಧೇಲಾ ನದಿಯಲ್ಲಿ ಮುಳುಗಿದ್ದು, ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ. ಐವರ ಶವ ಇನ್ನೂ ಕಾರಿನಲ್ಲಿ ಉಳಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇಂದು ಮುಂಜಾನೆ ಮಳೆಯಿಂದಾಗಿ ಭಾರೀ ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಕುಮಾವೂನ್ ರೇಂಜ್‌ನ ಡಿಐಜಿ ಆನಂದ್ ಭರನ್ ANIಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ಹಿಂದೂಗಳು ನಮ್ಮ ಪೂರ್ವಜರು, ಗೋಹತ್ಯೆ ಮಾಡಬೇಡಿ: ಬದ್ರುದ್ದೀನ್ ಅಜ್ಮಲ್
Image
ವಾರಾಣಸಿಯಲ್ಲಿ ಮಕ್ಕಳ ಜೊತೆ ನರೇಂದ್ರ ಮೋದಿ ಸಂವಾದ; ಹಾಡು, ನೃತ್ಯ ನೋಡಿ ಶಹಬ್ಭಾಸ್ ಎಂದ ಪ್ರಧಾನಿ
Image
Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು

ಇದನ್ನೂ ಓದಿ: Kerala Rain: ಕೇರಳದಲ್ಲಿ ಐದು ದಿನ ಭಾರೀ ಮಳೆ: ಮುಖ್ಯಮಂತ್ರಿ ಕಚೇರಿಯಿಂದ ಸಿದ್ಧತೆಗೆ ಸೂಚನೆ

ಉತ್ತರಾಖಂಡದ ರಾಮನಗರದ ಧೇಲಾ ನದಿಗೆ ಕಾರು ಬಿದ್ದಿದ್ದರಿಂದ ಪಂಜಾಬ್‌ನ ಒಂಬತ್ತು ಪ್ರವಾಸಿಗರು ಇಂದು ಬೆಳಿಗ್ಗೆ ನೀರಿನಲ್ಲಿ ಮುಳುಗಿ, ಬಲವಾದ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಐವರ ಶವ ಇನ್ನೂ ಕಾರಿನೊಳಗೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಜಿಯಾ ಎಂಬ 22 ವರ್ಷದ ಮಹಿಳೆಯನ್ನು ಆ ವಾಹನದಿಂದ ಜೀವಂತವಾಗಿ ರಕ್ಷಿಸಲಾಗಿದೆ. ಆಕೆಯನ್ನು ರಾಮನಗರ ಆಸ್ಪತ್ರೆಗೆ ಕಳುಹಿಸಲಾಗಿದೆ.

Published On - 10:26 am, Fri, 8 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ