AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕು

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ
ಆಸ್ಸಾಂನಲ್ಲಿ ಭೂ ಮಾಲೀಕತ್ವದ ಸರ್ಟಿಫಿಕೇಟ್ ವಿತರಿಸಿದ ಪ್ರಧಾನಿ ಮೋದಿ
Lakshmi Hegde
| Edited By: |

Updated on: Jan 23, 2021 | 12:56 PM

Share

ಶಿವ್​ಸಾಗರ್: ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಸಾಂಗೆ ಭೇಟಿ ನೀಡಿದರು. ಶಿವ್​ಸಾಗರ್​ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಭೂಮಿ ಹಂಚಿಕೆ ಪ್ರಮಾಣ ಪತ್ರ (ಪಟ್ಟಾ) ವಿತರಿಸಿದರು. ಈ ಅಭಿಯಾನದಡಿ ಸುಮಾರು 1 ಲಕ್ಷ ಮಂದಿಗೆ ಅವರ ಭೂ ಮಾಲೀಕತ್ವದ ಪಟ್ಟಾವನ್ನು ಪಡೆದರು.

ಸ್ವಾತಂತ್ರ್ಯ ನಂತರವೂ ಆಸ್ಸಾಂನಲ್ಲಿ ಲಕ್ಷಾಂತರ ಆದಿವಾಸಿಗಳು, ಸ್ಥಳೀಯ ಆಸ್ಸಾಂ ಕುಟುಂಬಗಳು ಭೂ ಮಾಲೀಕತ್ವದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅವರೆಲ್ಲರಿಗೂ ಭೂ ಮಾಲೀಕತ್ವ ಹಕ್ಕು ನೀಡುವ ಸಲುವಾಗಿ, ಇಲ್ಲಿನ ರಾಜ್ಯ ಸರ್ಕಾರದ ಜತೆ ನಾವು ವಿಶೇಷ ಕಾರ್ಯಕ್ರಮ ರೂಪಿಸಿದ್ದೇವೆ. ಅದರಡಿ ಫಲಾನುಭವಿಗಳಿಗೆ ಭೂ ಹಂಚಿಕೆ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕುಟುಂಬಗಳಿಗೆ ಭೂ ಪ್ರಮಾಣ ಪತ್ರ ಹಂಚಿಕೆ ಮಾಡಲಾಗಿದೆ. ಹಾಗೇ ಈ ಪ್ರಕ್ರಿಯೆ ಮುಂದುವರಿಯುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಷ್ಟು ಪ್ರಮಾಣದಲ್ಲಿ ಭೂಮಿ ಪಟ್ಟಾ ವಿತರಣೆ ಮಾಡಲು ಸಾಧ್ಯವಾಗಿದ್ದು, ಪ್ರಧಾನಿ ಮೋದಿಯವರಿಂದ. ಅವರಿಗೆ ಕೃತಜ್ಞತೆ ಎಂದು ಆಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್​ ತಿಳಿಸಿದ್ದಾರೆ.​

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ