AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಏರಿಕೆ; ಬೂಸ್ಟರ್ ಡೋಸ್​​ಗಳ ಅಗತ್ಯವನ್ನು ನಿರ್ಣಯಿಸಲು ಅಧ್ಯಯನ ಪ್ರಾರಂಭಿಸಿದ ಕೇಂದ್ರ

ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮೋದಿ ಸರ್ಕಾರವು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಅನ್ನು ನೇಮಕ ಮಾಡಿದ್ದು, ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ಶೀಘ್ರದಲ್ಲೇ ಸಭೆ ಸೇರಲಿದೆ.

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಏರಿಕೆ; ಬೂಸ್ಟರ್ ಡೋಸ್​​ಗಳ ಅಗತ್ಯವನ್ನು ನಿರ್ಣಯಿಸಲು ಅಧ್ಯಯನ ಪ್ರಾರಂಭಿಸಿದ ಕೇಂದ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 24, 2021 | 11:42 AM

Share

ದೆಹಲಿ: ಭಾರತದಲ್ಲಿ ಕೊವಿಡ್ -19  (Covid-19) ವಿರುದ್ಧ ಬೂಸ್ಟರ್ ಡೋಸ್‌ಗಳ (Booster Dose) ಅಗತ್ಯವನ್ನು ನಿರ್ಣಯಿಸಲು ನರೇಂದ್ರ ಮೋದಿ (Narendra Modi) ಸರ್ಕಾರವು ಅಧ್ಯಯನವನ್ನು ಪ್ರಾರಂಭಿಸಿದೆ ಎಂದು ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ. ಡಿಪಾರ್ಟ್‌ಮೆಂಟ್ ಆಫ್ ಬಯೋಟೆಕ್ನಾಲಜಿಯ (DBT) ಪ್ರೀಮಿಯರ್ ಇನ್‌ಸ್ಟಿಟ್ಯೂಟ್ ಟ್ರಾನ್ಸ್‌ಲೇಶನಲ್ ಹೆಲ್ತ್ ಸೈನ್ಸ್ ಅಂಡ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (THSTI) ನೇತೃತ್ವದ ಬಹು-ಕೇಂದ್ರದ ಅಧ್ಯಯನವು ಆರು ತಿಂಗಳ ಹಿಂದೆ ಎರಡನೇ ಡೋಸ್ ಕೊವಿಡ್ -19 ಲಸಿಕೆಯನ್ನು ಪಡೆದ 3,000 ಕ್ಕೂ ಹೆಚ್ಚು ಭಾಗವಹಿಸುವವರನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ .ಡಿಬಿಟಿ ಪ್ರಾಯೋಜಿತ ಅಧ್ಯಯನವು ಭಾರತದಲ್ಲಿ ಬಳಸಲಾಗುವ ಕೊವಿಶೀಲ್ಡ್, ಕೊವಾಕ್ಸಿನ್ ಮತ್ತು ಸ್ಪುಟ್ನಿಕ್ ವಿ ಈ ಮೂರು ಲಸಿಕೆಗಳನ್ನು ಒಳಗೊಂಡಿದೆ.  ಕೊರೊನಾವೈರಸ್​​ನ ಹೊಸ ರೂಪಾಂತರವಾದ ಒಮಿಕ್ರಾನ್‌ನ ಆಗಮನವು ದೇಶದಲ್ಲಿ ಬೂಸ್ಟರ್ ಡೋಸ್‌ಗಳ ಕರೆಗಳನ್ನು ಹುಟ್ಟುಹಾಕಿದೆ. ಲಸಿಕೆ ಪರಿಣಾಮಕಾರಿತ್ವವನ್ನು ಪುನಃಸ್ಥಾಪಿಸುವುದು ಬೂಸ್ಟರ್ ಡೋಸ್‌ನ ಉದ್ದೇಶವಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಭಾರತದಲ್ಲಿ ಲಸಿಕೆಗಳು ನೀಡಿದ ರೋಗನಿರೋಧಕ ಶಕ್ತಿ ಕ್ಷೀಣಿಸಲು ಪ್ರಾರಂಭಿಸಿದೆಯೇ ಅಥವಾ ಬೂಸ್ಟರ್ ಡೋಸ್‌ಗಳ ತುರ್ತು ಅವಶ್ಯಕತೆ ಇದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಇದು ಒಂದು ಶೈಕ್ಷಣಿಕ ಅಧ್ಯಯನವಾಗಿದ್ದು, ನೈಜ-ಪ್ರಪಂಚದ ಸನ್ನಿವೇಶದಲ್ಲಿ ಪ್ರತಿರಕ್ಷೆಯ ಅವಧಿಯನ್ನು ಅರ್ಥಮಾಡಿಕೊಳ್ಳುವುದು ಕಲ್ಪನೆಯಾಗಿದೆ. ಕೋಶ ಸಂಬಂಧಿ ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಅಧ್ಯಯನದ ಅಡಿಯಲ್ಲಿ ದಾಖಲಾದ ಸೈಟ್‌ಗಳ ಮುಖ್ಯಸ್ಥರಾಗಿರುವ ಹಿರಿಯ ಅಧಿಕಾರಿಯೊಬ್ಬರು ನ್ಯೂಸ್ 18ಗೆ ತಿಳಿಸಿದರು.

ನಾವು T ಮತ್ತು B ಜೀವಕೋಶದ ಪ್ರತಿಕ್ರಿಯೆ ಮತ್ತು ಪ್ರತಿಕಾಯಗಳನ್ನು ವಿಶ್ಲೇಷಿಸುತ್ತೇವೆ ಮತ್ತು ಎರಡನೇ ಡೋಸ್ ಸ್ವೀಕರಿಸಿದ ಆರು ತಿಂಗಳ ನಂತರ ರಕ್ಷಣೆಯ ಮಟ್ಟ ಏನು ಎಂಬುದನ್ನು ಗಮನಿಸುತ್ತೇವೆ. ಇದು ಭಾರತದಲ್ಲಿ ಬೂಸ್ಟರ್ ಡೋಸ್‌ಗಳ ಅಗತ್ಯತೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮೋದಿ ಸರ್ಕಾರವು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಅನ್ನು ನೇಮಕ ಮಾಡಿದ್ದು, ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ಶೀಘ್ರದಲ್ಲೇ ಸಭೆ ಸೇರಲಿದೆ.

ಅಧ್ಯಯನವು ಹೇಗೆ ನಡೆಯುತ್ತದೆ? 40 ವರ್ಷಕ್ಕಿಂತ ಮೇಲ್ಪಟ್ಟ ಜನರು, 40 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರು, ವ್ಯಾಕ್ಸಿನೇಷನ್‌ಗೆ ಮುಂಚಿತವಾಗಿ ಕೊವಿಡ್-19 ಸೋಂಕಿಗೆ ಒಳಗಾದ ಜನರು ಮತ್ತು ಕೊಮೊರ್ಬಿಡ್ ಪರಿಸ್ಥಿತಿ ಹೊಂದಿರುವ ಜನರು ನಾಲ್ಕು ಸಮೂಹಗಳನ್ನು ಒಳಗೊಂಡಂತೆ ಅಧ್ಯಯನವನ್ನು ಸೆಟ್ ಮಾಡಲಾಗಿದೆ.

ಅಧ್ಯಯನದಲ್ಲಿ ತೊಡಗಿರುವ ಆಸ್ಪತ್ರೆ ಸೈಟ್‌ಗಳು ದೆಹಲಿ-ಎನ್‌ಸಿಆರ್, ಗುರುಗ್ರಾಮ್ ಮತ್ತು ಫರಿದಾಬಾದ್‌ನಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸುತ್ತಿವೆ. “ಅವರ ವೈದ್ಯಕೀಯ ಇತಿಹಾಸ, ವ್ಯಾಕ್ಸಿನೇಷನ್ ಸ್ಥಿತಿ ಮತ್ತು ಇತರ ಕ್ಲಿನಿಕಲ್ ಮಾಹಿತಿಯ ಮಾಹಿತಿಯನ್ನು ಸಂಗ್ರಹಿಸಲು ಸರಳವಾದ ಪ್ರಶ್ನಾವಳಿಯನ್ನು ರಚಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಸೈಟ್‌ಗಳು ರಕ್ತದ ಮಾದರಿಗಳ ವರದಿಯನ್ನು ಭಾರತದಲ್ಲಿ ಬೂಸ್ಟರ್ ಡೋಸ್‌ಗಳ ಅಗತ್ಯತೆಯ ವಿಶ್ಲೇಷಣೆಯೊಂದಿಗೆ ಸಲ್ಲಿಸುತ್ತವೆ.“ನಾವು ಭಾರತದಲ್ಲಿ ಬೂಸ್ಟರ್‌ಗಳ ಅಗತ್ಯತೆಯ ಕುರಿತು ವರದಿಯನ್ನು ಸಲ್ಲಿಸುತ್ತೇವೆ. ಏತನ್ಮಧ್ಯೆ, ನಾವು DBT ಯ THSTI ಯೊಂದಿಗೆ ಸಾಪ್ತಾಹಿಕ ಚರ್ಚೆಗಳನ್ನು ನಡೆಸುತ್ತಿದ್ದೇವೆ ಮತ್ತು ರಕ್ತದ ಮಾದರಿಗಳನ್ನು ಕಳುಹಿಸುತ್ತಿದ್ದೇವೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:  Fact Check 1999ರಲ್ಲಿ ಒಮಿಕ್ರಾನ್ ವಿಡಿಯೊ ಗೇಮ್ ತಯಾರಿಸಿದ್ದರೇ ಬಿಲ್ ಗೇಟ್ಸ್?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ