AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ

ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ... ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಾವು ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ.

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Aug 30, 2024 | 5:41 PM

Share

ಮುಂಬೈ ಆಗಸ್ಟ್ 30:  ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ (Sindhudurg) ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ (Chhatrapati Shivaji Maharaj statue) ಉರುಳಿ ಬಿದ್ದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಕ್ಷಮೆಯಾಚಿಸಿದ್ದಾರೆ. 2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಮೋದಿ ಪಾಲ್ಘರ್‌ನಲ್ಲಿ ಹೇಳಿದ್ದಾರೆ

“ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ… ಇಂದು ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ನಾವು ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವ ಜನರಲ್ಲ. ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಆಗಸ್ಟ್ 26 ರಂದು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ವಿವಾದದ ನಡುವೆಯೇ ಪ್ರಧಾನಿಯವರ ಪ್ರತಿಕ್ರಿಯೆ ಬಂದಿದೆ.

ಕಡಲ ರಕ್ಷಣೆ ಮತ್ತು ಭದ್ರತೆಯಲ್ಲಿ ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಸಿಂಧುದುರ್ಗದಲ್ಲಿ ಮೊದಲ ಬಾರಿಗೆ ನಡೆದ ನೌಕಾಪಡೆಯ ದಿನಾಚರಣೆಯ ಅಂಗವಾಗಿ ಕಳೆದ ವರ್ಷ ಡಿಸೆಂಬರ್ 4 ರಂದು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಪ್ರತಿಮೆ ಉರುಳಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು.

ಪ್ರತಿಮೆ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

“ಇಡೀ ಮಹಾರಾಷ್ಟ್ರ ಮತ್ತು ಭಾರತದಲ್ಲಿ ಪೂಜಿಸಲ್ಪಡುವ ಛತ್ರಪತಿ ಶಿವಾಜಿ ಮಹಾರಾಜರನ್ನು ನಾವು “ಸಾರ್ವಜನಿಕರ ರಾಜ” ಎಂದು ಕರೆಯುತ್ತೇವೆ, ಅವರ ಪ್ರತಿಮೆಯನ್ನು ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದೆ, ಇದನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಮೊದಲನೆಯದಾಗಿ, ಅರಬ್ಬಿ ಸಮುದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವರು ಮಾಡಿದ ಭೂಮಿಪೂಜೆಯ ಬಗ್ಗೆ ನಾನು ಪ್ರಧಾನಿ ಮೋದಿ ಜಿ ಅವರನ್ನು ಕೇಳಲು ಬಯಸುತ್ತೇನೆ. ” ಎಂದು ಮುಂಬೈ ಕಾಂಗ್ರೆಸ್ ಮುಖ್ಯಸ್ಥೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಪಿಎಂ ಮೋದಿ ಭೇಟಿ ಮಾಡಿದ ಎನ್​ಬಿಎಫ್; ಅರ್ನಾಬ್ ಗೋಸ್ವಾಮಿ ನೇತೃತ್ವದ ನಿಯೋಗದಲ್ಲಿ ಟಿವಿ9 ಸಿಇಒ ಬರುನ್ ದಾಸ್ ಭಾಗಿ

“ಆ ಪ್ರತಿಮೆಯನ್ನು ಪೂರ್ಣಗೊಳಿಸುವ ಮೊದಲು, ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿನ ಅವರ ಪ್ರತಿಮೆ ಕೇವಲ 8 ತಿಂಗಳಲ್ಲಿ ಕುಸಿದಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ. ಮೋದಿ ಜೀ, ನೀವು ಯಾವಾಗ ಕ್ಷಮೆ ಕೇಳುತ್ತೀರಿ (ಮೋದಿ ಜಿ ಆಪ್ ಕಬ್ ಮಾಫಿ ಮಾಂಗೆಂಗೆ)?” ಎಂದು ಅವರು ಕೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Fri, 30 August 24

ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು