AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಹೊಸ ಜೀವನ ಶುರು ಮಾಡಿದ ಅಸ್ಸಾಂ ಮುಖ್ಯಮಂತ್ರಿ ಪುತ್ರ; ಹೆಮ್ಮೆಯಿಂದ ಫೋಟೋ ಹಂಚಿಕೊಂಡ ಹಿಮಂತ ಬಿಸ್ವಾ ಶರ್ಮಾ

ನನ್ನ ಮಗ ನನ್ನನ್ನು ಹಿಂಬಾಲಿಸಿ ರಾಜಕೀಯಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂದು ಹಿಮಂತ ಬಿಸ್ವಾ ಶರ್ಮಾ ಈಗಾಗಲೇ ಹೇಳಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ನಂದಿಲ್​ ರಾಜಕೀಯದಿಂದ ದೂರವೇ ಉಳಿಯಬೇಕು ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಲ್ಲಿ ಹೊಸ ಜೀವನ ಶುರು ಮಾಡಿದ ಅಸ್ಸಾಂ ಮುಖ್ಯಮಂತ್ರಿ ಪುತ್ರ; ಹೆಮ್ಮೆಯಿಂದ ಫೋಟೋ ಹಂಚಿಕೊಂಡ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಸಿಎಂ ಕುಟುಂಬ
TV9 Web
| Edited By: |

Updated on:Nov 01, 2021 | 4:34 PM

Share

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Assam Chief Minister Himanta Biswa Sarma) ಪುತ್ರ ನಂದಿಲ್​ ಬಿಸ್ವಾ ಶರ್ಮಾ (Nandil Biswa Sarma) ಬೆಂಗಳೂರಿನ  ನ್ಯಾಷನಲ್​ ಲಾ ಸ್ಕೂಲ್​ ಆಫ್​ ಇಂಡಿಯಾ ಯೂನಿವರ್ಸಿಟಿ(NLSIU ಅಥವಾ NLS)ಗೆ ಸೇರ್ಪಡೆಯಾಗಿದ್ದಾರೆ.  ಪುತ್ರ ನಂದಿಲ್​ರನ್ನು ಈ ರಾಷ್ಟ್ರೀಯ ಕಾನೂನು ಶಾಲೆಯ ಹಾಸ್ಟೆಲ್​​ಗೆ ಸೇರಿಸಿರುವ ಹಿಮಂತ ಬಿಸ್ವಾ ಶರ್ಮಾ, ಭಾನುವಾರ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋದಲ್ಲಿ ಹಿಮಂತ್​ ಬಿಸ್ವಾ ಶರ್ಮಾರ ಪತ್ನಿ ರಿನಿಕಿ ಭುಯಾನ್ ಶರ್ಮಾ ಮತ್ತು ಮಗಳು ಸುಕನ್ಯಾ ಕೂಡ ಇದ್ದಾರೆ. ನಂದಿಲ್​ ಇಂದಿನಿಂದ ಹಾಸ್ಟೆಲ್​​ನಲ್ಲಿ ತನ್ನ ಹೊಸ ಜೀವನ ಶುರು ಮಾಡುತ್ತಿದ್ದಾನೆ. ನಮ್ಮ ಸಂಪೂರ್ಣ ಆಶೀರ್ವಾದದೊಂದಿಗೆ ಅವನನ್ನು ಇಲ್ಲಿ ಬಿಟ್ಟು ತೆರಳುತ್ತಿದ್ದೇವೆ ಎಂದು ಹೇಳಿದ್ದಾರೆ. 

ನಂದಿಲ್​ ಶರ್ಮಾ 2019ರಲ್ಲಿ ಪ್ರತಿಷ್ಠಿತ ಡೂನ್​ ಶಾಲೆಯಲ್ಲಿ ಪದವಿ ಓದಿದ್ದಾರೆ. ಡೂನ್​ ಸ್ಕೂಲ್​​ನಲ್ಲಿ ಅವರು ಕ್ಯಾಪ್ಟನ್​ ಕೂಡ ಆಗಿದ್ದರು. ಅವರು ಪದವಿ ದಿನಗಳಲ್ಲಿ ಮಾತನಾಡಿದ ವಿಡಿಯೋವನ್ನು ಕೂಡ ಹಿಮಂತ್​ ಬಿಸ್ವಾ ಶರ್ಮಾ ಶೇರ್​ ಮಾಡಿದ್ದಾರೆ.  ಅದರಲ್ಲಿ ಅವರು ತಮ್ಮ ಬಾಲ್ಯದ ದಿನಗಳ ಬಗ್ಗೆ ಮಾತನಾಡಿದ್ದಾರೆ. ನಾನು ಚಿಕ್ಕವನಿದ್ದಾಗ ಮನೆಯಿಂದ ಹೊರಬರಲೇ ಹೆದರುತ್ತಿದ್ದೆ..ಆಗಿನಿಂದ ಶಾಲಾ ಕ್ಯಾಪ್ಟನ್​ ಆಗುವವರೆಗೆ ತಮ್ಮ ಪ್ರಯಾಣ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ.  ಇದೀಗ ಮಗನನ್ನು ಹಾಸ್ಟೆಲ್​ ರೂಮ್​​ನಲ್ಲಿ ಬಿಟ್ಟ ಫೋಟೋವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಂಚಿಕೊಳ್ಳುತ್ತಿದ್ದಂತೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅನೇಕರು ವಿಶ್​ ಮಾಡಿ, ಒಳಿತಾಗಲಿ ಎಂದು ಹಾರೈಸಿದ್ದಾರೆ.

ಇನ್ನು ನನ್ನ ಮಗ ನನ್ನನ್ನು ಹಿಂಬಾಲಿಸಿ ರಾಜಕೀಯಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂದು ಹಿಮಂತ ಬಿಸ್ವಾ ಶರ್ಮಾ ಈಗಾಗಲೇ ಹೇಳಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ನಂದಿಲ್​ ರಾಜಕೀಯದಿಂದ ದೂರವೇ ಉಳಿಯಬೇಕು. ಅದು ಅವನಿಗೇ ಒಳ್ಳೆಯದು. ಈ ಜಗತ್ತಿಗೆ ಅವನು ಬೇಡ..ಇಲ್ಲಿನ ಸವಾಲುಗಳನ್ನು ಅವನೂ ಎದುರಿಸುವುದೂ ಬೇಡ.  ಅಷ್ಟಕ್ಕೂ ಇಲ್ಲಿನ ಕಷ್ಟಗಳನ್ನು ಅವರು ಸಹಿಸುವಷ್ಟು ಸಮರ್ಥರು ಆಗಿದ್ದಾರೆ ಎಂಬ ನಂಬಿಕೆಯೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಮಗೆ ಹಿರಿಯರು, ಆದ್ರೆ ಹೋರಾಟ ಇನ್ನೂ ಯುವಕರಂತೆ: ವಾಟಾಳ್ ನಾಗರಾಜ್​ರನ್ನು ಹೊಗಳಿದ ಸಿಎಂ ಬೊಮ್ಮಾಯಿ

ನವಾಬ್​ ಮಲಿಕ್​ ಬಗ್ಗೆ ಸ್ಫೋಟಕ ವಿಷಯ ಬಹಿರಂಗ ಮಾಡ್ತೇನೆ; ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಎಚ್ಚರಿಕೆ

Published On - 4:31 pm, Mon, 1 November 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ