AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ

Narendra Modi raises cross border terrorism issue with China: ಚೀನಾದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಭಯೋತ್ಪಾದನೆ ವಿಚಾರ ಎತ್ತಿದ್ದಾರೆ. ಟಿಯಾಂಜಿನ್​ನಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಭಯೋತ್ಪಾದನೆಯಿಂದ ಎರಡೂ ದೇಶಗಳು ಹೇಗೆ ಬಾಧಿತವಾಗಿವೆ ಎಂಬುದನ್ನು ಷಿ ಜಿಂಪಿಂಗ್ ಅವರಿಗೆ ಮೋದಿ ಮನವರಿಕೆ ಮಾಡಿದ್ದಾರೆ.

ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ
ನರೇಂದ್ರ ಮೋದಿ ಮತ್ತು ಷಿ ಜಿನ್​ಪಿಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2025 | 10:30 PM

Share

ಬೀಜಿಂಗ್, ಆಗಸ್ಟ್ 31: ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತವು ಅಂತಾರಾಷ್ಟ್ರೀಯ ಭಯೋತ್ಪಾದನೆ ವಿಚಾರವನ್ನು (cross-border terrorism issue) ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಟಿಯಾಂಜಿನ್​ನಲ್ಲಿ ಎಸ್​ಸಿಒ ಶೃಂಗಸಭೆಯ (SCO summit) ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ದ್ವಿಪಕ್ಷೀಯ ಮಾತುಕತೆಯಲ್ಲಿ ನರೇಂದ್ರ ಮೋದಿ (Narendra Modi) ಅವರಿಂದ ಪ್ರಸ್ತಾಪವಾದ ಕೆಲ ಸಂಗತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಾತುಕತೆ ವೇಳೆ, ಅಂತಾರಾಷ್ಟ್ರೀಯ ಭಯೋತ್ಪಾದನೆಯು ಭಾರತಕ್ಕೆ ಬಹಳ ಆತಂಕಕಾರಿ ಎನಿಸಿರುವ ಸಂಗತಿಯಾಗಿದೆ. ಇಂಥ ಭಯೋತ್ಪಾದನೆಯು ಭಾರತ ಹಾಗೂ ಚೀನಾ ಎರಡೂ ದೇಶಗಳಿಗೂ ಪರಿಣಾಮ ಬೀರುವಂಥದ್ದು ಎಂಬುದನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

‘ಈ ಅಂತರರಾಷ್ಟ್ರೀಯ ಭಯೋತ್ಪಾದನೆಯ ಭಾರತ ಹಾಗೂ ಚೀನಾ ಈ ಎರಡಕ್ಕೂ ಪರಿಣಾಮ ಬೀರುವಂಥದ್ದು. ಎರಡೂ ದೇಶಗಳು ಪರಸ್ಪರ ಸಹಕಾರ ಹಾಗೂ ಅರಿವಿನಿಂದ ಈ ಸಮಸ್ಯೆ ವಿರುದ್ಧ ಹೋರಾಡುವುದು ಬಹಳ ಮುಖ್ಯ’ ಎಂದು ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಈ ವಿಚಾರದ ಬಗ್ಗೆ ಚೀನೀ ಮುಖ್ಯಸ್ಥರೂ ಸಹಮತ ವ್ಯಕ್ತಪಡಿಸಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಪರಸ್ಪರ ನಂಬಿಕೆ, ಗೌರವದ ಮೇಲೆ ನಮ್ಮ ಸಂಬಂಧ ಮುಂದುವರೆಸಲು ಬದ್ಧ: ಜಿನ್​​ಪಿಂಗ್​​ಗೆ ಮೋದಿ ಸಂದೇಶ

ಚೀನಾ ಮುಖ್ಯಸ್ಥ ಷಿ ಜಿಂಪಿಂಗ್ ಜೊತೆ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನೂ ಕೆಲ ಮಹತ್ವ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಚೀನಾದೊಂದಿಗಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಬೇಕಾದರೆ ಗಡಿ ಭಾಗಗಳಲ್ಲಿ ಶಾಂತಿ ಪರಿಸ್ಥಿತಿ ನೆಲಸಿರುವುದು ಮುಖ್ಯ ಎಂಬುದನ್ನು ಚೀನಾಗೆ ಮನವರಿಕೆ ಮಾಡಲು ಮೋದಿ ಯತ್ನಿಸಿದರೆಂದು ಭಾರತದ ವಿದೇಶಾಂಗ ಕಾರ್ಯದರ್ಶಿಗಳು ವಿವರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಳು ವರ್ಷಗಳ ಬಳಿಕ ಚೀನಾಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಚೀನಾ ಟಿಯಾಂಜಿನ್​ನಲ್ಲಿ ಶಾಂಗೈ ಕೋಆಪರೇಶನ್ ಆರ್ಗನೈಸೇಶನ್​ನ (ಎಸ್​ಸಿಒ) ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಅವರನ್ನು ಕಳೆದ ಒಂದು ವರ್ಷದಿಂದ ಎರಡನೇ ಬಾರಿ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆಗೆ ಜಗ್ಗದ ಮೋದಿ, ಚೀನಾದಲ್ಲಿ ಷಿ ಜಿನ್​​ಪಿಂಗ್, ಪುಟಿನ್ ಜತೆ ಮಾತುಕತೆ

ಈ ಎಸ್​ಸಿಒ ಸಭೆಯು ಜಾಗತಿಕ ರಾಜಕೀಯ ವಲಯದಲ್ಲಿ ಹೊಸ ಸಂದೇಶ ರವಾನಿಸಿದೆ. ಭಾರತ, ಚೀನಾ ಮತ್ತು ರಷ್ಯಾ ಶಕ್ತಿಗಳು ಒಗ್ಗೂಡಿರುವ ಸಂದೇಶ ಎಲ್ಲೆಡೆ ಸಿಕ್ಕಿದೆ. ಹಾಗೆಯೇ, ಅನೇಕ ಅಭಿವೃದ್ಧಿಶೀಲ ದೇಶಗಳ ಮುಖಂಡರು ಈ ಸಮಿಟ್​ನಲ್ಲಿ ಪಾಲ್ಗೊಂಡಿದ್ದಾರೆ. ಇದರೊಂದಿಗೆ ಜಾಗತಿಕ ರಾಜಕೀಯದಲ್ಲಿ ಹೊಸ ಸಮೀಕರಣ ರಚನೆಯಾಗುತ್ತಿರುವಂತೆ ಮೇಲ್ನೋಟಕ್ಕೆ ಭಾಸವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ