AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

LPG tanker Nanda Devi arrives to India from Hormuz Strait: ಇರಾನ್ ಯುದ್ಧದಿಂದ ಸ್ಥಗಿತಗೊಂಡಿರುವ ಹಾರ್ಮುಜ್ ಜಲಸಂಧಿಯಿಂದ ಮೂರು ಗ್ಯಾಸ್ ಟ್ಯಾಂಕರ್​ಗಳನ್ನು ತರಿಸಲು ಭಾರತ ಯಶಸ್ವಿಯಾಗಿದೆ. ಈ ಮೂರು ಟ್ಯಾಂಕರ್​ಗಳ ಪೈಕಿ ಎರಡು ಹಡಗುಗಳು ಭಾರತವನ್ನು ತಲುಪಿವೆ. ಸೋಮವಾರ ಶಿವಾಲಿಕ್ ಹಡಗು ಮುಂದ್ರಾ ಪೋರ್ಟ್​ಗೆ ಬಂದು ನಿಂತಿತ್ತು. ಇವತ್ತು ಮಂಗಳವಾರ ನಂದಾದೇವಿ ಬಂದಿದೆ. ನಾಳೆ ಅಥವಾ ನಾಳಿದ್ದು ಮೂರನೇ ಹಡಗು ಬರಲಿದೆ.

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ
ನಂದಾದೇವಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 17, 2026 | 12:57 PM

Share

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು.

ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ ಮೂರು ಭಾರತೀಯ ಟ್ಯಾಂಕರ್​ಗಳಿಗೆ ಸಾಗಲು ಅನುಮತಿಸಿದೆ. ಶಿವಾಲಿಕ್ ಎನ್ನುವ ಹಡಗು ನಿನ್ನೆ ಗುಜರಾತ್​ನ ಮುಂದ್ರಾ ಪೋರ್ಟ್ ತಲುಪಿದೆ. ಅದು ಸುಮಾರು 45,000 ಟನ್ ಎಲ್​ಪಿಜಿ ಗ್ಯಾಸ್ ಹೊತ್ತು ಬಂದಿದೆ. ಇವತ್ತು ನಂದಾದೇವಿ ಹಡಗು ಆಗಮಿಸಿದೆ. ಇಲ್ಲಿಗೆ ಎರಡು ಹಡಗುಗಳು ಭಾರತದ ತೀರವನ್ನು ತಲುಪಿದಂತಾಗಿದೆ. ಇನ್ನೊಂದು ಹಡಗು ಒಂದೆರಡು ದಿನದಲ್ಲಿ ತಲುಪುವ ನಿರೀಕ್ಷೆ ಇದೆ. ಜಗ್ ಲಾಡ್ಕಿ ಎನ್ನುವ ಈ ಹಡಗು ಕೂಡ ಮುಂದ್ರಾ ಪೋರ್ಟ್​ಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಶೆಲ್ ಪೆಟ್ರೋಲ್ ಬೆಲೆ 10 ದಿನದಲ್ಲಿ 4.50 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಹಾರ್ಮುಜ್ ಜಲಸಂಧಿಯಲ್ಲಿ ಇನ್ನೂ 22 ಭಾರತೀಯ ಹಡಗುಗಳು ಅನುಮತಿಗಾಗಿ ಕಾದು ನಿಂತಿವೆ. ಈ 22 ಹಡಗುಗಳಲ್ಲಿ 611 ಭಾರತೀಯ ನಾವಿಕರಿದ್ದಾರೆ ಎಂದು ಸರ್ಕಾರದ ದತ್ತಾಂಶ ಹೇಳುತ್ತಿದೆ. ಈಗ ಒಂದೊಂದೇ ಹಡಗನ್ನು ಹೊರತರಿಸಲು ಭಾರತ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಇರಾನ್​ನ ಮನವೊಲಿಸುವ ಪ್ರಯತ್ನಗಳಾಗುತ್ತಿವೆ.

ಎಲ್​ಪಿಜಿ ಬಿಕ್ಕಟ್ಟಿನಲ್ಲಿ ಭಾರತ

ಹಾರ್ಮುಜ್ ಜಲಸಂಧಿ ನಿರ್ಬಂಧಿತವಾಗಿರುವುದರಿಂದ ಜಾಗತಿಕವಾಗಿ ತೈಲ ಮತ್ತು ಅನಿಲಗಳ ಬೆಲೆ ಗಗನಕ್ಕೇರಿದೆ. ಎರಡೂ ಪೂರೈಕೆಗಳಿಗೆ ವ್ಯತ್ಯಯ ಆಗಿದೆ. ಭಾರತಕ್ಕೆ ಪೆಟ್ರೋಲ್, ಡೀಸಲ್​ಗಿಂತ ಎಲ್​ಪಿಜಿ ಬಿಕ್ಕಟ್ಟು ಹೆಚ್ಚು ತೀವ್ರತೆಯಲ್ಲಿದೆ. ಭಾರತ ಆಮದು ಮಾಡಿಕೊಳ್ಳುವ ಎಲ್​ಪಿಜಿಯಲ್ಲಿ ಬಹುತೇಕ ಭಾಗವು ಹಾರ್ಮುಜ್ ಜಲಸಂಧಿ ಮೂಲಕ ಸಾಗಣೆ ಆಗುತ್ತದೆ. ಹೀಗಾಗಿ, ಎಲ್​ಪಿಜಿ ಬಿಕ್ಕಟ್ಟು ಹೆಚ್ಚಾಗಿದೆ.

ಇದನ್ನೂ ನೋಡಿ: ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ ಎಲ್‌ಪಿಜಿ ಟ್ಯಾಂಕರ್

ಭಾರತವು ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ನೈಸರ್ಗಿಕ ಅನಿಲದಲ್ಲಿ ಅರ್ಧದಷ್ಟನ್ನು ದೇಶೀಯವಾಗಿ ಉತ್ಪಾದಿಸಲಾಗುತ್ತಿದೆ. ಉಳಿದ ಅರ್ಧವನ್ನು ಬೇರೆ ಬೇರೆ ಭಾಗಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಆದರೆ, ಎಲ್​ಪಿಜಿ ಗ್ಯಾಸ್​ಗೆ ಗಲ್ಫ್ ಮೇಲೆ ಅವಲಂಬನೆ ಹೆಚ್ಚಿರುವುದು ಭಾರತಕ್ಕೆ ಸ್ವಲ್ಪ ಇಕ್ಕಟ್ಟಿನ ಸ್ಥಿತಿ ತಂದಿರುವುದು ಹೌದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?