AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಅಮೆರಿಕನ್ ಪೋಡ್​​ಕ್ಯಾಸ್ಟರ್ ಲೆಕ್ಸ್ ಫ್ರೀಡ್​​ಮ್ಯಾನ್​​ಗೆ ಮೂರು ಗಂಟೆ ಹದಿನೇಳು ನಿಮಿಷ ನರೇಂದ್ರ ಮೋದಿ ಸುದೀರ್ಘ ಸಂದರ್ಶನ

Lex Fridman podcast with Narendra Modi: ಅಮೆರಿಕದ ಖ್ಯಾತ ಪೋಡ್​​ಕ್ಯಾಸ್ಟರ್ ಲೆಕ್ಸ್ ಫ್ರೀಡ್​​ಮ್ಯಾನ್ ಅವರಿಗೆ ನರೇಂದ್ರ ಮೋದಿ ನೀಡಿದ ಸುದೀರ್ಘ ಸಂದರ್ಶನದಲ್ಲಿ ಹಲವು ವಿಚಾರಗಳ ಚರ್ಚೆಯಾಗಿದೆ. ತಮ್ಮ ವೈಯಕ್ತಿಕ ವಿಚಾರಗಳಿಂದ ಹಿಡಿದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿದ್ಯಮಾನಗಳವರೆಗೆ ನರೇಂದ್ರ ಮೋದಿ ಮಾತನಾಡಿದ್ದಾರೆ. ಲೆಕ್ಸ್ ಫ್ರೀಡ್​ಮ್ಯಾನ್ ಈ ಸಂದರ್ಶನದ ವಿಡಿಯೋವನ್ನು ತಮ್ಮ ಯೂಟ್ಯೂಬ್ ಚಾನಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋವನ್ನು ಲೇಖನದ ಕೊನೆಯಲ್ಲಿ ಎಂಬೆಡ್ ಮಾಡಲಾಗಿದೆ.

Narendra Modi: ಅಮೆರಿಕನ್ ಪೋಡ್​​ಕ್ಯಾಸ್ಟರ್ ಲೆಕ್ಸ್ ಫ್ರೀಡ್​​ಮ್ಯಾನ್​​ಗೆ ಮೂರು ಗಂಟೆ ಹದಿನೇಳು ನಿಮಿಷ ನರೇಂದ್ರ ಮೋದಿ ಸುದೀರ್ಘ ಸಂದರ್ಶನ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 16, 2025 | 6:22 PM

Share

ನವದೆಹಲಿ, ಮಾರ್ಚ್ 16: ಅಮೆರಿಕದ ಸಂಶೋಧಕ ವಿಜ್ಞಾನಿ ಹಾಗೂ ಖ್ಯಾತ ಪೋಡ್​​ಕ್ಯಾಸ್ಟರ್ ಆದ ಲೆಕ್ಸ್ ಫ್ರೀಡ್​​ಮ್ಯಾನ್ (Lex Fridman) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸುದೀರ್ಘ ಸಂದರ್ಶನ ನೀಡಿದ್ದಾರೆ. ಫ್ರೀಡ್​​ಮ್ಯಾನ್ ತಮ್ಮ ಯೂಟ್ಯೂಬ್ ಚಾನಲ್​​ನಲ್ಲಿ ಈ ಪೋಡ್​​ಕ್ಯಾಸ್ಟ್ ಅಪ್​​ಲೋಡ್ ಮಾಡಿದ್ದಾರೆ. ಈ ವಿಡಿಯೋ ಬರೋಬ್ಬರಿ 3 ಗಂಟೆ 17 ನಿಮಿಷದಷ್ಟು ಸುದೀರ್ಘವಾಗಿದೆ. ವಿದೇಶೀ ಖಾಸಗಿ ಮಾಧ್ಯಮವೊಂದಕ್ಕೆ ನರೇಂದ್ರ ಮೋದಿ (PM Narendra Modi) ನೀಡಿದ ಮೊದಲ ಸಂದರ್ಶನ ಇದಾಗಿದೆ. ಭಾರತದಲ್ಲಿ ಝೀರೋಧ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರಿಗೆ ಪ್ರಧಾನಿಗಳು ಇತ್ತೀಚೆಗೆ ಸಂದರ್ಶನ ನೀಡಿದ್ದರು. ಈಗ ವಿದೇಶೀ ಪೋಡ್​​ಕ್ಯಾಸ್ಟರ್​​ಗೆ ಅದಕ್ಕಿಂತಲೂ ಸುದೀರ್ಘವಾದ ಮಹಾ ಸಂದರ್ಶನ ನೀಡಿದ್ದಾರೆ.

ನರೇಂದ್ರ ಮೋದಿ ಅವರು ಲೆಕ್ಸ್ ಫ್ರೀಡ್​​ಮ್ಯಾನ್ ಅವರಿಗೆ ನೀಡಿರುವ ಈ ಸಂದರ್ಶನದಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಬಾಲ್ಯದ ದಿನಗಳಿಂದ ಹಿಡಿದು ಹೋರಾಟದ ದಿನಗಳವರೆಗೆ, ಹಾಗು ಗುಜರಾತ್ ಮುಖ್ಯಮಂತ್ರಿಯಾದಾಗಿನಿಂದ ಹಿಡಿದು ಪ್ರಧಾನಿಯಾಗುವವರೆಗಿನ ರಾಜಕೀಯ ಬೆಳವಣಿಗೆಯ ಹಂತಗಳು ಇವೆಲ್ಲದರ ಬಗ್ಗೆ ಮೋದಿ ಮಾತನಾಡಿದ್ದಾರೆ.

ಈ ಸಂದರ್ಶನದ ಪೂರ್ಣ ವಿಡಿಯೋ, ಸುದ್ದಿಯ ಕೊನೆಯಲ್ಲಿ ಎಂಬೆಡ್ ಮಾಡಲಾಗಿದೆ, ಗಮನಿಸಿ…

ಇದನ್ನೂ ಓದಿ: ಉದ್ಯಮಶೀಲತೆ ಗುಜರಾತ್​ ಜನರ ಡಿಎನ್​ಎಯಲ್ಲಿದೆ: ಟಿವಿ9 ಎಂಡಿ ಬರುಣ್​ ದಾಸ್

ಉಕ್ರೇನ್ ರಷ್ಯಾ ಬಿಕ್ಕಟ್ಟು, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧದ ಸೂಕ್ಷ್ಮತೆ, ಚೀನಾ ಜೊತೆಗಿನ ಸಂಬಂಧ ಇತ್ಯಾದಿ ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಹಿಂದಿಯಲ್ಲೇ ಹೆಚ್ಚಾಗಿ ಮಾತನಾಡಿರುವ ನರೇಂದ್ರ ಮೋದಿ, ತಮ್ಮ ರಾಜಕೀಯ ವಿಚಾರಗಳಿಗೆ ಆರೆಸ್ಸೆಸ್​ನಿಂದ ಯಾವ ರೀತಿ ಪ್ರಭಾವ ಆಗಿದೆ, ಆ ಸಂಘಟನೆಯೊಂದಿಗೆ ತಮ್ಮಗಿದ್ದ ನಂಟು ಯಾವ ರೀತಿಯದ್ದು ಎಂಬುದನ್ನು ಸವಿಸ್ತಾರವಾಗಿ ಮಾತನಾಡಿದ್ದಾರೆ. 2002ರ ಗೋಧ್ರಾ ಹತ್ಯಾಕಾಂಡ ಘಟನೆಯನ್ನೂ ಅವರು ಪ್ರಸ್ತಾಪಿಸಿ, ವಿಪಕ್ಷಗಳು ಮತ್ತು ವಿರೋಧಿಗಳು ತನ್ನನ್ನು ಆ ಪ್ರಕರಣ ಮುಂದಿಟ್ಟುಕೊಂಡು ಹೇಗೆ ಹಣಿಯಲು ಯತ್ನಿಸಿದರು ಎಂಬುದನ್ನು ವಿವರಿಸಿದ್ದಾರೆ.

ಗುಜರಾತ್ ಗಲಭೆಗೆ ಗೋಧ್ರಾ ರೈಲು ದುರಂತ ಘಟನೆ ಹೇಗೆ ಕಾರಣವಾಯಿತು, ಗುಜರಾತ್​​ನಲ್ಲಿ ಹಿಂದಿನಿಂದಲೂ ಗಲಭೆಗಳು ಎಷ್ಟು ಸಾಮಾನ್ಯವಾಗಿದ್ದುವು, 2002ರ ಗಲಭೆ ಬಳಿಕ 22 ವರ್ಷಗಳಿಂದ ಗುಜರಾತ್​​ನಲ್ಲಿ ಮತ್ತೆ ಗಲಭೆಯೇ ಆಗಿಲ್ಲ ಎಂಬ ಸಂಗತಿಯನ್ನು ಲೆಕ್ಸ್ ಫ್ರೀಡ್​​ಮ್ಯಾನ್ ಅವರಿಗೆ ಮೋದಿ ಅರುಹಿದ್ದಾರೆ.

ಇದನ್ನೂ ಓದಿ: ಭಾರತದ್ದೇ ಸ್ವಂತ ಮೊಬೈಲ್ ಆಪರೇಟಿಂಗ್ ಸಿಸ್ಟಂ ನಿರ್ಮಾಣಕ್ಕೆ ಸರ್ಕಾರದ ಆಸಕ್ತಿ; ಏನಿದರ ಉಪಯೋಗ, ಇದು ಅಷ್ಟು ಸುಲಭವಾ?

2000 ಮತ್ತು 2001ರಲ್ಲಿ ದೆಹಲಿಯ ರೆಡ್ ಫೋರ್ಟ್, ಅಮೆರಿಕದ ಟ್ವಿನ್ ಟವರ್ಸ್, ಜಮ್ಮು ಕಾಶ್ಮೀರ ವಿಧಾನಸಭೆ, ದೆಹಲಿಯ ಸಂಸತ್ ಮೇಲೆ ಉಗ್​ರರು ದಾಳಿ ಮಾಡಿದ್ದನ್ನು ಸ್ಮರಿಸಿದ ನರೇಂದ್ರ ಮೋದಿ, ಹೇಗೆ ಎಲ್ಲಾ ಉಗ್ರಗಾಮಿಗಳದ್ದು ಒಂದೇ ಮನಸ್ಕ ಸ್ಥಿತಿ ಇದೆ ಎಂಬುದನ್ನು ಬಿಡಿಸಿ ಹೇಳಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ಇಲ್ಲಿದೆ…

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್