ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು?

ಮೂರು ಕೃಷಿ ಕಾನೂನುಗಳನ್ನು ಕಾರ್ಯಗತಗೊಳಿಸಲಾಗಿಲ್ಲ, ಆದರೆ ಅವು ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿವೆ, ಅದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಹಾಗಾಗಿ ಅವುಗಳನ್ನು ಸಂಸತ್ತಿನಲ್ಲಿ ಮಾತ್ರ ರದ್ದುಗೊಳಿಸಬಹುದು ಎಂದು ಮಲ್ಹೋತ್ರಾ ಹೇಳಿದರು.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು?
ರೈತರ ಪ್ರತಿಭಟನೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Nov 19, 2021 | 1:47 PM

ಒಂದು ವರ್ಷಗಳ ಕಾಲ ನಡೆದ  ಪ್ರತಿಭಟನೆಗಳ ನಂತರ ನವೆಂಬರ್ 19ರ ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್‌ನಲ್ಲಿ ಪ್ರಾರಂಭವಾಗಲಿರುವ ಚಳಿಗಾಲದ ಸಂಸತ್ತಿನ ಅಧಿವೇಶನದಲ್ಲಿ(Parliament session) ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು(farm laws)  ರದ್ದುಗೊಳಿಸಲಾಗುವುದು ಎಂದು ಘೋಷಿಸಿದರು. ಈ ಕಾನೂನುಗಳನ್ನು ಹಿಂಪಡೆಯುವುದು ಸೆಪ್ಟೆಂಬರ್ 2020 ರಲ್ಲಿ ಆಂದೋಲನವನ್ನು ಪ್ರಾರಂಭಿಸಿದ ಪ್ರತಿಭಟನಾಕಾರರ ಪ್ರಾಥಮಿಕ ಬೇಡಿಕೆಯಾಗಿತ್ತು. ಈಗ ಘೋಷಣೆಯನ್ನು ಮಾಡಲಾಗಿದೆ ಕಾನೂನುಗಳನ್ನು ರದ್ದುಗೊಳಿಸಲು ಯಾವ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು? ಎಂಬುದು ಮುಂದಿನ ಪ್ರಶ್ನೆ. ಕಾನೂನು ತಜ್ಞರ ಪ್ರಕಾರ, ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕು. “ರದ್ದತಿ ಮಾಡಲು ಸಂಸತ್ತಿನ ಅಧಿಕಾರವು ಸಂವಿಧಾನದ ಅಡಿಯಲ್ಲಿ ಕಾನೂನನ್ನು ಜಾರಿಗೊಳಿಸುವಂತೆಯೇ ಇರುತ್ತದೆ” ಎಂದು ಕೇಂದ್ರದ ಮಾಜಿ ಕಾನೂನು ಕಾರ್ಯದರ್ಶಿ ಪಿಕೆ ಮಲ್ಹೋತ್ರಾ (PK Malhotra) ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ರದ್ದುಗೊಳಿಸುವ ಒಂದೇ ಮಸೂದೆಯ ಮೂಲಕ ಸರ್ಕಾರವು ಮೂರು ಕಾನೂನುಗಳನ್ನು ರದ್ದುಗೊಳಿಸಬಹುದು ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರ್ಯ ಹೇಳಿದರು. ಮಸೂದೆಯ ಲಕ್ಷ್ಯ ಮತ್ತು ಕಾರಣಗಳ ಹೇಳಿಕೆಯಲ್ಲಿ, ಸರ್ಕಾರವು ಮೂರು ಕಾನೂನುಗಳನ್ನು ರದ್ದುಗೊಳಿಸಲು ಉದ್ದೇಶಿಸಿರುವ ಕಾರಣಗಳನ್ನು ಉಲ್ಲೇಖಿಸಬಹುದು ಎಂದು ಅವರು ಹೇಳಿದರು. “ರದ್ದತಿ ಮಸೂದೆಯನ್ನು ಅಂಗೀಕರಿಸಿದಾಗ ಅದು ಕೂಡಾ ಕಾನೂನು ಎಂದು ಪಿಕೆ ಮಲ್ಹೋತ್ರಾ ಹೇಳಿದರು.

ಮೂರು ಕೃಷಿ ಕಾನೂನುಗಳನ್ನು ಕಾರ್ಯಗತಗೊಳಿಸಲಾಗಿಲ್ಲ, ಆದರೆ ಅವು ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿವೆ, ಅದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಹಾಗಾಗಿ ಅವುಗಳನ್ನು ಸಂಸತ್ತಿನಲ್ಲಿ ಮಾತ್ರ ರದ್ದುಗೊಳಿಸಬಹುದು ಎಂದು ಮಲ್ಹೋತ್ರಾ ಹೇಳಿದರು.

ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾನೂನುಗಳು ರೈತರ ಹಿತದೃಷ್ಟಿಯಿಂದ ಇವೆ ಎಂದು ಹೇಳಿದ್ದು ದೇಶದ ಜನರ ಕ್ಷಮೆಯಾಚಿಸಿದರು, ಸರ್ಕಾರವು ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.

“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ನಾನು ನಿಮಗೆ ಹೇಳಲು ಬಂದಿದ್ದೇನೆ. ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳು- ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನೆ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ, 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ 2020. ಈ ಕಾಯ್ದೆಗಳನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಂಗೀಕರಿಸಿತು.

ಇದನ್ನೂ ಓದಿ: Farm Laws Timeline ಕೃಷಿ ಕಾನೂನು ಅಂಗೀಕಾರದಿಂದ ರದ್ದತಿ ನಿರ್ಧಾರವರೆಗೆ ಏನೆಲ್ಲಾ ನಡೆಯಿತು?

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ