AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಆಸ್ತಿಪಾಸ್ತಿ ಕಬಳಿಸ್ತಾರೆ ಹುಷಾರ್..! ಕಾಂಗ್ರೆಸ್​ನ ಸಂಪತ್ತು ಮರುಹಂಚಿಕೆ ಯೋಜನೆ ವಿರುದ್ಧ ಪ್ರಧಾನಿ ಗುಡುಗು

Narendra Modi at Aligarh, UP: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇರುವ ಕೆಲ ಪ್ರಮುಖ ಭರವಸೆಗಳಲ್ಲಿ ಸಂಪತ್ತು ಮರುಹಂಚಿಕೆ ಒಂದು. ಶ್ರೀಮಂತರ ಬಳಿ ಇರುವ ಸಂಪತ್ತನ್ನು ತೆಗೆದು ಬಡವರಿಗೆ ಕೊಡುವ ಯೋಜನೆ ಎಂಬುದು ಮೇಲ್ನೋಟಕ್ಕೆ ತೋರುತ್ತದೆ. ಈ ವಿಚಾರವನ್ನು ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರಗಳಲ್ಲಿ ಅಸ್ತ್ರವಾಗಿ ಬಳಸಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಆಸ್ತಿಪಾಸ್ತಿ ಕಬಳಿಸುವ ಹುನ್ನಾರ ಎಂದು ಮೋದಿ ಎಚ್ಚರಿಸಿದ್ದಾರೆ.

ನಿಮ್ಮ ಆಸ್ತಿಪಾಸ್ತಿ ಕಬಳಿಸ್ತಾರೆ ಹುಷಾರ್..! ಕಾಂಗ್ರೆಸ್​ನ ಸಂಪತ್ತು ಮರುಹಂಚಿಕೆ ಯೋಜನೆ ವಿರುದ್ಧ ಪ್ರಧಾನಿ ಗುಡುಗು
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 22, 2024 | 5:07 PM

Share

ನವದೆಹಲಿ, ಏಪ್ರಿಲ್ 22: ಚುನಾವಣಾ ಪ್ರಣಾಳಿಕೆಯಲ್ಲಿ (Congress election manifesto) ಕಾಂಗ್ರೆಸ್ ಪಕ್ಷ ನೀಡಿದ್ದ ಸಂಪತ್ತು ಮರುಹಂಚಿಕೆಯ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗುಡುಗಿದ್ದಾರೆ. ಉತ್ತರಪ್ರದೇಶದ ಆಲಿಗಡ್​ನಲ್ಲಿ (aligarh) ಇಂದು ಸೋಮವಾರ ಚುನಾವಣಾ ಪ್ರಚಾರ ನಡೆಸಿದ ಮೋದಿ, ಈ ಜನರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು ಎಂದು ಪ್ರಧಾನಿಗಳು ಗುಡುಗಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕರೆ, ಈ ದೇಶದಲ್ಲಿ ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ಕೈಗೊಳ್ಳಲಾಗುವುದು. ಬಳಿಕ ಈ ಆಸ್ತಿಯನ್ನು ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ತಮ್ಮ ಚುನಾವಣಾ ಪ್ರಣಾಳಿಕಯ ಒಂದು ಅಂಶದ ಬಗ್ಗೆ ವಿವರಣೆ ನೀಡಿದ್ದರು. ಇದರ ಬಗ್ಗೆ ನರೇಂದ್ರ ಮೋದಿ ಮಾತನಾಡಿದ್ದಾರೆ.

‘ಅವರ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸುವುದಾಗಿ ಕಾಂಗ್ರೆಸ್​ನ ರಾಜಕುಮಾರ ಹೇಳುತ್ತಾರೆ. ನಿಮ್ಮಲ್ಲಿ ಪೂರ್ವಿಕರಿಂದ ಬಂದ ಮನೆ ಮತ್ತು ನಗರದಲ್ಲಿ ಒಂದು ಫ್ಲಾಟ್ ಇದ್ದರೆ ಅವೆರೆಡರಲ್ಲಿ ಒಂದನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತದೆ. ಇದು ಮಾವೋವಾದಿ ಕಮ್ಯೂನಿಸ್ಟರ ಚಿಂತನೆ. ಇದನ್ನು ಭಾರತದಲ್ಲಿ ಜಾರಿಗೊಳಿಸಲು ಹೊರಟಿದ್ದಾರೆ,’ ಎಂದು ನರೇಂದ್ರ ಮೋದಿ ಟೀಕಿಸಿದ್ದಾರೆ.

ಇದನ್ನೂ ಓದಿ: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

‘ವಂಶಾಡಳಿತದವರು ಈ ದೇಶದ ಜನಸಾಮಾನ್ಯರನ್ನು ಲೂಟಿ ಮಾಡಿ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಅವರ ಆಸ್ತಿಯಿಂದ ಜನರಿಗೆ ಕೊಟ್ಟಿರುವುದು ಏನೂ ಇಲ್ಲ. ದೇಶವಾಸಿಗಳನ್ನು ಲೂಟಿ ಮಾಡುವುದೇ ತಮ್ಮ ಜನ್ಮಸಿದ್ಧ ಹಕ್ಕು ಎಂದು ಅವರು ಭಾವಿಸಿದ್ದಾರೆ,’ ಎಂದು ಪ್ರಧಾನಿಗಳು ತಿಳಿಸಿದ್ದಾರೆ.

ನಿನ್ನೆ ಕೂಡ ಮೋದಿ ಅವರು ರಾಜಸ್ಥಾನದಲ್ಲಿ ಮಾತನಾಡುವಾಗ ಈ ವಿಚಾರವನ್ನು ಪ್ರಸ್ತಾಪಿಸಿ ಕುಟುಕಿದ್ದರು. ಈ ದೇಶದ ಸಂಪನ್ಮೂಲದ ಮೊದಲ ಹಕ್ಕು ಅಲ್ಪಸಂಖ್ಯಾತರಿಗೆ ಇರುತ್ತದೆ ಎಂದು ಮಾಜಿ ಪಿಎಂ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ವಿರೋಧಿಸಿದ ಪ್ರಧಾನಿಗಳು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರ ಕಿತ್ತು ನುಸುಳುಕೋರರಿಗೆ ಕೊಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯ ಚಾಣಕ್ಯ ಅಮಿತ್ ಶಾ ಹೂಡಿಕೆಯಲ್ಲೂ ಚಾಣಕ್ಯನೇ; 250ಕ್ಕೂ ಹೆಚ್ಚು ಷೇರುಗಳ ಆಯ್ಕೆಗಳಲ್ಲಿ ಬುದ್ಧಿವಂತಿಕೆ ನೋಡಿ

ಕಾಂಗ್ರೆಸ್​ಗೆ ಮುಸ್ಲಿಮರ ಅಭಿವೃದ್ದಿ ಬೇಕಿಲ್ಲ

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಹೆಸರು ಹೇಳಿ ವೋಟ್ ಪಡೆಯುತ್ತದೆ ವಿನಃ ಅವರ ಅಭಿವೃದ್ಧಿ ಆಗಬೇಕಿಲ್ಲ. ದಲಿತ ಮುಸ್ಲಿಮರ ಕಷ್ಟಗಳ ಬಗ್ಗೆ ಮಾತನಾಡಿದರೆ ಕಾಂಗ್ರೆಸ್ ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದಾಗಿ ಮುಸ್ಲಿಮರು ಇವತ್ತು ಶೋಚನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ ನರೇಂದ್ರ ಮೋದಿ, ತಮ್ಮ ಸರ್ಕಾರ ತ್ರಿವಳಿ ತಲಾಖ್ ರದ್ದು ಮಾಡಿದ್ದು, ಹಜ್ ಯಾತ್ರೆಯ ಭಾರತದ ಕೋಟಾ ಹೆಚ್ಚಿಸಿದ್ದು, ಹೀಗೆ ಹಲವು ಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!