AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ-ಪ್ರಧಾನಿ ಮೋದಿ

ದೆಹಲಿ: ರಾಮ್‌ಲೀಲಾ ಮೈದಾನದಲ್ಲಿ ಬಿಜೆಪಿಯ ‘ಧನ್ಯವಾದ ಱಲಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಈ ವೇಳೆ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗೂ ಸಿಎಎ ಬಗ್ಗೆ ಗೊಂದಲ ಬೇಡ ಅದು ದೇಶದ ಒಳಿತಿಗಾಗಿ ಎಂದು ವಿವರಿಸಿದ್ದಾರೆ. ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ: ದೇಶದ ಸಂಸತ್‌ಗೆ ಗೌರವ ಕೊಡುವುದನ್ನು ಕಲಿಯಬೇಕು. ಸಿಎಬಿಯನ್ನು ಎರಡೂ ಸದನಗಳಲ್ಲಿ ಪಾಸ್ ಮಾಡಲಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ. ಆದ್ರೆ ವಿಪಕ್ಷಗಳಿಂದ ಜನರನ್ನು […]

ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ-ಪ್ರಧಾನಿ ಮೋದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 22, 2019 | 3:40 PM

Share

ದೆಹಲಿ: ರಾಮ್‌ಲೀಲಾ ಮೈದಾನದಲ್ಲಿ ಬಿಜೆಪಿಯ ‘ಧನ್ಯವಾದ ಱಲಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಈ ವೇಳೆ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗೂ ಸಿಎಎ ಬಗ್ಗೆ ಗೊಂದಲ ಬೇಡ ಅದು ದೇಶದ ಒಳಿತಿಗಾಗಿ ಎಂದು ವಿವರಿಸಿದ್ದಾರೆ.

ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ: ದೇಶದ ಸಂಸತ್‌ಗೆ ಗೌರವ ಕೊಡುವುದನ್ನು ಕಲಿಯಬೇಕು. ಸಿಎಬಿಯನ್ನು ಎರಡೂ ಸದನಗಳಲ್ಲಿ ಪಾಸ್ ಮಾಡಲಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ಸಿಎಎ ಜಾರಿಗೊಳಿಸಲಾಗಿದೆ. ಆದ್ರೆ ವಿಪಕ್ಷಗಳಿಂದ ಜನರನ್ನು ಪ್ರಚೋದಿಸುವಂಥ ಹೇಳಿಕೆಗಳು ದೇಶದ ಜನರ ದಾರಿ ತಪ್ಪಿಸುತ್ತಿವೆ. ನಾವು ದೇಶದ ಜನರಿಗೆ ಅಧಿಕಾರವನ್ನು ನೀಡುತ್ತಿದ್ದೇವೆ. ಆದ್ರೆ ನಾವು ಹಕ್ಕು ಕಿತ್ತುಕೊಳ್ಳುತ್ತಿದ್ದೇವೆಂದು ಸುಳ್ಳು ವದಂತಿ ಮಾಡಲಾಗುತ್ತಿದೆ.

ವಿಪಕ್ಷಗಳ ನಾಯಕರು ಸುಳ್ಳನ್ನು ಹರಡುತ್ತಿದ್ದಾರೆ ಈ ಸುಳ್ಳನ್ನು ದೇಶದ ಜನರು ಸ್ವೀಕರಿಸುವುದಿಲ್ಲ ಎಂದು ವಿಪಕ್ಷ ನಾಯಕರ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡಿದೆವು ಈ ವೇಳೆ ನಾವು ನಿಮ್ಮ ಜಾತಿಯನ್ನು ಪ್ರಶ್ನಿಸಿದ್ದೇವಾ? ಎಲ್ಲ ಬಡವರ ಮನೆಗೂ ಗ್ಯಾಸ್‌ ಸಂಪರ್ಕ ಕಲ್ಪಿಸಿದ್ದೇವೆ, ಆದ್ರೆ ವಿಪಕ್ಷಗಳು ಮುಸ್ಲಿಮರನ್ನು ಬೆದರಿಸಲು ಯತ್ನಿಸ್ತಿದ್ದಾರೆ ಎಂದು ಹೇಳಿದರು.

ಭಾರತದ ಮರ್ಯಾದೆಯನ್ನು ಕಳೆಯುವ ಪ್ರಯತ್ನವೇಕೆ? ಧರ್ಮದ ಹೆಸರಿನಲ್ಲಿ ನಮ್ಮ ವಿರುದ್ಧ ಸುಳ್ಳು ಆರೋಪವೇಕೆ? ಭಾರತದ ಮರ್ಯಾದೆಯನ್ನು ಕಳೆಯುವ ಪ್ರಯತ್ನವೇಕೆ? ನೀವು ನನ್ನನ್ನು ವಿರೋಧಿಸಿ, ನನ್ನ ಪ್ರತಿಕೃತಿಗೆ ಬೆಂಕಿಯಿಡಿ ಆದ್ರೆ ಸರ್ಕಾರ ಮತ್ತು ಜನರ ಆಸ್ತಿಪಾಸ್ತಿಯನ್ನು ಹಾಳುಮಾಡಬೇಡಿ. ಬೈಕ್ ಹಾಗೂ ಬಸ್‌ಗೆ ಬೆಂಕಿ ಹಚ್ಚುವುದು ಇದೆಂತಹ ಪ್ರತಿಭಟನೆ. ನನ್ನ ಮೇಲೆ ಚಪ್ಪಲಿ ಎಸೆಯಿರಿ ಆದರೆ ದೇಶವನ್ನು ವಿರೋಧಿಸಬೇಡಿ ಎಂದು ಧನ್ಯವಾದ ಱಲಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣದ ವೇಳೆ ಜನತೆಗೆ ಸಂದೇಶ ನೀಡಿದ್ದಾರೆ.

ಪೊಲೀಸರ ಮೇಲೆ ದಾಳಿ ಮಾಡುವುದರಿಂದ ಏನು ಸಿಗುತ್ತೆ? ಅವರು ಯಾರ ಶತ್ರುಗಳೂ ಅಲ್ಲ. ಅವರು ಹಗಲು ರಾತ್ರಿಯೆನ್ನದೆ ಎಲ್ಲರಿಗಾಗಿ ದುಡಿಯುತ್ತಾರೆ. ನಾವು ಎಂದೂ ಯಾರ ಬಳಿಯೂ ಅವರ ಧರ್ಮ ಕೇಳಿಲ್ಲ. ಸಿಎಎ ದೇಶದ ಜನರಿಗೆ ಅಲ್ಲವೇ ಅಲ್ಲ. ಎನ್‌ಆರ್‌ಸಿ ಬಗ್ಗೆಯೂ ಸುಳ್ಳನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು.

ನಿಮಗೆ ನಿಮ್ಮ ಜಾಗದ ಸಂಪೂರ್ಣ ಹಕ್ಕು ಸಿಕ್ಕಿದೆ: ವಿವಿಧತೆಯಲ್ಲಿ ಏಕತೆಯೇ ಭಾರತದ ವಿಶೇಷತೆ. ಈ ಮೈದಾನ ಹಲವು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ದೆಹಲಿಯ 40 ಲಕ್ಷ ಜನರು ಹೊಸಜೀವನ ಆರಂಭಿಸಿದ್ದಾರೆ. ಚುನಾವಣೆಗಳು ಬಂದಾಗ ಭರವಸೆಗಳನ್ನು ನೀಡುತ್ತಾರೆ. ಆದ್ರೆ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದುಕೊಳ್ಳುತ್ತವೆ. ಸಮಸ್ಯೆ ನಿವಾರಿಸುವತ್ತ ಯಾರೂ ಧೈರ್ಯ ತೋರಿಸಿರಲಿಲ್ಲ. ಕಾಲೋನಿ ಅಧಿಕೃತಗೊಳಿಸುವ ಜವಾಬ್ದಾರಿ ವಹಿಸಿಕೊಂಡೆ.

1200ಕ್ಕೂ ಹೆಚ್ಚು ಕಾಲೋನಿಗಳ ನಕ್ಷೆ ಆನ್‌ಲೈನ್‌ ಆಗಿದೆ. ನಿಮಗೆ ನಿಮ್ಮ ಜಾಗದ ಸಂಪೂರ್ಣ ಹಕ್ಕು ಸಿಕ್ಕಿದೆ. ಬೇರೆ ಪಕ್ಷದವರ ವಿಐಪಿಗಳು ಅವರಿಗೇ ಇರಲಿ. ನನ್ನ ವಿಐಪಿಗಳು ಮಾತ್ರ ನೀವು, ವಿಐಪಿಗಳ 2000ಕ್ಕೂ ಹೆಚ್ಚು ಬಂಗಲೆ ಖಾಲಿ ಮಾಡಿಸಲಾಗಿದೆ, ದೆಹಲಿಯಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಭಾಷಣದ ವೇಳೆ ಅನಧಿಕೃತ ಕಾಲೋನಿ ಅಧಿಕೃತಗೊಳಿಸಿರುವ ಬಗ್ಗೆ ಮಾತನಾಡಿದರು.

Published On - 3:37 pm, Sun, 22 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!