AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಮೀಬಿಯಾದಿಂದ ಭಾರತಕ್ಕೆ ಕರೆತಂದ ಚೀತಾ ಕಿಡ್ನಿ ಕಾಯಿಲೆಯಿಂದ ಸಾವು

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾದ ಚೀತಾಗಳ ಮೊದಲ ಬ್ಯಾಚ್‌ನ ಭಾಗವಾಗಿದ್ದ ಸಾಶಾ, ಕಳೆದ ವರ್ಷ ನಮೀಬಿಯಾದಿಂದ ಬಂದ ಐದು ಹೆಣ್ಣು ಚೀತಾಗಳ ಪೈಕಿ ಒಂದಾಗಿದೆ.

ಮಧ್ಯಪ್ರದೇಶ: ನಮೀಬಿಯಾದಿಂದ ಭಾರತಕ್ಕೆ ಕರೆತಂದ ಚೀತಾ ಕಿಡ್ನಿ ಕಾಯಿಲೆಯಿಂದ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Mar 27, 2023 | 9:18 PM

Share

ಮಧ್ಯಪ್ರದೇಶ: ನಮೀಬಿಯಾದಿಂದ (Namibia) ಭಾರತಕ್ಕೆ ಕರೆತಂದಿದ್ದ ಎಂಟು ಚೀತಾಗಳ (cheetah) ಪೈಕಿ ಒಂದು ಸಾವಿಗೀಡಾಗಿದೆ. ಜನವರಿಯಲ್ಲಿ ಇದಕ್ಕೆ ಮೂತ್ರಪಿಂಡದ ಸೋಂಕು (kidney infection) ಉಂಟಾಗಿದ್ದು ಸೋಮವಾರ ಕೊನೆಯುಸಿರೆಳೆದಿದೆ. ದಿನನಿತ್ಯದ ಮಾನಿಟರಿಂಗ್ ತಪಾಸಣೆಯ ಸಮಯದಲ್ಲಿ ಎಂಬ ಹೆಣ್ಣು ಚೀತಾ, ಸಾಶಾ ಆಯಾಸ ಮತ್ತು ದೌರ್ಬಲ್ಯದ ಲಕ್ಷಣಗಳನ್ನು ತೋರಿಸಿತ್ತು. ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅದಕ್ಕೆ ನಿರ್ಜಲೀಕರಣವಿದ್ದು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿತ್ತು ಎಂದು ತಿಳಿದು ಬಂದಿದೆ.ರಕ್ತ ಪರೀಕ್ಷೆ ನಡೆಸಿದಾಗ ಅದರ ಕ್ರಿಯೇಟಿನೈನ್ ಮಟ್ಟವು ತುಂಬಾ ಹೆಚ್ಚಾಗಿದೆ ಎಂದು ತಿಳಿದುಬಂದಿದೆ, ಇದು ಮೂತ್ರಪಿಂಡದಲ್ಲಿ ಸೋಂಕನ್ನು ಸೂಚಿಸುತ್ತದೆ. ಉದ್ಯಾನದಲ್ಲಿರುವ ಇತರ ಚೀತಾಗಳು ಆರೋಗ್ಯವಾಗಿವೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾದ ಚೀತಾಗಳ ಮೊದಲ ಬ್ಯಾಚ್‌ನ ಭಾಗವಾಗಿದ್ದ ಸಾಶಾ, ಕಳೆದ ವರ್ಷ ನಮೀಬಿಯಾದಿಂದ ಬಂದ ಐದು ಹೆಣ್ಣು ಚೀತಾಗಳ ಪೈಕಿ ಒಂದಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮದಿನದಂದು ಕುನೋದಲ್ಲಿ ಬಿಡುಗಡೆ ಮಾಡಿದ ಐದು ವರ್ಷದ ಎರಡು ಹೆಣ್ಣು ಚೀತಾಗಳಲ್ಲಿ ಸಾಶಾ ಕೂಡಾ ಒಂದಾಗಿದೆ.

ಕಳೆದ ವಾರ ಎಲ್ಟನ್ ಮತ್ತು ಫ್ರೆಡ್ಡಿ ಎಂಬ ಚೀತಾಗಳನ್ನು ಮಧ್ಯಪ್ರದೇಶದಲ್ಲಿ ಕಾಡಿಗೆ ಬಿಡಲಾಗಿತ್ತು. ಅದರೊಂದಿಗೆ, ನಮೀಬಿಯಾದಿಂದ ತರಲಾದ ಎಂಟು ಚೀತಾಗಳ ಪೈಕಿ ನಾಲ್ಕನ್ನು ಶಿಯೋಪುರ್ ಜಿಲ್ಲೆಯ ಉದ್ಯಾನವನದಲ್ಲಿ  ಬಿಡಲಾಗಿದೆ.

ಇದನ್ನೂ ಓದಿ:ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟಿಸಿದ 16 ಕಾಂಗ್ರೆಸ್ ಶಾಸಕರು ಗುಜರಾತ್ ವಿಧಾನಸಭೆಯಿಂದ ಅಮಾನತು

ಕಳೆದ ವರ್ಷ ನವೆಂಬರ್‌ನಲ್ಲಿ ಅವುಗಳನ್ನು ಮೊದಲ ಬಾರಿಗೆ ಕ್ವಾರಂಟೈನ್ ಬೊಮಾಸ್ (ಪ್ರಾಣಿ ಆವರಣಗಳು) ನಿಂದ ಅರಣ್ಯದ ಆವರಣಗಳಿಗೆ ಸ್ಥಳಾಂತರಿಸಲಾಯಿತು.ನಂತರ ಅವುಗಳನ್ನು ಉದ್ಯಾನದ ಬೇಟೆಯ ಆವರಣಗಳಿಗೆ ಬಿಡುಗಡೆ ಮಾಡಲಾಯಿತು. ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಈ ವರ್ಷ ಫೆಬ್ರವರಿ 18 ರಂದು ದಕ್ಷಿಣ ಆಫ್ರಿಕಾದಿಂದ ಕೆಎನ್‌ಪಿಗೆ ತರಲಾಯಿತು. ಕೆಎನ್‌ಪಿಯಲ್ಲಿ ಈಗ 20 ಚೀತಾಗಳಿವೆ. ಮುಂದಿನ ದಶಕದಲ್ಲಿ ಏಷ್ಯಾದ ದೇಶಕ್ಕೆ ಹೆಚ್ಚಿನ ಆಫ್ರಿಕನ್ ಚೀತಾಗಳನ್ನು ಪರಿಚಯಿಸಲು ದಕ್ಷಿಣ ಆಫ್ರಿಕಾವು ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ