AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ

ಉತ್ತರ ಪ್ರದೇಶದಲ್ಲಿ ಜೂನ್​​​ 17ಕ್ಕೆ ರಸ್ತೆಗಳಲ್ಲಿ ನಮಾಜ್​​​ ಮಾಡುವಂತಿಲ್ಲ, ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಸಿಎಂ ಯೋಗಿ ಅವರನ್ನು ಖಡಕ್​​ ಆದೇಶವನ್ನು ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ. ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿವಂತೆ, ಹಾಗೂ ಕಾನುನೂ ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಸಿದ್ದಾರೆ. ಅಷ್ಟಕ್ಕೂ ಯೋಗಿ ನೀಡಿದ ಖಡಕ್​ ಆದೇಶಗಳೇನು? ಮುಸ್ಲಿಂ ಜನರು ಎಲ್ಲ ನಮಾಜ್​​ ಮಾಡಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ
ಯೋಗಿ ಆದಿತ್ಯನಾಥ್
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2024 | 5:51 PM

Share

ಮುಂಬರುವ ದಿನಗಳಲ್ಲಿ ಉತ್ತರಪ್ರದೇಶದಲ್ಲಿ (uttar pradesh) ಹಲವು ಹಬ್ಬಗಳು ಬರಲಿದೆ. ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath )ಒಂದು ಮಹತ್ವದ ಸಭೆಯನ್ನು ನಡೆಸಿದ್ದಾರೆ. ಈ ಬಗ್ಗೆ ಗುರುವಾರದಂದು ಉನ್ನತ ಮಟ್ಟದ ಸಭೆಯನ್ನು ನಡೆಸಿ, ಅಧಿಕಾರಿಗಳಿಗೆ ಖಡಕ್​​​ ಸೂಚನೆಯನ್ನು ನೀಡಿದ್ದಾರೆ. ಜೂನ್​​​ 16ಕ್ಕೆ ಗಂಗಾದಸರಾ, 17ಕ್ಕೆ ಬಕ್ರೀದ್​​​, 18ಕ್ಕೆ ಜ್ಯೇಷ್ಠ ಮಾಸದ ಮಂಗಲೋತ್ಸವ ಉತ್ತರ ಪ್ರದೇಶದಲ್ಲಿ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 24X7 ಕೆಲಸ ಮಾಡುವಂತೆ ಹಾಗೂ ಎಲ್ಲ ಕಡೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಪೊಲೀಸ್​​ ಇಲಾಖೆಗೆ ಸೂಚನೆ ನೀಡಿದ್ದಾರೆ.

ಇದರಲ್ಲೂ ಸಿಎಂ ಯೋಗಿ ಅವರು 17ಕ್ಕೆ ಬಕ್ರೀದ್ ಇರುವ ಕಾರಣ ಒಂದು ಮಾರ್ಗಸೂಚಿಯನ್ನು ನೀಡಿದ್ದಾರೆ. ಬಕ್ರೀದ್​​​ ಸಂಪ್ರಾದಾಯದಂತೆ ಆಚರಣೆ ಮಾಡಲಿ, ಆದರೆ ರಸ್ತೆ ಬಂದ್​​ ಮಾಡಿ ನಮಾಜ್ ಮಾಡುವುದು​​​​ ಅಥವಾ ಮಾರ್ಗ ಮಧ್ಯೆ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಲಾಗಿದೆ. ಸರ್ಕಾರ ಹಾಗೂ ಸ್ಥಳೀಯ ಆಡಳಿತ ನಿಗದಿಪಡಿಸಿರುವ ಸ್ಥಳದಲ್ಲೇ ನಮಾಜ್ ಮಾಡಬೇಕು ಹಾಗೂ ಪ್ರಾಣಿ ಬಲಿ ನೀಡಬೇಕು ಎಂದು ಆದೇಶ ನೀಡಿದ್ದಾರೆ.

ಪ್ರಾಣಿ ಬಲಿ ನೀಡುವ ಮುನ್ನ ಸ್ಥಳೀಯ ಅಧಿಕಾರಿಗಳ ಜತೆಗೆ ಚರ್ಚೆ ಮಾಡಬೇಕು ಹಾಗೂ ಬಲಿ ನೀಡುವ ಮೊದಲು ಅಧಿಕಾರಿಗಳ ಒಪ್ಪಿಗೆ ಪಡೆಯಬೇಕು ಎಂದು ಹೇಳಿದ್ದಾರೆ. ವಿವಾದಿತ/ ಸೂಕ್ಷ್ಮ ಪ್ರದೇಶದಲ್ಲಿ ಪ್ರಾಣಿ ಬಲಿ ನೀಡಬಾರದು. ನಿಷೇಧಿತ ಪ್ರದೇಶದಲ್ಲಿ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇನ್ನು ಪ್ರಾಣಿ ಬಲಿಯಾದ ನಂತರ ಪ್ರತಿ ಜಿಲ್ಲೆಯಲ್ಲೂ ತ್ಯಾಜ್ಯ ವಿಲೇವಾರಿಯಾಗಬೇಕು. ಎಲ್ಲವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ನಂಬಿಕೆಯನ್ನು ಗೌರವಿಸಿ:

ನಮಾಜ್​​​ ಮುಸ್ಲಿಂ ಸಂಪ್ರಾದಾಯದಂತೆ ನಡೆಯಲಿ ಆದರೆ ಅದು ರಸ್ತೆ ಮಧ್ಯೆ ಅಲ್ಲ, ಅಧಿಕಾರಿಗಳು ಸೂಚಿಸಿದ ಪ್ರದೇಶದಲ್ಲಿ ಮಾಡಬೇಕು. ಯಾವುದೇ ಹೊಸ ಸಂಪ್ರಾದಾಯವನ್ನು ಪೋತ್ಸಾಹಿಸಬೇಡಿ, ಹಾಗೂ ಅವರ ನಂಬಿಕೆಯನ್ನು ಗೌರವಿಸಿ ಎಂದು ಹೇಳಿದ್ದಾರೆ. ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಅಧಿಕಾರಿಗಳ ಸಭೆಯಲ್ಲಿ ಯೋಗಿ ಅವರು ಜೂನ್​​​15ರಿಂದ ಜೂನ್​​ 22ರವರೆಗೆ ಸ್ವಚ್ಛತಾ ಆಂದೋಲನದಲ್ಲಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ. ಗಂಗಾ ದಸರಾದಂದು ಗಂಗಾ ನದಿಯ ಘಟ್​​​ಗಳನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದ್ದಾರೆ. ಹಾಗೂ ಅಲ್ಲಿ ಅಲಂಕಾರಗಳು ನಡೆಯಬೇಕು, ಭಕ್ತರಿಗೆ ಸ್ನಾನ ಮಾಡಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sat, 15 June 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ