AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patriotic Democratic Alliance: ‘ದೇಶಪ್ರೇಮಿ ಪ್ರಜಾಸತ್ತಾತ್ಮಕ ಮೈತ್ರಿ’; ಬಿಜೆಪಿ ವಿರುದ್ಧದ ವಿಪಕ್ಷಗಳ ಒಕ್ಕೂಟಕ್ಕೆ‌ ಹೆಸರು ಫೈನಲ್

ಮುಂದಿನ‌ ಲೋಕಸಭೆಗೆ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಹೊಸ ಮೈತ್ರಿಕೂಟ‌ ರಚನೆ ಮಾಡಿದ್ದೇ ಆದರೆ ಈಗಿರುವ ಯುಪಿಎ ಕಥೆ ಏನು ಎನ್ನುವ ಪ್ರಶ್ನೆ ಮೂಡಿದೆ. ಯುಪಿಎ ಒಕ್ಕೂಟ‌ ವಿಸರ್ಜನೆ ಮಾಡಿ‌ ಹೊಸ ಮೈತ್ರಿಕೂಟದ ಭಾಗವಾಗಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

Patriotic Democratic Alliance: 'ದೇಶಪ್ರೇಮಿ ಪ್ರಜಾಸತ್ತಾತ್ಮಕ ಮೈತ್ರಿ'; ಬಿಜೆಪಿ ವಿರುದ್ಧದ ವಿಪಕ್ಷಗಳ ಒಕ್ಕೂಟಕ್ಕೆ‌ ಹೆಸರು ಫೈನಲ್
ವಿರೋಧ ಪಕ್ಷಗಳ ಸಭೆ
ಹರೀಶ್ ಜಿ.ಆರ್​.
| Updated By: ರಶ್ಮಿ ಕಲ್ಲಕಟ್ಟ|

Updated on: Jun 26, 2023 | 5:31 PM

Share

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ(BJP) ವಿರುದ್ಧ ಸೆಣಸಲು ವಿರೋಧಪಕ್ಷಗಳು ಅಖಾಡ ತಯಾರು ಮಾಡುತ್ತಿವೆ. 16 ವಿರೋಧಪಕ್ಷಗಳ‌ ನಾಯಕರು ಸೇರಿ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ಜೂನ್ 23 ರಂದು ಪಾಟ್ನಾದಲ್ಲಿ ಸಭೆ ನಡೆಸಿದ್ದರು. ನಿತೀಶ್ ಕುಮಾರ್ (Nitish Kumar) ಬಿಹಾರದಲ್ಲಿ ಸಭೆಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಎಡಪಕ್ಷದ ನಾಯಕ ಡಿ.ರಾಜಾ ಅವರು ಪ್ರತಿಪಕ್ಷಗಳ ಮೈತ್ರಿಯ ಹೊಸ ಹೆಸರನ್ನು ಸೂಚಿಸಿದ್ದಾರೆ. ವಿರೋಧ ಪಕ್ಷಗಳ ಮಹಾಮೈತ್ರಿಕೂಟಕ್ಕೆ ದೇಶಭಕ್ತ ಪ್ರಜಾಸತ್ತಾತ್ಮಕ ಒಕ್ಕೂಟ ಎಂದು ಹೆಸರಿಡಲು ನಿರ್ಧರಿಸಲಾಗಿದೆ.

ಇತ್ತೀಚೆಗಷ್ಟೇ ನಡೆದ ವಿರೋಧ ಪಕ್ಷಗಳ ಸಭೆಯ ನಂತರ ಇದೀಗ ವಿಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ಸೂಚಿಸಲಾಗಿದೆ. ಈ ಮೈತ್ರಿಕೂಟಕ್ಕೆ ಪೇಟ್ರಿಯಾಟಿಕ್ ಡೆಮಾಕ್ರಟಿಕ್ ಅಲಯನ್ಸ್ ಎಂದು ಡಿ.ರಾಜ ಸೂಚಿಸಿದ್ಧಾರೆ. ಮೂಲಗಳ ಪ್ರಕಾರ, ಈ ಹೆಸರಿನ ಬಗ್ಗೆ ಎಲ್ಲಾ ಪಕ್ಷಗಳಲ್ಲಿ ಒಮ್ಮತ ಮೂಡಿದೆ. ಶಿಮ್ಲಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಮುಂದಿನ ಸಭೆಯಲ್ಲಿ ಇದರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ 16 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಬಿಜೆಪಿ ವಿರುಧ್ಧ ಲೋಕಸಭಾ ಚುನಾವಣೆಯಲ್ಲಿ ಹೋರಾಟ ನಡೆಸಲು ಸಮರ್ಥ ಒಕ್ಕೂಟ ರಚಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಬಿಜೆಪಿ ವಿರುದ್ಧ ದೇಶದ ಅತಿದೊಡ್ಡ ಮೈತ್ರಿಕೂಟವಾಗಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೆಸರನ್ನು ಘೋಷಿಸಲಿಲ್ಲ, ಆದರೆ ಎಡಪಕ್ಷಗಳ ನಾಯಕ ಡಿ.ರಾಜಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿನ ಪಕ್ಷಗಳ ಒಕ್ಕೂಟದ ಎಂದು ಹೆಸರು ಸೂಚಿಸಿದ್ದು ಈ ಹೆಸರಿಗೆ ಬಹುತೇಕ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಅಂತ್ಯ; 2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದ ನಾಯಕರು

ವಿರೋಧ ಪಕ್ಷಗಳ ಮುಂದಿನ ಸಭೆ ಜುಲೈ ತಿಂಗಳ ಎರಡನೇ ವಾರ ಶಿಮ್ಲಾದಲ್ಲಿ ನಡೆಯಲಿದೆ. ಬಿಜೆಪಿ ವಿರೋಧಿ ಪಕ್ಷಗಳ ಸಭೆಯಲ್ಲಿ ದೇಶಭಕ್ತ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಹೆಸರಿಗೆ ಅಂತಿಮ ಮುದ್ರೆ ಬೀಳಲಿದೆ.

ಸೋನಿಯಾ ನೇತೃತ್ವದ ಯುಪಿಎ ಒಕ್ಕೂಟ ವಿಸರ್ಜನೆ..?

ಮುಂದಿನ‌ ಲೋಕಸಭೆಗೆ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಹೊಸ ಮೈತ್ರಿಕೂಟ‌ ರಚನೆ ಮಾಡಿದ್ದೇ ಆದರೆ ಈಗಿರುವ ಯುಪಿಎ ಕಥೆ ಏನು ಎನ್ನುವ ಪ್ರಶ್ನೆ ಮೂಡಿದೆ. ಯುಪಿಎ ಒಕ್ಕೂಟ‌ ವಿಸರ್ಜನೆ ಮಾಡಿ‌ ಹೊಸ ಮೈತ್ರಿಕೂಟದ ಭಾಗವಾಗಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಸುಮಾರು ಒಂದೂವರೆ ಡಜನ್ ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ ಅದನ್ನು ವಿಸರ್ಜಿಸಲು ನಿರ್ಧರಿಸುವುದು ಸುಲಭವಲ್ಲ. ಅದರ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಇದಕ್ಕೆ ಕಾರಣ. ಮತ್ತು ಹೊಸ ಹೆಸರಿನೊಂದಿಗೆ ಸಮ್ಮಿಶ್ರ ರಚನೆಯಾದರೆ ಯುಪಿಎ ಪಾತ್ರ ಕೊನೆಗೊಳ್ಳುತ್ತದೆ. ಇದಲ್ಲದೆ ಯುಪಿಎ ಅವಧಿಯಲ್ಲಿ ದೇಶ ಮಟ್ಟದಲ್ಲಿ ಹೊಸ ಒಕ್ಕೂಟವನ್ನು ಹುಟ್ಟುಹಾಕುವುದು ಕಷ್ಟ ಎಂಬುದು ಗಮನಿಸಬೇಕಾದ ಸಂಗತಿ. ಮಹಾಮೈತ್ರಿಕೂಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಖ್ಯಸ್ಥರಾಗಲಿದ್ದಾರೆ.‌ ಶಿಮ್ಲಾದಲ್ಲಿ ನಡೆಯಲಿರುವ ಸಭೆ ಮುಖ್ಯವಾಗಲಿದ್ದು ಮಹಾಮೈತ್ರಿಕೂಟದ ಹೆಸರು ಹಾಗೂ ಮೈತ್ರಿ ಸಂಚಾಲಕರ ಬಗ್ಗೆ ತೀರ್ಮಾನವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!