AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Kashmir Visit: ಪ್ರಧಾನಿ ಮೋದಿಯನ್ನು ಇಂಪ್ರೆಸ್​ ಮಾಡಿ ಅವರ ಜತೆ ಸೆಲ್ಫಿ ತೆಗೆದುಕೊಂಡ ನಾಜಿಮ್ ಯಾರು?

ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ವಿಕಸಿತ ಭಾರತದ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಇದಾದ ಬಳಿಕ ವಿಕಸಿತ ಭಾರತದ ಫಲಾನುಭವಿ ನಾಜಿಮ್ ಅವರೊಂದಿಗೆ ಮೋದಿ ಸೆಲ್ಫಿ ತೆಗೆದುಕೊಂಡು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

PM Modi Kashmir Visit: ಪ್ರಧಾನಿ ಮೋದಿಯನ್ನು ಇಂಪ್ರೆಸ್​ ಮಾಡಿ ಅವರ ಜತೆ ಸೆಲ್ಫಿ ತೆಗೆದುಕೊಂಡ ನಾಜಿಮ್ ಯಾರು?
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Mar 07, 2024 | 3:37 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಕ್ಷಿ ಕ್ರೀಡಾಂಗಣದಲ್ಲಿ ವಿಕಸಿತ ಭಾರತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ನಾಜಿಮ್ ಎಂಬ ಫಲಾನುಭವಿಯೊಂದಿಗೆ ಮಾತನಾಡುತ್ತಿದ್ದಾಗ, ನಾಜಿಮ್ ಅವರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದರು. ಈ ಯುವಕನ ಆಸೆಯನ್ನು ಈಡೇರಿಸಿದ ಪ್ರಧಾನಿ ಮೋದಿ ಈ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಾಜಿಮ್ ಪ್ರಧಾನಿ ಮೋದಿಯವರನ್ನು ಸೆಲ್ಫಿಗಾಗಿ ಕೇಳಿದಾಗ, ಖಂಡಿತವಾಗಿಯೂ, ನಿಮ್ಮನ್ನು ನನ್ನ ಬಳಿಗೆ ಕರೆತರಲು ನಾನು ಎಸ್‌ಪಿಜಿ ತಂಡವನ್ನು ಕೇಳುತ್ತೇನೆ. ಖಂಡಿತವಾಗಿಯೂ ಒಟ್ಟಿಗೆ ಸೆಲ್ಫಿ ತೆಗೆದುಕೊಳ್ಳೋಣ ಎಂದು ಮೃದುವಾಗಿ ಹೇಳಿದ್ದರು. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್) ಪೋಸ್ಟ್ ಅನ್ನು ಹಂಚಿಕೊಳ್ಳುವಾಗ ಪಿಎಂ ಮೋದಿ, ನನ್ನ ಸ್ನೇಹಿತ ನಾಜಿಮ್ ಅವರೊಂದಿಗೆ ಸ್ಮರಣೀಯ ಸೆಲ್ಫಿ. ಅವರ ಒಳ್ಳೆಯ ಕೆಲಸದಿಂದ ನಾನು ಪ್ರಭಾವಿತನಾಗಿದ್ದೇನೆ.

ಸಾರ್ವಜನಿಕ ಸಭೆಯಲ್ಲಿ ಅವರು ಸೆಲ್ಫಿಗೆ ವಿನಂತಿಸಿಕೊಂಡರು ಮತ್ತು ಅವರು ನನ್ನ ಭೇಟಿಯಾಗಬೇಕೆಂದು ಬಯಸಿದರು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯ ಎಂದು ಬರೆದಿದ್ದಾರೆ.

ಮೋದಿ ಟ್ವೀಟ್​

ನಾಜಿಮ್ ಅವರು ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು ವಿಕಸಿತ ಭಾರತದ ಫಲಾನುಭವಿ ನಾಜಿಮ್, ಪ್ರಧಾನಿ ಮೋದಿ ಅವರೊಂದಿಗಿನ ಸಂಭಾಷಣೆಯಲ್ಲಿ, ನಾನು ಜೇನುನೊಣಗಳಿಂದ ಜೇನುತುಪ್ಪವನ್ನು ಹೊರತೆಗೆಯುವ ಕೆಲಸ ಮಾಡುತ್ತೇನೆ. 5 ಸಾವಿರ ಕಿಲೋ ಜೇನು ಮಾರಾಟ ಮಾಡಿದ್ದೇನೆ. ನಾನು ಇದರ ಲಾಭವನ್ನು ಮಾತ್ರ ಪಡೆಯುವುದಿಲ್ಲ, ನನ್ನೊಂದಿಗೆ ಇತರ ಯುವಕರನ್ನು ಸಹ ಸೇರಿಸಿಕೊಂಡಿದ್ದೇನೆ ಎಂದರು.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರ್​ಗೆ ಪ್ರಧಾನಿ ಮೋದಿ ಭೇಟಿ: ಜನರಲ್ಲಿ ಹರ್ಷೋನ್ಮಾದ, ಕಣಿವೆಯಲ್ಲಿ ಪ್ರತಿಧ್ವನಿಸುತ್ತಿರುವ ಮೋದಿ ಸಾಬ್ ಜಿಂದಾಬಾದ್ ಘೋಷಣೆ!

ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ನಾಜಿಮ್ ಬಳಿ ಮಾತನಾಡುತ್ತಾ, ನೀವು ಓದುತ್ತಿದ್ದಾಗ ನಿಮ್ಮ ಕನಸು ಏನಾಗಿತ್ತು ಎಂದು ಕೇಳಿದರು ಇದಕ್ಕೆ ಪ್ರತಿಕ್ರಿಯಿಸಿದ ನಾಜಿಮ್, ನಾನು 10ನೇ ತರಗತಿಯಲ್ಲಿದ್ದಾಗ ನನ್ನ ಕುಟುಂಬದವರು ಡಾಕ್ಟರ್ ಅಥವಾ ಎಂಜಿನಿಯರ್ ಆಗು ಎಂದು ಹೇಳುತ್ತಿದ್ದರು ಆದರೆ ನಾನು ಕುಟುಂಬ ಸದಸ್ಯರ ಮಾತು ಕೇಳುತ್ತಿರಲಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ