ನಾನಾ ಪಟೋಲೆ ಪಾದ ತೊಳೆಯುವ ವಿಡಿಯೋ ವೈರಲ್: ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ

ಮಹಾರಾಷ್ಟ್ರ (Maharashtra)ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ನಾನಾ ಪಟೋಲೆ (Nana Patole) ಅವರ ಪಾದಗಳನ್ನು ಇಬ್ಬರು ವ್ಯಕ್ತಿಗಳು ತೊಳೆದು ಹೂವುಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಬಿಜೆಪಿ ಇದೇ ಕಾಂಗ್ರೆಸ್ ಸಂಸ್ಕೃತಿ ಎಂದು ಲೇವಡಿ ಮಾಡಿದ್ದರೆ, ನಾನಾ ಪಟೋಲೆ ಅವರು ಬಿಜೆಪಿಯ ಆಪಾದನೆಗಳನ್ನು ತಳ್ಳಿಹಾಕಿದ್ದಾರೆ. ವಿಡಿಯೋದಲ್ಲಿ ನಾನಾ ಪಟೋಲೆ ಅವರು ಸೋಫಾದಲ್ಲಿ ಕುಳಿತಿದ್ದು, ಇಬ್ಬರು ಯುವಕರು ಅವರ ಪಾದಗಳನ್ನು ತೊಳೆದು, ಪಾದಗಳ ಮೇಲೆ ಹೂವುಗಳು ಮತ್ತು ಹಣ್ಣುಗಳನ್ನಿಟ್ಟು ಸಾಂಪ್ರದಾಯಿಕವಾಗಿ ಗುರು ಪೂಜೆ ಮಾಡುತ್ತಿರುವುದು ಕಂಡುಬಂದಿದೆ.

ನಾನಾ ಪಟೋಲೆ ಪಾದ ತೊಳೆಯುವ ವಿಡಿಯೋ ವೈರಲ್: ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕಾಂಗ್ರೆಸ್ ನಾಯಕ
ನಾನಾ ಪಟೋಲೆ

Updated on: Aug 03, 2026 | 10:21 AM

ಮುಂಬೈ, ಆಗಸ್ಟ್​ 03: ಮಹಾರಾಷ್ಟ್ರ (Maharashtra)ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ನಾನಾ ಪಟೋಲೆ (Nana Patole) ಅವರ ಪಾದಗಳನ್ನು ಇಬ್ಬರು ವ್ಯಕ್ತಿಗಳು ತೊಳೆದು ಹೂವುಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಬಿಜೆಪಿ ಇದೇ ಕಾಂಗ್ರೆಸ್ ಸಂಸ್ಕೃತಿ ಎಂದು ಲೇವಡಿ ಮಾಡಿದ್ದರೆ, ನಾನಾ ಪಟೋಲೆ ಅವರು ಬಿಜೆಪಿಯ ಆಪಾದನೆಗಳನ್ನು ತಳ್ಳಿಹಾಕಿದ್ದಾರೆ.

ವಿಡಿಯೋದಲ್ಲಿ ನಾನಾ ಪಟೋಲೆ ಅವರು ಸೋಫಾದಲ್ಲಿ ಕುಳಿತಿದ್ದು, ಇಬ್ಬರು ಯುವಕರು ಅವರ ಪಾದಗಳನ್ನು ತೊಳೆದು, ಪಾದಗಳ ಮೇಲೆ ಹೂವುಗಳು ಮತ್ತು ಹಣ್ಣುಗಳನ್ನಿಟ್ಟು ಸಾಂಪ್ರದಾಯಿಕವಾಗಿ ಗುರು ಪೂಜೆ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಬಹಿರಂಗಗೊಳ್ಳುತ್ತಿದ್ದಂತೆಯೇ ನೆಟ್ಟಿಗರು ಹಾಗೂ ಬಿಜೆಪಿ ನಾಯಕರು ಪಟೋಲೆ ಅವರ ವಿರುದ್ಧ ‘ವಿಐಪಿ ಸಂಸ್ಕೃತಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸಚಿವ ಚಂದ್ರಶೇಖರ್ ಬಾವಂಕುಳೆ ಅವರು ವಿಡಿಯೋ ಕುರಿತು ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್ ನಾಯಕರ ನೈಜ ಸಂಸ್ಕೃತಿಯನ್ನು ತೋರಿಸುತ್ತದೆ. ಇಂತಹ ಘಟನೆಗಳಿಂದ ಅವರು ಪಾಠ ಕಲಿಯಬೇಕಿತ್ತು. ಸಾರ್ವಜನಿಕವಾಗಿ ನಕಾರಾತ್ಮಕ ಪ್ರಚಾರ ತಂದುಕೊಡುವ ಇಂತಹ ಅಭ್ಯಾಸಗಳಲ್ಲಿ ತೊಡಗಿಕೊಳ್ಳುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ

ವಿವಾದದ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ, ಬಿಜೆಪಿಯ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ: ಅದು ಗುರು ಪೂರ್ಣಿಮೆಯ ದಿನವಾಗಿತ್ತು. ನನ್ನ ಕುಟುಂಬದ ಇಬ್ಬರು ಕಿರಿಯ ಸದಸ್ಯರು ನನ್ನನ್ನು ತಮ್ಮ ‘ಗುರು’ ಎಂದು ಭಾವಿಸಿ ಗೌರವದ ಸಂಕೇತವಾಗಿ ಪಾದ ಪೂಜೆ ಮಾಡಲು ಬಯಸಿದ್ದರು. ಇದನ್ನು ಮಾಡಲು ನಾನು ಯಾರನ್ನೂ ಬಲವಂತಪಡಿಸಿಲ್ಲ ಎಂದು ಹೇಳಿದ್ದಾರೆ.

ವಿಡಿಯೋ

ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ನಮಗೆ ಉಪದೇಶ ನೀಡುವ ಹಕ್ಕು ಬಿಜೆಪಿಗೆ ಇಲ್ಲ. ಶ್ರೀರಾಮ ಮಂದಿರದ ದೇಣಿಗೆಯಲ್ಲೇ ಅಕ್ರಮ ಎಸಗಿರುವವರಿಗೆ ನಮಗೆ ಸಲಹೆ ನೀಡುವ ಅರ್ಹತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಮುಂಬರುವ ಸಾಲು ಸಾಲು ಚುನಾವಣಾ ಕಣ ಕಾವೇರುತ್ತಿರುವ ಬೆನ್ನಲ್ಲೇ, ನಾನಾ ಪಟೋಲೆ ಅವರ ಈ ವಿಡಿಯೋವನ್ನು ಬಿಜೆಪಿ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ವಿಡಿಯೋದಲ್ಲಿದ್ದ ಕಾರ್ಯಕರ್ತರು ಅನಿಲ್ ಪಾಟೀಲ್ ಚಿಮೇಗಾಂವ್ಕರ್ ಮತ್ತು ಮಾಧವರಾವ್ ಪವಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪಟೋಲೆ ಅವರು ಪಾದ ತೊಳೆಯಲು ಕೇಳಿರಲಿಲ್ಲ, ತಾವೇ ಸ್ವತಃ ನಂಬಿಕೆಯಿಂದ ಪಾದ ಪೂಜೆ ಮಾಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us