AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ

ಉತ್ತರ ಪ್ರದೇಶದಲ್ಲಿ ಜೂನ್​​​ 17ಕ್ಕೆ ರಸ್ತೆಗಳಲ್ಲಿ ನಮಾಜ್​​​ ಮಾಡುವಂತಿಲ್ಲ, ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಸಿಎಂ ಯೋಗಿ ಅವರನ್ನು ಖಡಕ್​​ ಆದೇಶವನ್ನು ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ. ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿವಂತೆ, ಹಾಗೂ ಕಾನುನೂ ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಸಿದ್ದಾರೆ. ಅಷ್ಟಕ್ಕೂ ಯೋಗಿ ನೀಡಿದ ಖಡಕ್​ ಆದೇಶಗಳೇನು? ಮುಸ್ಲಿಂ ಜನರು ಎಲ್ಲ ನಮಾಜ್​​ ಮಾಡಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ರಸ್ತೆಗಳಲ್ಲಿ ನಮಾಜ್​​ ನಿಷೇಧ, ಗೊತ್ತುಪಡಿಸಿದ ಪ್ರದೇಶದಲ್ಲಿ ಮಾತ್ರ ಪ್ರಾಣಿ ಬಲಿ, ಯೋಗಿ ಖಡಕ್​​ ಸೂಚನೆ
ಯೋಗಿ ಆದಿತ್ಯನಾಥ್
ಅಕ್ಷಯ್​ ಪಲ್ಲಮಜಲು​​
|

Updated on:Jun 15, 2024 | 5:51 PM

Share

ಮುಂಬರುವ ದಿನಗಳಲ್ಲಿ ಉತ್ತರಪ್ರದೇಶದಲ್ಲಿ (uttar pradesh) ಹಲವು ಹಬ್ಬಗಳು ಬರಲಿದೆ. ಹಾಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath )ಒಂದು ಮಹತ್ವದ ಸಭೆಯನ್ನು ನಡೆಸಿದ್ದಾರೆ. ಈ ಬಗ್ಗೆ ಗುರುವಾರದಂದು ಉನ್ನತ ಮಟ್ಟದ ಸಭೆಯನ್ನು ನಡೆಸಿ, ಅಧಿಕಾರಿಗಳಿಗೆ ಖಡಕ್​​​ ಸೂಚನೆಯನ್ನು ನೀಡಿದ್ದಾರೆ. ಜೂನ್​​​ 16ಕ್ಕೆ ಗಂಗಾದಸರಾ, 17ಕ್ಕೆ ಬಕ್ರೀದ್​​​, 18ಕ್ಕೆ ಜ್ಯೇಷ್ಠ ಮಾಸದ ಮಂಗಲೋತ್ಸವ ಉತ್ತರ ಪ್ರದೇಶದಲ್ಲಿ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 24X7 ಕೆಲಸ ಮಾಡುವಂತೆ ಹಾಗೂ ಎಲ್ಲ ಕಡೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಪೊಲೀಸ್​​ ಇಲಾಖೆಗೆ ಸೂಚನೆ ನೀಡಿದ್ದಾರೆ.

ಇದರಲ್ಲೂ ಸಿಎಂ ಯೋಗಿ ಅವರು 17ಕ್ಕೆ ಬಕ್ರೀದ್ ಇರುವ ಕಾರಣ ಒಂದು ಮಾರ್ಗಸೂಚಿಯನ್ನು ನೀಡಿದ್ದಾರೆ. ಬಕ್ರೀದ್​​​ ಸಂಪ್ರಾದಾಯದಂತೆ ಆಚರಣೆ ಮಾಡಲಿ, ಆದರೆ ರಸ್ತೆ ಬಂದ್​​ ಮಾಡಿ ನಮಾಜ್ ಮಾಡುವುದು​​​​ ಅಥವಾ ಮಾರ್ಗ ಮಧ್ಯೆ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಲಾಗಿದೆ. ಸರ್ಕಾರ ಹಾಗೂ ಸ್ಥಳೀಯ ಆಡಳಿತ ನಿಗದಿಪಡಿಸಿರುವ ಸ್ಥಳದಲ್ಲೇ ನಮಾಜ್ ಮಾಡಬೇಕು ಹಾಗೂ ಪ್ರಾಣಿ ಬಲಿ ನೀಡಬೇಕು ಎಂದು ಆದೇಶ ನೀಡಿದ್ದಾರೆ.

ಪ್ರಾಣಿ ಬಲಿ ನೀಡುವ ಮುನ್ನ ಸ್ಥಳೀಯ ಅಧಿಕಾರಿಗಳ ಜತೆಗೆ ಚರ್ಚೆ ಮಾಡಬೇಕು ಹಾಗೂ ಬಲಿ ನೀಡುವ ಮೊದಲು ಅಧಿಕಾರಿಗಳ ಒಪ್ಪಿಗೆ ಪಡೆಯಬೇಕು ಎಂದು ಹೇಳಿದ್ದಾರೆ. ವಿವಾದಿತ/ ಸೂಕ್ಷ್ಮ ಪ್ರದೇಶದಲ್ಲಿ ಪ್ರಾಣಿ ಬಲಿ ನೀಡಬಾರದು. ನಿಷೇಧಿತ ಪ್ರದೇಶದಲ್ಲಿ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇನ್ನು ಪ್ರಾಣಿ ಬಲಿಯಾದ ನಂತರ ಪ್ರತಿ ಜಿಲ್ಲೆಯಲ್ಲೂ ತ್ಯಾಜ್ಯ ವಿಲೇವಾರಿಯಾಗಬೇಕು. ಎಲ್ಲವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ನಂಬಿಕೆಯನ್ನು ಗೌರವಿಸಿ:

ನಮಾಜ್​​​ ಮುಸ್ಲಿಂ ಸಂಪ್ರಾದಾಯದಂತೆ ನಡೆಯಲಿ ಆದರೆ ಅದು ರಸ್ತೆ ಮಧ್ಯೆ ಅಲ್ಲ, ಅಧಿಕಾರಿಗಳು ಸೂಚಿಸಿದ ಪ್ರದೇಶದಲ್ಲಿ ಮಾಡಬೇಕು. ಯಾವುದೇ ಹೊಸ ಸಂಪ್ರಾದಾಯವನ್ನು ಪೋತ್ಸಾಹಿಸಬೇಡಿ, ಹಾಗೂ ಅವರ ನಂಬಿಕೆಯನ್ನು ಗೌರವಿಸಿ ಎಂದು ಹೇಳಿದ್ದಾರೆ. ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಅಧಿಕಾರಿಗಳ ಸಭೆಯಲ್ಲಿ ಯೋಗಿ ಅವರು ಜೂನ್​​​15ರಿಂದ ಜೂನ್​​ 22ರವರೆಗೆ ಸ್ವಚ್ಛತಾ ಆಂದೋಲನದಲ್ಲಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದಾರೆ. ಗಂಗಾ ದಸರಾದಂದು ಗಂಗಾ ನದಿಯ ಘಟ್​​​ಗಳನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದ್ದಾರೆ. ಹಾಗೂ ಅಲ್ಲಿ ಅಲಂಕಾರಗಳು ನಡೆಯಬೇಕು, ಭಕ್ತರಿಗೆ ಸ್ನಾನ ಮಾಡಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sat, 15 June 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ