AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ

ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ ಎಂದಿದ್ದಾರೆ.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ
ಲುಲು ಮಾಲ್
TV9 Web
| Edited By: |

Updated on:Jul 15, 2022 | 3:58 PM

Share

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ (Lucknow) ಲುಲು ಮಾಲ್​​ನಲ್ಲಿ(Lulu Mall) ನಮಾಜ್ (Namaz) ಮಾಡುತ್ತಿರುವ ಮತ್ತೊಂದು ವಿಡಿಯೊ ಸಿಕ್ಕಿದೆ ಎಂದು ಅಖಿಲ ಭಾರತ್ ಹಿಂದೂ ಮಹಾಸಭಾ ಹೇಳಿದೆ. ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ. ಈ ಬಗ್ಗೆ ಆಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕಿಂತ ಮೊದಲು ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಲುಲು ಮಾಲ್ ಪಿಆರ್ ಒ ಹೇಳಿದ್ದರು. ಲುಲು ಮಾಲ್ ಒಳಗೆ ನಮಾಜ್ ಮಾಡಿದವರ ವಿರುದ್ಧ 153A, 295A, 341 ಮತ್ತು ಇತರ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಮಾಜ್ ಮಾಡಿದವರು ಮಾಲ್ ಸಿಬ್ಬಂದಿ ಅಥವಾ ಮಾಲ್ ಗೆ ಸಂಬಂಧಪಟ್ಟವರಲ್ಲ. ಹಾಗಾಗಿ ಅಪರಿಚಿತ ಯುವಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಬಿಡುಗಡೆ ಮಾಡಿರುವ ಶಿಶಿರ್ ಚತುರ್ವೇದಿ ಅವರ ಮನೆಗೆ ಲುಲು ಮಾಲ್ ನ ಅಧಿಕಾರಿಗಳು ಹೋಗಿದ್ದಾರೆ. ಲುಲು ಮಾಲ್​​ನ ಜನರಲ್ ಮ್ಯಾನೇಜರ್ ಸಮೀರ್ ವರ್ಮಾ ಮತ್ತು ಇತರ ಅಧಿಕಾರಿಗಳು, ಪೊಲೀಸರೊಂದಿಗೆ ಶಿಶಿರ್ ಮನೆಗೆ ಹೋಗಿದ್ದಾರೆ.ಆದಾಗ್ಯೂ, ಲುಲು ಮಾಲ್ ಅಧಿಕಾರಿಗಳು ಶಿಶಿರ್ ಜತೆ ಏನು ಮಾತನಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

Published On - 2:41 pm, Fri, 15 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ