AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ

ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ ಎಂದಿದ್ದಾರೆ.

ಲುಲು ಮಾಲ್​ನಲ್ಲಿ ನಮಾಜ್, ಇದೇನು ಲುಲು ಮಸೀದಿಯೇ? ಎಂದ ಅಖಿಲ ಭಾರತ್ ಹಿಂದೂ ಮಹಾಸಭಾ
ಲುಲು ಮಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 3:58 PM

Share

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ (Lucknow) ಲುಲು ಮಾಲ್​​ನಲ್ಲಿ(Lulu Mall) ನಮಾಜ್ (Namaz) ಮಾಡುತ್ತಿರುವ ಮತ್ತೊಂದು ವಿಡಿಯೊ ಸಿಕ್ಕಿದೆ ಎಂದು ಅಖಿಲ ಭಾರತ್ ಹಿಂದೂ ಮಹಾಸಭಾ ಹೇಳಿದೆ. ಮುಸ್ಲಿಂ ಜನರು ನಮಾಜ್ ಮಾಡುತ್ತಿರುವ ಮತ್ತೊಂದು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿದ ಅಖಿಲ ಭಾರತ್ ಹಿಂದೂ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, ಇದು ಲುಲು ಮಾಲ್ ಅಲ್ಲ. ಇದು ಲುಲು ಮಸೀದಿ. ಇಲ್ಲಿ ಜಮೀನು ಖರೀದಿಸಿ ಬೇರೆಯದ್ದೇ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತದೆ. ಈ ಬಗ್ಗೆ ಆಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕಿಂತ ಮೊದಲು ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಲುಲು ಮಾಲ್ ಪಿಆರ್ ಒ ಹೇಳಿದ್ದರು. ಲುಲು ಮಾಲ್ ಒಳಗೆ ನಮಾಜ್ ಮಾಡಿದವರ ವಿರುದ್ಧ 153A, 295A, 341 ಮತ್ತು ಇತರ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಮಾಜ್ ಮಾಡಿದವರು ಮಾಲ್ ಸಿಬ್ಬಂದಿ ಅಥವಾ ಮಾಲ್ ಗೆ ಸಂಬಂಧಪಟ್ಟವರಲ್ಲ. ಹಾಗಾಗಿ ಅಪರಿಚಿತ ಯುವಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಲುಲು ಮಾಲ್​​ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಬಿಡುಗಡೆ ಮಾಡಿರುವ ಶಿಶಿರ್ ಚತುರ್ವೇದಿ ಅವರ ಮನೆಗೆ ಲುಲು ಮಾಲ್ ನ ಅಧಿಕಾರಿಗಳು ಹೋಗಿದ್ದಾರೆ. ಲುಲು ಮಾಲ್​​ನ ಜನರಲ್ ಮ್ಯಾನೇಜರ್ ಸಮೀರ್ ವರ್ಮಾ ಮತ್ತು ಇತರ ಅಧಿಕಾರಿಗಳು, ಪೊಲೀಸರೊಂದಿಗೆ ಶಿಶಿರ್ ಮನೆಗೆ ಹೋಗಿದ್ದಾರೆ.ಆದಾಗ್ಯೂ, ಲುಲು ಮಾಲ್ ಅಧಿಕಾರಿಗಳು ಶಿಶಿರ್ ಜತೆ ಏನು ಮಾತನಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

Published On - 2:41 pm, Fri, 15 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ