AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ

ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ ಎಂದಿದ್ದಾರೆ.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ
ಲುಲು ಮಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 15, 2022 | 3:58 PM

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ (Lucknow) ಲುಲು ಮಾಲ್​​ನಲ್ಲಿ(Lulu Mall) ನಮಾಜ್ (Namaz) ಮಾಡುತ್ತಿರುವ ಮತ್ತೊಂದು ವಿಡಿಯೊ ಸಿಕ್ಕಿದೆ ಎಂದು ಅಖಿಲ ಭಾರತ್ ಹಿಂದೂ ಮಹಾಸಭಾ ಹೇಳಿದೆ. ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ. ಈ ಬಗ್ಗೆ ಆಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕಿಂತ ಮೊದಲು ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಲುಲು ಮಾಲ್ ಪಿಆರ್ ಒ ಹೇಳಿದ್ದರು. ಲುಲು ಮಾಲ್ ಒಳಗೆ ನಮಾಜ್ ಮಾಡಿದವರ ವಿರುದ್ಧ 153A, 295A, 341 ಮತ್ತು ಇತರ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಮಾಜ್ ಮಾಡಿದವರು ಮಾಲ್ ಸಿಬ್ಬಂದಿ ಅಥವಾ ಮಾಲ್ ಗೆ ಸಂಬಂಧಪಟ್ಟವರಲ್ಲ. ಹಾಗಾಗಿ ಅಪರಿಚಿತ ಯುವಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಬಿಡುಗಡೆ ಮಾಡಿರುವ ಶಿಶಿರ್ ಚತುರ್ವೇದಿ ಅವರ ಮನೆಗೆ ಲುಲು ಮಾಲ್ ನ ಅಧಿಕಾರಿಗಳು ಹೋಗಿದ್ದಾರೆ. ಲುಲು ಮಾಲ್​​ನ ಜನರಲ್ ಮ್ಯಾನೇಜರ್ ಸಮೀರ್ ವರ್ಮಾ ಮತ್ತು ಇತರ ಅಧಿಕಾರಿಗಳು, ಪೊಲೀಸರೊಂದಿಗೆ ಶಿಶಿರ್ ಮನೆಗೆ ಹೋಗಿದ್ದಾರೆ.ಆದಾಗ್ಯೂ, ಲುಲು ಮಾಲ್ ಅಧಿಕಾರಿಗಳು ಶಿಶಿರ್ ಜತೆ ಏನು ಮಾತನಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

Published On - 2:41 pm, Fri, 15 July 22

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್