Parliament Special Session: ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ ತಲುಪುತ್ತೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ: ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಸಂಸದರಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಸಂದರ್ಭವನ್ನು ಮೆಲುಕು ಹಾಕಿದರು. ನಾನು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಿದಾಗ ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಿನಲ್ಲಿ ತಲೆ ಬಾಗಿಸಿದ್ದೆ, ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ, ಆ ಕ್ಷಣ ನನ್ನ ಮನ ತುಂಬಿ ಬಂದಿತ್ತು, ನಾನು ಊಹಿಸಲೂ ಸಾಧ್ಯವಿರಲಿಲ್ಲ.

Parliament Special Session: ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ ತಲುಪುತ್ತೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ: ಮೋದಿ
ನರೇಂದ್ರ ಮೋದಿ
Follow us
|

Updated on: Sep 18, 2023 | 12:09 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರು ಸಂಸದರಾಗಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಸಂದರ್ಭವನ್ನು ಮೆಲುಕು ಹಾಕಿದರು. ನಾನು ಮೊದಲ ಬಾರಿಗೆ ಸಂಸತ್ ಭವನವನ್ನು ಪ್ರವೇಶಿಸಿದಾಗ ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಿನಲ್ಲಿ ತಲೆ ಬಾಗಿಸಿದ್ದೆ, ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ, ಆ ಕ್ಷಣ ನನ್ನ ಮನ ತುಂಬಿ ಬಂದಿತ್ತು, ನಾನು ಊಹಿಸಲೂ ಸಾಧ್ಯವಿರಲಿಲ್ಲ. ಆದರೆ ರೈಲ್ವೆ ಪ್ಲಾಟ್​ಫಾರ್ಮ್​ನಲ್ಲಿ ಮಲಗುವ ಮಗು ಸಂಸತ್ತನ್ನು ಪ್ರವೇಶಿಸುತ್ತದೆ ಎಂದರೆ ಇದೇ ಭಾರತದ ಪ್ರಜಾಪ್ರಭುತ್ವದ ಶಕ್ತಿ, ದೇಶ ನನ್ನನ್ನು ಇಷ್ಟು ಗೌರವಿಸುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದಾರೆ.

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದರು. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

ಆದರೆ ಈ ಸಂಸತ್ ಭವನ ನಿರ್ಮಾಣದಲ್ಲಿ ಬೆವರು ಭಾರತೀಯರದ್ದಿದೆ, ಪರಿಶ್ರಮ ನಮ್ಮ ದೇಶದವರದ್ದು, ಹಣ ಕೂಡ ನಮ್ಮ ದೇಶದವರದ್ದು. ಹೀಗಾಗಿ ಈ ಹಳೆಯ ಸಂಸತ್ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ . ಈ ಅಮೃತ ಕಾಲದಲ್ಲಿ ಹೊಸ ಹುಮ್ಮಸ್ಸು, ಹೊಸ ಉತ್ಸಾಹ, ಹೊಸ ಸಂಕಲ್ಪವನ್ನು ಹೊತ್ತು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಭಾರತದ ಹೊಸ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ.

ಮತ್ತಷ್ಟು ಓದಿ: Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ

ಈ ಅಮೃತಕಾಲದಲ್ಲಿಯೇ ಚಂದ್ರಯಾನವನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಹೊಸ ರೂಪ, ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ, ವಿಜ್ಞಾನಿಗಳ ಸಾಮರ್ಥ್ಯ, ಸಂಕಲ್ಪ ಶಕ್ತಿಯಿಂದ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಜಿ-20 ಯಶಸ್ಸು ದೇಶದ ಹೆಮ್ಮೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ಭಾರತದ ಯಶಸ್ಸು, ಯಾವುದೇ ವ್ಯಕ್ತಿಯ ಅಥವಾ ಯಾವುದೇ ಪಕ್ಷದ ಯಶಸ್ಸಲ್ಲ. ಇದು ದೇಶದ ಹೆಮ್ಮೆಯನ್ನು ಹೆಚ್ಚಿಸಲಿದೆ. ಭಾರತವು ಜಿ 20 ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದೆ ಎಂಬ ಅಂಶದ ಬಗ್ಗೆ ಭಾರತವು ಯಾವಾಗಲೂ ಹೆಮ್ಮೆಪಡುತ್ತದೆ. ಸ್ವಾತಂತ್ರ್ಯ ಬಂದ ನಂತರವೂ ದೇಶದ ಅನೇಕ ಜನರಲ್ಲಿ ದೇಶದ ಬಗ್ಗೆ ಅನುಮಾನದ ಭಾವನೆ ಇದೆ ಎಂದರು.

ಯಾರಾದರೂ ತನ್ನ ಹಳೆಯ ಮನೆಯನ್ನು ತೊರೆದು ಹೊಸದಕ್ಕೆ ಹೋದಾಗ, ಹಳೆಯ ನೆನಪುಗಳು ಕಾಡುತ್ತಿರುತ್ತದೆ, ಇಂದು ಸಂಸತ್ತಿನಲ್ಲಿ ನಮ್ಮ ಮನಸ್ಸು ಕೂಡ ನೆನಪುಗಳಿಂದ ತುಂಬಿದೆ. ಇಲ್ಲಿ ನಾವು ಸಿಹಿ ಮತ್ತು ಕಹಿ ಕ್ಷಣಗಳನ್ನು ನೋಡಿದ್ದೇವೆ, ಸ್ವತಂತ್ರ ಭಾರತದ ಪುನರ್ನಿರ್ಮಾಣಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ಈ 75 ವರ್ಷಗಳಲ್ಲಿ ಈ ಸದನದ ನಡೆದಿದ್ದವು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್