AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಗೆ ಕಾರಣ ಹೇಳಿದ ಪ್ರಧಾನಿ ಮೋದಿ

ಈಗ ರದ್ದುಗೊಳಿಸಲಾಗಿರುವ 370 ನೇ ವಿಧಿಯು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಮುಖ್ಯ ಅಡಚಣೆಯಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್‌ಡಿಎ 400 ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುವಂತೆ ನಾನು ಜನರನ್ನು ಕೇಳಿದ್ದೇನೆ ಎಂದು ಮೋದಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಗೆ ಕಾರಣ ಹೇಳಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Feb 20, 2024 | 2:20 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಜಮ್ಮು ಮತ್ತು ಕಾಶ್ಮೀರ(Jammu And Kashmir)ಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ(Article 370)ಯನ್ನು ತೆಗೆದು ಹಾಕಲು ಇದ್ದ ಕಾರಣವನ್ನು ತಿಳಿಸಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, 370ನೇ ವಿಧಿಯು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಅಡ್ಡಗೋಡೆಯಂತಿತ್ತು ಎಂದು ಹೇಳಿದರು. ಈ ಗೋಡೆಯನ್ನು ಸರ್ಕಾರ ಕೆಡವಿದೆ, ಅದನ್ನು ತೆಗೆದುಹಾಕಿದ ನಂತರ ರಾಜ್ಯದ ಜನರಿಗೆ ಪರಿಹಾರವೂ ಸಿಕ್ಕಿದೆ. ಮಹಿಳೆಯರು ಈ ಮೊದಲು ಪಡೆದಿರದ ಹಕ್ಕುಗಳನ್ನು ಪಡೆದರು ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಲೆಗಳಿಗೆ ಬೆಂಕಿ ಹಚ್ಚಿದ ದಿನಗಳು ಇದ್ದವು, ಇಂದು ಶಾಲೆಗಳನ್ನು ಅಲಂಕರಿಸುವ ದಿನಗಳು ಬಂದಿವೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಹಿಂದೆ ತೀವ್ರ ಅನಾರೋಗ್ಯದ ಚಿಕಿತ್ಸೆಗಾಗಿ ದೆಹಲಿಗೆ ಹೋಗಬೇಕಿತ್ತು. ಆದರೆ ಈಗ ಜಮ್ಮುವಿನಲ್ಲೇ ಏಮ್ಸ್ ಸಿದ್ಧವಾಗಿದೆ.

ಮೊದಲು ಅಪಹರಣ, ಪ್ರತ್ಯೇಕತೆಗೆ ಸಂಬಂಧಿಸಿದ ಸುದ್ದಿಯೇ ಇರುತ್ತಿತ್ತು ಕೆಲವೊಮ್ಮೆ ಬಾಂಬ್‌ಗಳು, ಬಂದೂಕುಗಳು, ಅಪಹರಣ ಮತ್ತು ಪ್ರತ್ಯೇಕತೆಗೆ ಸಂಬಂಧಿಸಿದ ಸುದ್ದಿಗಳು ಜಮ್ಮು ಮತ್ತು ಕಾಶ್ಮೀರದಿಂದ ಬರುತ್ತಿತ್ತು ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ ಈಗ ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಯ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. ಈಗ ನಾವು ಅಭಿವೃದ್ಧಿ ಹೊಂದಿದ ಜಮ್ಮು ಮತ್ತು ಕಾಶ್ಮೀರಕ್ಕಾಗಿ ಪ್ರತಿಜ್ಞೆ ಮಾಡಿದ್ದೇವೆ. ಜಮ್ಮು ಮತ್ತು ಕಾಶ್ಮೀರವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂಬ ನಂಬಿಕೆ ನಿಮ್ಮ ಮೇಲಿದೆ. ಕಳೆದ 70 ವರ್ಷಗಳಿಂದ ನನಸಾಗದ ನಿಮ್ಮ ಕನಸುಗಳನ್ನು ಮುಂಬರುವ ಕೆಲವೇ ವರ್ಷಗಳಲ್ಲಿ ಮೋದಿ ಈಡೇರಿಸಲಿದ್ದಾರೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಸ್ವಜನಪಕ್ಷಪಾತದ ಕಪಿಮುಷ್ಠಿಯಿಂದ ಮುಕ್ತವಾಗಿದೆ ಜಮ್ಮು ಮತ್ತು ಕಾಶ್ಮೀರ ಸ್ವಜನಪಕ್ಷಪಾತದ ಬಲಿಪಶುವಾಗಿದೆ, ಇದೀಗ ಆ ಕಪಿಮುಷ್ಠಿಯಿಂದ ರಾಜ್ಯ ಹೊರಬರುತ್ತಿದೆ. ಜಮ್ಮು ಮತ್ತು ಕಾಶ್ಮೀರವು ದಶಕಗಳ ಕಾಲ ರಾಜವಂಶದ ರಾಜಕೀಯದ ಹೊಡೆತವನ್ನು ಅನುಭವಿಸಬೇಕಾಯಿತು . ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಿದ್ದರು. ಜನರ ಹಿತಾಸಕ್ತಿಗಳಿಗಾಗಿ ಅಲ್ಲ, ಜನರ ಕುಟುಂಬಗಳಿಗಾಗಿ ಅಲ್ಲ,  ಈ ರಾಜವಂಶದ ರಾಜಕೀಯದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾತಂತ್ರ್ಯ ಸಿಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದರು.

ಮತ್ತಷ್ಟು ಓದಿ: ಜಮ್ಮುವಿನಲ್ಲಿ 32,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ

ರೈಲಿನಲ್ಲಿ ಕಾಶ್ಮೀರ ತಲುಪಬಹುದು ಕಾಶ್ಮೀರದಲ್ಲಿ ಹೆಚ್ಚಾಗಿ ಬಂದ್, ಮುಷ್ಕರಗಳು ನಡೆಯುತ್ತಿದ್ದವು, ಇಂದು ಶ್ರೀನಗರದಿಂದ ಸಂಗಲ್ದಾನ್‌ಗೆ ಮತ್ತು ಸಂಗಲ್ದಾನ್‌ನಿಂದ ಬಾರಾಮುಲ್ಲಾಗೆ ರೈಲು ಹೊರಟಿದೆ. ದೇಶವಾಸಿಗಳು ರೈಲಿನಲ್ಲಿ ಕಾಶ್ಮೀರ ತಲುಪುವ ದಿನ ದೂರವಿಲ್ಲ. ಇಂದು ಕಾಶ್ಮೀರಕ್ಕೆ ಮೊದಲ ವಿದ್ಯುತ್ ರೈಲು ಸಿಕ್ಕಿದೆ. ಈಗ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ವಂದೇ ಭಾರತ್ ರೈಲುಗಳ ಸೌಲಭ್ಯವನ್ನು ಒದಗಿಸಲಾಗಿದೆ.

2013ರ ದಿನಗಳನ್ನು ನೆನಪಿಸಿಕೊಂಡ ಮೋದಿ 2013ರ ಡಿಸೆಂಬರ್​ನಲ್ಲಿ ಬಜೆಪಿಯ ಚಾಲೆಂಜಿಂಗ್ ರ್ಯಾಲಿಯಲ್ಲಿ ಭಾಗವಹಿಸಿದ್ದಾಗ, ಐಐಟಿ, ಐಐಎಂನಂತಹ ಶಿಕ್ಷಣ ಸಂಸ್ಥೆಗಳನ್ನು ಏಕೆ ಕಟ್ಟಬಾರದು ಎಂಬ ಪ್ರಶ್ನೆ ಎತ್ತಿದ್ದೆ, ಆ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಇಂದು ಜಮ್ಮುನಲ್ಲಿ ಐಐಟಿ ಮತ್ತು ಐಐಎಂ ಇದೆ, ಆದ್ದರಿಂದಲೇ ಜನರು ಮೋದಿಯ ಗ್ಯಾರಂಟಿಯನ್ನು ಈಡೇರಿಸುವ ಗ್ಯಾರಂಟಿ ಎಂದು ಪರಿಗಣಿಸುತ್ತಾರೆ ಎಂದು ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!