AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು, 215 ಮಂದಿಗೆ ಕೊರೊನಾ

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ. ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ […]

ಪಂಜಾಬ್​ಗೆ ವಾಪಸಾದ ಸಾವಿರಾರು ಸಿಖ್ ಯಾತ್ರಾರ್ಥಿಗಳು,  215 ಮಂದಿಗೆ ಕೊರೊನಾ
ಸಾಧು ಶ್ರೀನಾಥ್​
|

Updated on:May 02, 2020 | 2:30 PM

Share

ಪಂಜಾಬ್: ಮಹಾರಾಷ್ಟ್ರದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಾವಿರಾರು ಯಾತ್ರಾರ್ಥಿಗಳು ಪಂಜಾಬ್​ಗೆ ವಾಪಸ್ ಬಂದಿದ್ದಾರೆ. ಆದ್ರೆ ಇವರ ಪೈಕಿ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಆತಂಕಕಾರಿ ಅಂಶ ಬಯಲಾಗಿದೆ.

ನಾಂದೇಡ್​ನಿಂದ ಪಂಜಾಬ್​ಗೆ ಬರೋಬ್ಬರಿ 3,500 ಮಂದಿ ಯಾತ್ರಾರ್ಥಿಗಳು ಮರಳಿಬಂದಿದ್ದಾರೆ. ಇವರ ಪೈಕಿ 215 ಯಾತ್ರಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದೆ. ದೀಢೀರ್ ಲಾಕ್ ಡೌನ್ ಘೋಷಣೆಯಿಂದ ನಾಂದೇಡ್​ನ ಹಜೂರ್ ಸಾಹೀಬ್ ಗುರುದ್ವಾರದಲ್ಲಿ‌ಯೇ ಸಿಲುಕಿದ್ದರು. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ವಿಶೇಷ ಬಸ್ ಕಳಿಸಿ ಅಷ್ಟೂ ಮಂದಿಯನ್ನು ವಾಪಸ್ ಕರೆಸಿಕೊಂಡಿದ್ದರು. ಹೀಗೆ ಪಂಜಾಬ್​ಗೆ ವಾಪಸ್ ಬಂದವರ ಪೈಕಿ ಇದುವರೆಗೂ 215 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ರಾಜ್ಯ ಸರ್ಕಾರ ವಾಪಸ್ ಬಂದ ಎಲ್ಲರಿಗೂ 21 ದಿನ‌ ಕ್ವಾರೇಂಟೈನ್ ಗೆ ಒಳಪಡಿಸಿದೆ.

ಇದೀಗ, ನಾಂದೇಡ್ ಗುರುದ್ವಾರ ಯಾತ್ರಾರ್ಥಿಗಳಿಂದ ನಾಲ್ಕು ರಾಜ್ಯಗಳಿಗೆ ಚಿಂತೆ ಶುರುವಾಗಿದೆ. ಹರಿಯಾಣ, ಉತ್ತರಪ್ರದೇಶ, ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ನಾಂದೇಡ್ ಗುರುದ್ವಾರವನ್ನು ಸೀಲ್ ಮಾಡಿದೆ.

Published On - 2:28 pm, Sat, 2 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್