AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕು

ಆಸ್ಸಾಂನಲ್ಲಿ ಪ್ರಧಾನಿ ಮೋದಿ: 1 ಲಕ್ಷ ಫಲಾನುಭವಿಗಳಿಗೆ ಭೂ ಮಾಲೀಕತ್ವದ ಪ್ರಮಾಣ ಪತ್ರ ವಿತರಣೆ
ಆಸ್ಸಾಂನಲ್ಲಿ ಭೂ ಮಾಲೀಕತ್ವದ ಸರ್ಟಿಫಿಕೇಟ್ ವಿತರಿಸಿದ ಪ್ರಧಾನಿ ಮೋದಿ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 23, 2021 | 12:56 PM

ಶಿವ್​ಸಾಗರ್: ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಸಾಂಗೆ ಭೇಟಿ ನೀಡಿದರು. ಶಿವ್​ಸಾಗರ್​ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಭೂಮಿ ಹಂಚಿಕೆ ಪ್ರಮಾಣ ಪತ್ರ (ಪಟ್ಟಾ) ವಿತರಿಸಿದರು. ಈ ಅಭಿಯಾನದಡಿ ಸುಮಾರು 1 ಲಕ್ಷ ಮಂದಿಗೆ ಅವರ ಭೂ ಮಾಲೀಕತ್ವದ ಪಟ್ಟಾವನ್ನು ಪಡೆದರು.

ಸ್ವಾತಂತ್ರ್ಯ ನಂತರವೂ ಆಸ್ಸಾಂನಲ್ಲಿ ಲಕ್ಷಾಂತರ ಆದಿವಾಸಿಗಳು, ಸ್ಥಳೀಯ ಆಸ್ಸಾಂ ಕುಟುಂಬಗಳು ಭೂ ಮಾಲೀಕತ್ವದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅವರೆಲ್ಲರಿಗೂ ಭೂ ಮಾಲೀಕತ್ವ ಹಕ್ಕು ನೀಡುವ ಸಲುವಾಗಿ, ಇಲ್ಲಿನ ರಾಜ್ಯ ಸರ್ಕಾರದ ಜತೆ ನಾವು ವಿಶೇಷ ಕಾರ್ಯಕ್ರಮ ರೂಪಿಸಿದ್ದೇವೆ. ಅದರಡಿ ಫಲಾನುಭವಿಗಳಿಗೆ ಭೂ ಹಂಚಿಕೆ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಆಸ್ಸಾಂನಲ್ಲಿ 2016ರಲ್ಲಿ ಸುಮಾರು 5.75 ಲಕ್ಷ ಭೂ ಮಾಲೀಕತ್ವ ಹೊಂದಿಲ್ಲದ ಕುಟುಂಬಗಳು ಇದ್ದವು. 2016ರಿಂದ ಇಲ್ಲಿಯವರೆಗೆ ಒಟ್ಟು 2.28 ಲಕ್ಷ ಕುಟುಂಬಗಳಿಗೆ ಭೂ ಪ್ರಮಾಣ ಪತ್ರ ಹಂಚಿಕೆ ಮಾಡಲಾಗಿದೆ. ಹಾಗೇ ಈ ಪ್ರಕ್ರಿಯೆ ಮುಂದುವರಿಯುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಷ್ಟು ಪ್ರಮಾಣದಲ್ಲಿ ಭೂಮಿ ಪಟ್ಟಾ ವಿತರಣೆ ಮಾಡಲು ಸಾಧ್ಯವಾಗಿದ್ದು, ಪ್ರಧಾನಿ ಮೋದಿಯವರಿಂದ. ಅವರಿಗೆ ಕೃತಜ್ಞತೆ ಎಂದು ಆಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್​ ತಿಳಿಸಿದ್ದಾರೆ.​

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ