Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ ತಲುಪುತ್ತೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ: ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಸಂಸದರಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಸಂದರ್ಭವನ್ನು ಮೆಲುಕು ಹಾಕಿದರು. ನಾನು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಿದಾಗ ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಿನಲ್ಲಿ ತಲೆ ಬಾಗಿಸಿದ್ದೆ, ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ, ಆ ಕ್ಷಣ ನನ್ನ ಮನ ತುಂಬಿ ಬಂದಿತ್ತು, ನಾನು ಊಹಿಸಲೂ ಸಾಧ್ಯವಿರಲಿಲ್ಲ.

Parliament Special Session: ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ ತಲುಪುತ್ತೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ: ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Sep 18, 2023 | 12:09 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಸಂಸದರಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಸಂದರ್ಭವನ್ನು ಮೆಲುಕು ಹಾಕಿದರು. ನಾನು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಿದಾಗ ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಿನಲ್ಲಿ ತಲೆ ಬಾಗಿಸಿದ್ದೆ, ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ, ಆ ಕ್ಷಣ ನನ್ನ ಮನ ತುಂಬಿ ಬಂದಿತ್ತು, ನಾನು ಊಹಿಸಲೂ ಸಾಧ್ಯವಿರಲಿಲ್ಲ. ಆದರೆ ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ತನ್ನು ಪ್ರವೇಶಿಸುತ್ತದೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ, ದೇಶ ನನ್ನನ್ನು ಇಷ್ಟು ಗೌರವಿಸುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದಾರೆ.

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದರು. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

ಆದರೆ ಈ ಸಂಸತ್ ಭವನ ನಿರ್ಮಾಣದಲ್ಲಿ ಬೆವರು ಭಾರತೀಯರದ್ದಿದೆ, ಪರಿಶ್ರಮ ನಮ್ಮ ದೇಶದವರದ್ದು, ಹಣ ಕೂಡ ನಮ್ಮ ದೇಶದವರದ್ದು. ಹೀಗಾಗಿ ಈ ಹಳೆಯ ಸಂಸತ್ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ . ಈ ಅಮೃತ ಕಾಲದಲ್ಲಿ ಹೊಸ ಹುಮ್ಮಸ್ಸು, ಹೊಸ ಉತ್ಸಾಹ, ಹೊಸ ಸಂಕಲ್ಪವನ್ನು ಹೊತ್ತು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಭಾರತದ ಹೊಸ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ.

ಮತ್ತಷ್ಟು ಓದಿ: Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ

ಈ ಅಮೃತಕಾಲದಲ್ಲಿಯೇ ಚಂದ್ರಯಾನವನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಹೊಸ ರೂಪ, ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ, ವಿಜ್ಞಾನಿಗಳ ಸಾಮರ್ಥ್ಯ, ಸಂಕಲ್ಪ ಶಕ್ತಿಯಿಂದ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಜಿ-20 ಯಶಸ್ಸು ದೇಶದ ಹೆಮ್ಮೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ಭಾರತದ ಯಶಸ್ಸು, ಯಾವುದೇ ವ್ಯಕ್ತಿಯ ಅಥವಾ ಯಾವುದೇ ಪಕ್ಷದ ಯಶಸ್ಸಲ್ಲ. ಇದು ದೇಶದ ಹೆಮ್ಮೆಯನ್ನು ಹೆಚ್ಚಿಸಲಿದೆ. ಭಾರತವು ಜಿ 20 ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದೆ ಎಂಬ ಅಂಶದ ಬಗ್ಗೆ ಭಾರತವು ಯಾವಾಗಲೂ ಹೆಮ್ಮೆಪಡುತ್ತದೆ. ಸ್ವಾತಂತ್ರ್ಯ ಬಂದ ನಂತರವೂ ದೇಶದ ಅನೇಕ ಜನರಲ್ಲಿ ದೇಶದ ಬಗ್ಗೆ ಅನುಮಾನದ ಭಾವನೆ ಇದೆ ಎಂದರು.

ಯಾರಾದರೂ ತನ್ನ ಹಳೆಯ ಮನೆಯನ್ನು ತೊರೆದು ಹೊಸದಕ್ಕೆ ಹೋದಾಗ, ಹಳೆಯ ನೆನಪುಗಳು ಕಾಡುತ್ತಿರುತ್ತದೆ, ಇಂದು ಸಂಸತ್ತಿನಲ್ಲಿ ನಮ್ಮ ಮನಸ್ಸು ಕೂಡ ನೆನಪುಗಳಿಂದ ತುಂಬಿದೆ. ಇಲ್ಲಿ ನಾವು ಸಿಹಿ ಮತ್ತು ಕಹಿ ಕ್ಷಣಗಳನ್ನು ನೋಡಿದ್ದೇವೆ, ಸ್ವತಂತ್ರ ಭಾರತದ ಪುನರ್ನಿರ್ಮಾಣಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ಈ 75 ವರ್ಷಗಳಲ್ಲಿ ಈ ಸದನದ ನಡೆದಿದ್ದವು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್