AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹಳ್ಳಿಗಳ ಕುಂದು ಕೊರತೆ ಪರಿಹಾರದ ಗುರಿ; ಡಿ. 20ರಿಂದ ಸರ್ಕಾರದಿಂದ ಉತ್ತಮ ಆಡಳಿತ ಸಪ್ತಾಹ

ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಭಾರತದ ಹಳ್ಳಿಗಳ ಕುಂದು ಕೊರತೆ ಪರಿಹಾರದ ಗುರಿ; ಡಿ. 20ರಿಂದ ಸರ್ಕಾರದಿಂದ ಉತ್ತಮ ಆಡಳಿತ ಸಪ್ತಾಹ
ಪ್ರಧಾನಮಂತ್ರಿ ನರೇಂದ್ರ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 18, 2021 | 6:23 PM

Share

ನವದೆಹಲಿ: ಹಳ್ಳಿಗಳಲ್ಲಿ ಉತ್ತಮ ಆಡಳಿತವನ್ನು ನೀಡುವ ಧ್ಯೇಯವಾಕ್ಯದೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಡಿಸೆಂಬರ್ 20ರಿಂದ ರಾಜ್ಯಗಳ ಜೊತೆಗೆ ರಾಷ್ಟ್ರವ್ಯಾಪಿ ‘ಉತ್ತಮ ಆಡಳಿತ ಸಪ್ತಾಹ’ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ದೇಶದಾದ್ಯಂತ ಬಾಕಿ ಉಳಿದಿರುವ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವುದು ಮತ್ತು ವಿಲೇವಾರಿ ಮಾಡುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ. ಎಲ್ಲಾ ರಾಜ್ಯಗಳು ಈ ಅಭಿಯಾನದಲ್ಲಿ ಭಾಗವಹಿಸಲು ಇಚ್ಛೆ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಉದ್ದೇಶಕ್ಕಾಗಿ ರಚಿಸಲಾದ ಕೇಂದ್ರ ಪೋರ್ಟಲ್ ಮೂಲಕ ಸರ್ಕಾರವು ಈ ಅಭಿಯಾನದ ಮೇಲ್ವಿಚಾರಣೆ ಮಾಡುತ್ತದೆ. ಜಿಲ್ಲಾಧಿಕಾರಿಗಳು ತಹಸಿಲ್‌ಗಳಿಗೆ ಭೇಟಿ ನೀಡಿ ಗ್ರಾಮ ಮಟ್ಟದವರೆಗೆ ಅಭಿಯಾನದ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ. ಡಿಸೆಂಬರ್ 25ರಂದು ‘ಗುಡ್ ಗವರ್ನೆನ್ಸ್ ಇಂಡೆಕ್ಸ್’ ಕೂಡ ಬಿಡುಗಡೆಯಾಗಲಿದೆ.

ಆರು ದಿನಗಳ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರವು ಹರಿಯಾಣ, ಒಡಿಶಾ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಅಭಿಯಾನದ ಜೊತೆ ಮುಖ್ಯವಾಗಿ ಗುರುತಿಸಿಕೊಳ್ಳಲಿವೆ. ಕೇಂದ್ರ ಸರ್ಕಾರ ಈ ವರ್ಷದ ಆರಂಭದಲ್ಲಿ, ಕೇಂದ್ರ ಮಟ್ಟದಲ್ಲಿ 3 ಲಕ್ಷಕ್ಕೂ ಹೆಚ್ಚು ಬಾಕಿ ಇರುವ ನಾಗರಿಕರ ಕುಂದುಕೊರತೆಗಳನ್ನು ತೆರವುಗೊಳಿಸಲು ತನ್ನದೇ ಆದ ಅಭಿಯಾನವನ್ನು ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ. 25ರಂದು ‘ಉತ್ತಮ ಆಡಳಿತ ದಿನ’ ಎಂದು ಆಚರಿಸಲಾಗುವುದು. ‘ಉತ್ತಮ ಆಡಳಿತ ಸಪ್ತಾಹ’ದ ಸಮಾರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರುವರು. ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸೋಮವಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಯುಪಿ+ಯೋಗಿ=ಉಪಯೋಗಿ; ಗಂಗಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಿ ಯೋಗಿ ಸರ್ಕಾರವನ್ನು ಹೊಗಳಿದ ಪ್ರಧಾನಿ ಮೋದಿ, ವಿರೋಧಿಗಳಿಗೆ ತಿರುಗೇಟು

Ganga Expressway: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?