AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಬಿ ನಿರ್ದೇಶಕ ಮತ್ತು ರಾ ಕಾರ್ಯದರ್ಶಿಯ ಅಧಿಕಾರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈ ಇಬ್ಬರು ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಗಣಿಸಿ, ಎರಡೂ ಇಲಾಖೆಗಳನ್ನು ಉತ್ತಮವಾಗಿ ನಡೆಸುವ ದೃಷ್ಟಿಯಿಂದ ಅಧಿಕಾರ ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಐಬಿ ನಿರ್ದೇಶಕ ಮತ್ತು ರಾ ಕಾರ್ಯದರ್ಶಿಯ ಅಧಿಕಾರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ
ಆರವಿಂದ್​ ಕುಮಾರ್​ ಮತ್ತು ಸಮಂತ್​ ಗೋಯೆಲ್​
Lakshmi Hegde
|

Updated on: May 27, 2021 | 6:30 PM

Share

ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗದ (Research and Analysis Wing (R&AW) ಕಾರ್ಯದರ್ಶಿ ಸಮಂತ್ ಕುಮಾರ್​ ಗೋಯೆಲ್​ ಮತ್ತು ಗುಪ್ತಚರ ದಳದ ನಿರ್ದೇಶಕ ಅರವಿಂದ್​ ಕುಮಾರ್​ ಅವರ ಅಧಿಕಾರಿ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ಹೆಚ್ಚಿಸಿ, ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಇವರಿಬ್ಬರೂ 1984ನೇ ಇಸ್ವಿಯ ಬ್ಯಾಚ್​​ನ ಐಪಿಎಸ್​ ಅಧಿಕಾರಿಗಳಾಗಿದ್ದಾರೆ. ಇವರಲ್ಲಿ ಸಮಂತ್ ಕುಮಾರ್​ ಗೋಯೆಲ್ ಪಂಜಾಬ್​ ಕೇಡರ್​​ನವರಾದರೆ, ಅರವಿಂದ್ ಕುಮಾರ್​ ಅಸ್ಸಾಂ-ಮೇಘಾಲಯ ಕೇಡರ್​ನ ಅಧಿಕಾರಿಯಾಗಿದ್ದಾರೆ. ಇವರಿಬ್ಬರ ಅಧಿಕಾರ ಅವಧಿ 2021ರ ಜೂನ್​ 30ರವರೆಗೆ ಇತ್ತು. ಇದೀಗ 2022ರ ಜೂನ್​ 30ರವರೆಗೆ ಮುಂದುವರಿಯಲಿದೆ.

ಈ ಇಬ್ಬರು ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಗಣಿಸಿ, ಎರಡೂ ಇಲಾಖೆಗಳನ್ನು ಉತ್ತಮವಾಗಿ ನಡೆಸುವ ದೃಷ್ಟಿಯಿಂದ ಅಧಿಕಾರ ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇವರಿಬ್ಬರೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: 15 ದಿನಗಳ ಒಳಗೆ ನಿಯಮಪಾಲನೆ ವಿವರ ನೀಡಲು ಆನ್​ಲೈನ್ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ