AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆ ತಿರಸ್ಕರಿಸಿದ ಕೇಂದ್ರ; ಜೆಡಿಯುಗೆ ದೊಡ್ಡ ಹೊಡೆತ

ಬಹುಕಾಲದಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸುತ್ತಿದ್ದ ಜೆಡಿಯು ಸಂಸತ್ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.ಆದರೆ ಅಸ್ತಿತ್ವದಲ್ಲಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮಾನದಂಡಗಳನ್ನು ಆಧರಿಸಿ, ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಅಂತರ್ ಸಚಿವಾಲಯದ ಗುಂಪು ಹೇಳಿದೆ.

ಬಿಹಾರದ ವಿಶೇಷ ಸ್ಥಾನಮಾನದ ಬೇಡಿಕೆ ತಿರಸ್ಕರಿಸಿದ ಕೇಂದ್ರ; ಜೆಡಿಯುಗೆ ದೊಡ್ಡ ಹೊಡೆತ
ಮೋದಿ ಜತೆ ನಿತೀಶ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 22, 2024 | 5:31 PM

Share

ದೆಹಲಿ ಜುಲೈ 22: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ (NDA) ಸರ್ಕಾರವು 2012 ರ ಅಂತರ್ ಸಚಿವಾಲಯದ ಗುಂಪು (IMG) ವರದಿಯ ಪ್ರಕಾರ ಬಿಹಾರಕ್ಕೆ (Bihar) ವಿಶೇಷ ಸ್ಥಾನಮಾನವನ್ನು ನೀಡಲಾಗುವುದಿಲ್ಲ ಎಂದು ಸೋಮವಾರ ಹೇಳಿದ್ದು, ನಿತೀಶ್ ಕುಮಾರ್ (Nitish Kumar) ಅವರ ಜನತಾ ದಳ (ಯು) ಗೆ ದೊಡ್ಡ ಹೊಡೆತವನ್ನು ನೀಡಿದೆ.

ಝಂಜರ್‌ಪುರ ಲೋಕಸಭಾ ಸಂಸದ ರಾಮಪ್ರೀತ್ ಮಂಡಲ್ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, “ಯೋಜನೆಯ ಸಹಾಯಕ್ಕಾಗಿ ವಿಶೇಷ ವರ್ಗದ ಸ್ಥಾನಮಾನವನ್ನು ಹಿಂದೆ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ (NDC) ಕೆಲವು ರಾಜ್ಯಗಳಿಗೆ ನೀಡಿತ್ತು. ವಿಶೇಷ ಪರಿಗಣನೆಯ ಅಗತ್ಯವಿರುವ ಹಲವಾರು ವೈಶಿಷ್ಟ್ಯಗಳು (i) ಗುಡ್ಡಗಾಡು ಮತ್ತು ಕಷ್ಟಕರವಾದ ಭೂಪ್ರದೇಶ, (ii) ಕಡಿಮೆ ಜನಸಂಖ್ಯಾ ಸಾಂದ್ರತೆ ಅಥವಾ ಬುಡಕಟ್ಟು ಜನಸಂಖ್ಯೆಯ ಗಣನೀಯ ಪಾಲು, (iii) ನೆರೆಯ ದೇಶಗಳೊಂದಿಗೆ ಗಡಿಯುದ್ದಕ್ಕೂ ಆಯಕಟ್ಟಿನ ಸ್ಥಳ, (iv) ಆರ್ಥಿಕ ಮತ್ತು ಮೂಲಸೌಕರ್ಯ ಹಿಂದುಳಿದಿರುವಿಕೆ  (v) ರಾಜ್ಯ ಹಣಕಾಸುಗಳ ಕಾರ್ಯಸಾಧ್ಯವಲ್ಲದ ಸ್ವಭಾವ. ಮೇಲೆ ಪಟ್ಟಿ ಮಾಡಲಾದ ಎಲ್ಲಾ ಅಂಶಗಳು ಮತ್ತು ರಾಜ್ಯದ ವಿಚಿತ್ರ ಪರಿಸ್ಥಿತಿಯ ಸಮಗ್ರ ಪರಿಗಣನೆಯ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೂ ಮೊದಲು, ವಿಶೇಷ ವರ್ಗದ ಸ್ಥಾನಮಾನಕ್ಕಾಗಿ ಬಿಹಾರದ ವಿನಂತಿಯನ್ನು ಅಂತರ್ ಸಚಿವಾಲಯದ ಗುಂಪು ಪರಿಗಣಿಸಿತ್ತು, ಅದು ತನ್ನ ವರದಿಯನ್ನು ಮಾರ್ಚ್ 30, 2012 ರಂದು ಸಲ್ಲಿಸಿತು. ಅಸ್ತಿತ್ವದಲ್ಲಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮಾನದಂಡಗಳನ್ನು ಆಧರಿಸಿ, ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಅಂತರ್ ಸಚಿವಾಲಯದ ಗುಂಪು ಹೇಳಿದೆ.

ಬಹುಕಾಲದಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸುತ್ತಿದ್ದ ಜೆಡಿಯು ಸಂಸತ್ ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗಳಿಸಿದ್ದು, ಬಹುಮತದ 272 ಸ್ಥಾನ ಬೇಕಿತ್ತು. ಹಾಗಾಗಿ ಬಿಜೆಪಿ ಜೆಡಿ(ಯು) ಮತ್ತು ತೆಲುಗು ದೇಶಂ ಪಕ್ಷದ ಸಹಕಾರದೊಂಗಿ ಸರ್ಕಾರ ರಚನೆ ಮಾಡಿದೆ. ಈ ಪಕ್ಷಗಳು ಕೆಳಮನೆಯಲ್ಲಿ 28 ಸದಸ್ಯರನ್ನು ಹೊಂದಿದ್ದಾರೆ.

ಇದನ್ನೂ ಓದಿ: ಈ ನಿರ್ಧಾರ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ; ನಿಷೇಧ ತೆರವುಗೊಳಿಸಿದ್ದಕ್ಕೆ ಆರ್​ಎಸ್​ಎಸ್​ ಮೆಚ್ಚುಗೆ

ಜೆಡಿಯು ಜೊತೆಗೆ, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೂಡ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಒತ್ತಾಯಿಸಿದೆ, ಇದನ್ನು 2014 ರಲ್ಲಿ ವಿಭಜಿಸಿ ಹೊಸ ತೆಲಂಗಾಣ ರಾಜ್ಯವನ್ನು ರಚಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ