AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ; ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ

Narendra Modi @ Varanasi: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 17ರಂದು ವಾರಾಣಸಿಗೆ ಭೇಟಿ ನೀಡಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ನರೇಂದ್ರ ಮೋದಿ ಅವರಿಗೆ ಕಾಶಿ ಜನರು ಭವ್ಯ ಸ್ವಾಗತ ನೀಡಿದ್ದಾರೆ. ವಿಕಸಿತ್ ಯಾತ್ರೆಯಲ್ಲಿ ಪ್ರಧಾನಿ ಜೊತೆ ಉ.ಪ್ರ. ಸಿಎಂ ಭಾಗಿಯಾದರು. ಇಂದು ಮತ್ತು ನಾಳೆ ಪ್ರಧಾನಿಗಳು ತಮ್ಮ ಸ್ವಕ್ಷೇತ್ರವಾದ ವಾರಾಣಸಿಯಲ್ಲಿ ಎರಡು ದಿನ ಭೇಟಿಯಲ್ಲಿದ್ದಾರೆ.

ವಾರಾಣಸಿಯಲ್ಲಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ; ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ
ನರೇಂದ್ರ ಮೋದಿಗೆ ವಾರಾಣಸಿಯಲ್ಲಿ ಸ್ವಾಗತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 17, 2023 | 7:30 PM

Share

ವಾರಾಣಸಿ, ಡಿಸೆಂಬರ್ 17: ಗುಜರಾತ್​ನಲ್ಲಿ ಸೂರತ್​ನಲ್ಲಿ ಡೈಮಂಡ್ ಬೋರ್ಸ್ ಉದ್ಘಾಟನೆ ಬಳಿಕ ವಾರಾಣಸಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ (Narendra Modi Varanasi visit) ಭವ್ಯವಾದ ಸ್ವಾಗತ ಸಿಕ್ಕಿತು. ವಿಮಾನ ನಿಲ್ದಾಣದಿಂದ ನಗರದವರೆಗೂ ಪ್ರಧಾನಿ ರೋಡ್ ಶೋ ನಡೆಯಿತು. ನರೇಂದ್ರ ಮೋದಿ ಹಾದಿಯುದ್ಧಕ್ಕೂ ಜನರು ಪುಷ್ಪಾರ್ಚಣೆ ಮಾಡಿ ಸ್ವಾಗತಿಸಿದರು. ತಮ್ಮ ಸ್ವಕ್ಷೇತ್ರವೂ ಆದ ವಾರಾಣಸಿಯಲ್ಲಿ ಪ್ರಧಾನಿ ಎರಡು ದಿನದ ಭೇಟಿಯಲ್ಲಿದ್ದಾರೆ. ಈ ವೇಳೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಿ ಪಾಲ್ಗೊಂಡರು.

ವಾರಾಣಸಿಯ ಕಟಿಂಗ್ ಮೆಮೋರಿಯಲ್ ಇಂಟರ್ ಕಾಲೇಜಿನಲ್ಲಿ ನಡೆದ ಯಾತ್ರೆಯ ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಈ ಯಾತ್ರೆಯ ಯಶಸ್ಸಿಗೆ ಕಾರಣವಾಗಿರುವ ಎಲ್ಲಾ ಜನರಿಗೂ ಧನ್ಯವಾದ ಹೇಳಿದರು.

ಇದನ್ನೂ ಓದಿ: ಭಾರತ-ಪಾಕಿಸ್ತಾನ 1971ರ ಯುದ್ಧ ಚೆಸ್ ಆಟದಂತಿತ್ತಾ? ಭಾರತದ ಆ ಒಂದು ನಡೆಗೆ 93,000 ಪಾಕ್ ಸೈನಿಕರು ಶರಣಾಗತಿ; ಯಾವುದದು ನಡೆ?

‘ನಮ್ಮ ದೇಶದಲ್ಲಿ ಹಲವು ಸರ್ಕಾರಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನನ್ನ ಅನುಭವದ ಪ್ರಕಾರ, ಬಹಳ ಮುಖ್ಯವಾದ ಸಂಗತಿ ಎಂದರೆ, ಸರ್ಕಾರೀ ಯೋಜನೆಗಳು ಸರಿಯಾದ ಸಮಯಕ್ಕೆ ಜನರನ್ನು ಯಾವ ತಡೆ ಇಲ್ಲದೇ ತಲುಪುವುದಾಗಿದೆ’ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಇನ್ನೂ ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಕಾಶಿ ತಮಿಳ್ ಸಂಗಮಮ್ 2023ಯ ಎರಡನೇ ಹಂತದ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: ಗುಜರಾತ್​ನಲ್ಲಿ ವಿಶ್ವದ ಅತಿದೊಡ್ಡ ವಜ್ರ ವ್ಯಾಪಾರ ಕೇಂದ್ರ ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ; ಡೈಮಂಡ್ ಬೋರ್ಸ್ ಬಗ್ಗೆ ತಿಳಿಯಬೇಕಾದ ಸಂಗತಿಗಳು

ನಾಳೆ ಸೋಮವಾರ (ಡಿ. 18) ಸರ್ವವೇದ ಮಹಾಮಂದಿರಕ್ಕೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 20,000 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅವರು ಅಡಿಗಲ್ಲು ಹ ಆಕಲಿದ್ದಾರೆ. ವಾರಾಣಸಿಯಿಂದ ಇನ್ನೊದು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲನೆ ಕೊಡಲಿದ್ದಾರೆ. ಕನ್ಯಾಕುಮಾರಿ ವಾರಾಣಸಿ ತಮಿಳ್ ಸಂಗಮಮ್ ರೈಲನ್ನೂ ಉದ್ಘಾಟಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Sun, 17 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ