AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆಯ ಭೀತಿಯ ನೆರಳಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ: ಲಸಿಕೆ ಅಭಿಯಾನಕ್ಕೆ ಒತ್ತು ನೀಡಲು ಸೂಚನೆ

ಕೊವಿಡ್ ಪಿಡುಗಿಗೆ ಕಡಿವಾಣ ಹಾಕಲು ಲಸಿಕಾ ಅಭಿಯಾನಕ್ಕೆ ಒತ್ತು ಕೊಡಬೇಕು. ಆಮ್ಲಜನಕ ಸರಬರಾಜು ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೊರೊನಾ 3ನೇ ಅಲೆಯ ಭೀತಿಯ ನೆರಳಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ: ಲಸಿಕೆ ಅಭಿಯಾನಕ್ಕೆ ಒತ್ತು ನೀಡಲು ಸೂಚನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Sep 10, 2021 | 11:13 PM

Share

ದೆಹಲಿ: ದೇಶದಲ್ಲಿ ಕೊವಿಡ್ 3ನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ಭೀತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. ಕೊವಿಡ್ ಪಿಡುಗಿಗೆ ಕಡಿವಾಣ ಹಾಕಲು ಲಸಿಕಾ ಅಭಿಯಾನಕ್ಕೆ ಒತ್ತು ಕೊಡಬೇಕು. ಆಮ್ಲಜನಕ ಸರಬರಾಜು ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದರು.

ದೇಶದ ಪ್ರಸ್ತುತ ಸ್ಥಿತಿಗತಿ, ಸಂಭಾವ್ಯ ಸವಾಲುಗಳನ್ನು ಎದುರಿಸಲು ಅರೋಗ್ಯ ಇಲಾಖೆಯ ಸಿದ್ಧತೆ, ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಲಸಿಕೆಗಳ ಉತ್ಪಾದನೆ, ಪೂರೈಕೆ ಮತ್ತು ಸರಬರಾಜು ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯಿತು ಎಂದು ಪ್ರೆಸ್ ಇನ್​ಫರ್ಮೇಶನ್ ಬ್ಯೂರೊ ಪ್ರಕಟಣೆ ತಿಳಿಸಿದೆ.

ದೇಶದ ವೈದ್ಯಕೀಯ ಸೇವೆಗಳ ಸೌಕರ್ಯವನ್ನು ಹೇಗೆ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂಬ ಬಗ್ಗೆ ಮೋದಿ ಅವರಿಗೆ ಮಾಹಿತಿ ನೀಡಲಾಯಿತು. ಲಸಿಕೆ ಅಭಿಯಾನದ ಬಗ್ಗೆ ಪರಮಾರ್ಶೆ ನಡೆಸಿದರು. ಮುಂದಿನ ಕೆಲ ತಿಂಗಳ ಅವಧಿಯಲ್ಲಿ ಎಷ್ಟರಮಟ್ಟಿಗೆ ಲಸಿಕೆ ಅಭಿಯಾನ ಪ್ರಗತಿ ಸಾಧಿಸಲಿದೆ ಎಂಬ ಬಗ್ಗೆ ಮೋದಿ ಮಾಹಿತಿ ಪಡೆದುಕೊಂಡರು.

ಕೊರೊನಾ 3ನೇ ಅಲೆಯಿಂದ ಮಕ್ಕಳಿಗೆ ಹೆಚ್ಚು ತೊಂದರೆಯಾಗಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಮಕ್ಕಳ ಚಿಕಿತ್ಸೆಗೆ ಸಿದ್ಧಪಡಿಸಿರುವ ಬೆಡ್​, ಇತರ ವ್ಯವಸ್ಥೆಗಳು ಹಾಗೂ ಕೊವಿಡ್ ತುರ್ತು ಪರಿಸ್ಥಿತಿ ಪ್ರತಿಕ್ರಿಯೆ ಬಗ್ಗೆ ಪ್ರಧಾನಿ ಹಲವು ಸೂಚನೆಗಳನ್ನು ನೀಡಿದರು.

ವಿವಿಧ ರಾಜ್ಯಗಳಿಗೆ ಈವರೆಗೆ ಒಂದು ಲಕ್ಷ ಆಮ್ಲಜನಕ ಸಾಂದ್ರಕಗಳು (Oxygen Concentrators) ಮತ್ತು ಮೂರು ಲಕ್ಷ ಆಮ್ಲಜನಕ ಸಿಲಿಂಡರ್​ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು. ರೂಪಾಂತರಿಗಳ ಪತ್ತೆಗಾಗಿ ಜಿನೋಮ್ ಸಿಕ್ವಿನ್ಸೆಂಗ್​ ನಿಯಮಿತವಾಗಿ ನಡೆಯಬೇಕು ಎಂದು ಪ್ರಧಾನಿ ಸಲಹೆ ಮಾಡಿದರು.

(Narendra Modi Heads Covid Meet Amid Threat of Covid 3rd Wave)

ಇದನ್ನೂ ಓದಿ: Coronavirus cases in India: ದೇಶದಲ್ಲಿ 34,973 ಹೊಸ ಕೊವಿಡ್ ಪ್ರಕರಣ ಪತ್ತೆ, 260 ಮಂದಿ ಸಾವು

ಇದನ್ನೂ ಓದಿ: ಕೊವಿಡ್ ಲಸಿಕೆ ಅಭಿಯಾನಕ್ಕೆ ಮುಂದಿನ ತಿಂಗಳೇ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯೂ ಸೇರ್ಪಡೆಯಾಗುವ ಸಾಧ್ಯತೆ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​