AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ರಾಜಕಾರಣ ಕಿತ್ತೊಗೆಯಬೇಕು: ಪ್ರಧಾನಿ ಮೋದಿ

ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಕಾಲಿಡಬೇಕು. ಯಾವುದೇ ರೀತಿಯ ಸ್ವಾರ್ಥಕ್ಕೆ ಒಳಪಡದೇ ಇದ್ದಾಗ ಜನರು ಮೆಚ್ಚಿಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿ ಹೇಳಿದರು.

ಕೌಟುಂಬಿಕ ರಾಜಕಾರಣ ಕಿತ್ತೊಗೆಯಬೇಕು: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
sandhya thejappa
sandhya thejappa| Edited By: |

Updated on: Jan 12, 2021 | 4:36 PM

Share

ದೆಹಲಿ: ವಂಶಪಾರಂಪರ್ಯ ರಾಜಕಾರಣ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು. ಅದನ್ನು ಬುಡಸಮೇತ ಕಿತ್ತು ಎಸೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ 2ನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಪಾರಂಪರಿಕ ರಾಜಕೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ರಾಜಕಾರಣಕ್ಕೆ ಯುವ ಜನತೆ ಬರಬೇಕು. ಕೆಲವೊಂದು ಸಕಾರಾತ್ಮಕ ಬದಲಾವಣೆಗಾಗಿ ಯುವ ಜನತೆಯು ಅನಿವಾರ್ಯವಾಗಿ ರಾಜಕೀಯಕ್ಕೆ ಕಾಲಿಡಬೇಕಾಗುತ್ತದೆ ಎಂದು ತಿಳಿಸಿದರು.

ಕುಟುಂಬ ರಾಜಕಾರಣ ಉಳಿಸುವ ನಿಟ್ಟಿನಲ್ಲಿ ಹಲವರು ಯೋಚಿಸುತ್ತಾರೆ. ಇದು ದೇಶದ ಅಭಿವೃದ್ದಿಗೆ ಒಳಿತಲ್ಲ. ನಿಸ್ವಾರ್ಥ ಮನಸ್ಸಿನಿಂದ ರಾಜಕೀಯಕ್ಕೆ ಬರಬೇಕಾಗುತ್ತದೆ ಎಂದು ತಿಳಿಸಿದ ಪ್ರಧಾನಿ ಮೋದಿ ವಿವೇಕಾನಂದರ ವಿಚಾರಗಳು ಎಲ್ಲರಿಗೂ ಸ್ಫೂರ್ತಿ. ಇವರ ವಿಚಾರಗಳನ್ನು ಮನಗಂಡು ಸಾಗಿದರೆ ಯಶಸ್ಸು ಸಾಧ್ಯವೆಂದರು.

ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಕಾಲಿಡಬೇಕು. ಯಾವುದೇ ರೀತಿಯ ಸ್ವಾರ್ಥಕ್ಕೆ ಒಳಪಡದೇ ಇದ್ದಾಗ ಜನರು ಮೆಚ್ಚಿಕೊಳ್ಳುತ್ತಾರೆ ಎಂದು ತಿಳಿ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆದ ಯುವ ಸಂಸತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಭಾಗವಹಿಸಿದ್ದರು.

ಸಾಮುದಾಯಿಕ ರೋಗ ಪ್ರತಿರೋಧ ಶಕ್ತಿ ಹೆಚ್ಚಾಗುತ್ತಿಲ್ಲ.. ಹಾಗಾದರೆ ಏನು ಮಾಡಬೇಕು? WHO ಹೇಳುವುದೇನು?

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!