AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Birthday: ಮೋದಿ ಹುಟ್ಟುಹಬ್ಬದಂದು ಭಾರತಕ್ಕೆ ಬರಲು ಸಿದ್ಧವಾದ 8 ಚಿರತೆಗಳಿಗೆ ವಿಶೇಷ ವಿಮಾನ

ಎಂಟು ಚಿರತೆಗಳು, ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ರಾಜಸ್ಥಾನದ ಜೈಪುರಕ್ಕೆ ಸೆಪ್ಟೆಂಬರ್ 17 ರಂದು ಸರಕು ವಿಮಾನದಲ್ಲಿ ಇಂಟರ್-ಕಾಂಟಿನೆಂಟಲ್ ಟ್ರಾನ್ಸ್‌ಲೊಕೇಶನ್ ಯೋಜನೆಯ ಭಾಗವಾಗಿ ತರಲಾಗುವುದು.

Narendra Modi Birthday: ಮೋದಿ ಹುಟ್ಟುಹಬ್ಬದಂದು ಭಾರತಕ್ಕೆ ಬರಲು ಸಿದ್ಧವಾದ 8 ಚಿರತೆಗಳಿಗೆ ವಿಶೇಷ ವಿಮಾನ
Special flightImage Credit source: ANI
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 15, 2022 | 2:31 PM

Share

ಮೋದಿ ಹುಟ್ಟು ಹಬ್ಬಕ್ಕೆ ಭಾರತಕ್ಕೆ ಬರಲು ಸಿದ್ದವಾಗಿರುವ 8 ಚಿರತೆಗಳಿಗೆ ವಿಶೇಷ ವಿಮಾನವನ್ನು ನಮೀಬಿಯಾ ರಾಜಧಾನಿಗೆ   ತಲುಪಿದೆ.   ಐದು ಹೆಣ್ಣು ಮತ್ತು ಮೂರು ಗಂಡು ಚಿರತೆಗಳು ಒಟ್ಟು ಎಂಟು ಚಿರತೆಗಳು ಸೆಪ್ಟೆಂಬರ್ 17ರಂದು ರಾಜಸ್ಥಾನದ ಜೈಪುರಕ್ಕೆ ತರಲಾಗುವುದು. ವಿಶೇಷವಾಗಿ ಕಸ್ಟಮೈಸ್ ಮಾಡಿದ B747 ಜಂಬೋ ಜೆಟ್ ನಮೀಬಿಯಾ ರಾಜಧಾನಿಯಲ್ಲಿ ಎಂಟು ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲು  ಆಗಮಿಸಿದೆ. ಎಂಟು ಚಿರತೆಗಳು, ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ರಾಜಸ್ಥಾನದ ಜೈಪುರಕ್ಕೆ ಸೆಪ್ಟೆಂಬರ್ 17 ರಂದು ಸರಕು ವಿಮಾನದಲ್ಲಿ ಇಂಟರ್-ಕಾಂಟಿನೆಂಟಲ್ ಟ್ರಾನ್ಸ್‌ಲೊಕೇಶನ್ ಯೋಜನೆಯ ಭಾಗವಾಗಿ ತರಲಾಗುವುದು. ಜೈಪುರದಿಂದ ಹೆಲಿಕಾಪ್ಟರ್‌ಗಳಲ್ಲಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದ ಹೊಸ ಮನೆಗೆ ಕರೆದೊಯ್ಯಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಈ ಚಿರತೆಗಳನ್ನು ಬಿಡಲಿದ್ದಾರೆ. ಚಿರತೆಗಳನ್ನು ಭಾರತಕ್ಕೆ ಕರೆತರುವ ವಿಮಾನವು ಮುಖ್ಯ ಕ್ಯಾಬಿನ್‌ನಲ್ಲಿ ಪಂಜರಗಳ ಭದ್ರತೆಯನ್ನು ಮಾಡಿಕೊಂಡಿದೆ. ಆದರೆ ಹಾರಾಟದ ಸಮಯದಲ್ಲಿ ಚಿರತೆಗೆ ವೆಟ್ಸ್​ನ್ನು ಮೂಲಕ ಅನುಮತಿ ನೀಡಲಾಗಿದೆ.

ಈ ವಿಮಾನಕ್ಕೆ ಹುಲಿಯ ಚಿತ್ರವನ್ನು ಬಿಡಿಸಲಾಗಿದೆ. ವಿಮಾನವು 16 ಗಂಟೆಗಳವರೆಗೆ ಹಾರುವ ಸಾಮರ್ಥ್ಯವಿರುವ ಅಲ್ಟ್ರಾ-ಲಾಂಗ್ ರೇಂಜ್ ಜೆಟ್ ಆಗಿದ್ದು, ಇಂಧನ ತುಂಬಲು ನಿಲುಗಡೆ ಇಲ್ಲದೆ ನೇರವಾಗಿ ನಮೀಬಿಯಾದಿಂದ ಭಾರತಕ್ಕೆ ಹಾರಬಲ್ಲದು, ಚಿರತೆಗಳ ಯೋಗಕ್ಷೇಮದ ಪ್ರಮುಖ ವ್ಯವಸ್ಥೆಗಳನ್ನು ಮಾಡಲಾಗಿದೆ. ಚಿರತೆ ಭಾರತಕ್ಕೆ ಬರುವ ವರೆಗೆ ಯಾವುವೆ ಆಹಾರವನ್ನು ಸೇವನೆ ಮಾಡಲು ಸಾಧ್ಯವಿಲ್ಲ ಎಂದು ಭಾರತೀಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ದೀರ್ಘ ಪ್ರಯಾಣವು ಪ್ರಾಣಿಗಳಲ್ಲಿ ವಾಕರಿಕೆ ಮತ್ತು ಆರೋಗ್ಯ ಸಮಸ್ಯೆ ಉಂಟು ಮಾಡುವುದರಿಂದ ಇತರ ತೊಡಕುಗಳಿಗೆ ಕಾರಣವಾಗುವುದರಿಂದ ಇಂತಹ ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯ ಸಾಲ್ ಅರಣ್ಯದಲ್ಲಿ 1948 ರಲ್ಲಿ ಕೊನೆಯದಾಗಿ ಮಚ್ಚೆಯುಳ್ಳ ಚಿರತೆ ಸಾವನ್ನಪ್ಪಿತು. 1970 ರ ದಶಕದಿಂದ ದೇಶದಲ್ಲಿ ಐತಿಹಾಸಿಕ ವಿಚಾರಗಳಲ್ಲಿ ಇದು ಒಂದಾಗಿದೆ. ಈ ಜಾತಿಯ ಚಿರತೆಗಳನ್ನು ಭಾರತಕ್ಕೆ ತರಲು ಭಾರತ ಸರ್ಕಾರವು ನಮೀಬಿಯಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಹುಲಿಯ ನಾಡಿಗೆ ಸದ್ಭಾವನಾ ರಾಯಭಾರಿಗಳನ್ನು ಕೊಂಡೊಯ್ಯಲು ವಿಶೇಷ ಹಕ್ಕಿಯೊಂದು ಬ್ರೇವ್‌ನ ಭೂಮಿಯನ್ನು ಮುಟ್ಟಿದೆ”ಎಂದು ವಿಂಡ್‌ಹೋಕ್‌ನಲ್ಲಿರುವ ಭಾರತದ ಹೈಕಮಿಷನ್ ಬುಧವಾರ ಟ್ವೀಟ್ ಮಾಡಿದೆ.

Published On - 2:30 pm, Thu, 15 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?