AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ, ನೀರು ಒಟ್ಟಿಗೆ ಹರಿಯಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

Narendra Modi speech highlights: ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂದೂರದ ಬಳಿಕ ಅವರು ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಹೆಣ್ಮಕ್ಕಳ ಸಿಂದೂರ ಅಳಿಸಿದ ಉಗ್ರರಿಗೆ ತಕ್ಕ ಪಾಠ ಕಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಕ್ತ, ನೀರು ಒಟ್ಟಿಗೆ ಹರಿಯಲ್ಲ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 12, 2025 | 9:02 PM

Share

ನವದೆಹಲಿ, ಮೇ 12: ಪಾಕಿಸ್ತಾನದ ಜೊತೆ ಮಾತುಕತೆ ನಡೆಸುವುದೇ ಆದಲ್ಲಿ ಅದು ಭಯೋತ್ಪಾದನೆ ವಿಚಾರವಾಗಿ ಆಗುತ್ತದೆ, ಅಥವಾ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ವಿಚಾರವಾಗಿ ಆಗುತ್ತದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂದೂರ (Operation Sindoor) ಶುರುವಾದ ಬಳಿಕ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಪಾಕಿಸ್ತಾನ ಹಾಗೂ ಅದರ ಉಗ್ರ ಕೃತ್ಯಗಳನ್ನು ಕಟುವಾಗಿ ಖಂಡಿಸಿದರು. ಮಾತುಕತೆಗೆ ಕೂರುವಂತೆ ಭಾರತವನ್ನು ಒತ್ತಾಯಿಸುತ್ತಿರುವ ಪಾಕಿಸ್ತಾನಕ್ಕೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಇರಲು ಸಾಧ್ಯ ಇಲ್ಲ. ವ್ಯಾಪಾರ ಮತ್ತು ಭಯೋತ್ಪಾದನೆ ಒಟ್ಟಿಗೆ ಆಗಲು ಸಾಧ್ಯವಿಲ್ಲ. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯ ಇಲ್ಲ ಎಂದು ನರೇಂದ್ರ ಮೋದಿ ಹೇಳಿದರು. ಈ ಮೂಲಕ, ಪಾಕಿಸ್ತಾನ ಭಾರತದ ಜೊತೆ ಮಾತುಕತೆಗೆ ಬರುವ ಆಸಕ್ತಿ ಇದ್ದರೆ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವುದನ್ನು ನಿಲ್ಲಿಸಲಿ ಎನ್ನುವ ಖಡಕ್ ಸಂದೇಶವನ್ನು ಪ್ರಧಾನಿಗಳು ರವಾನಿಸಿದರು.

ಇದನ್ನೂ ಓದಿ: ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಪರಿಣಾಮ ಏನೆಂತ ಉಗ್ರರಿಗೆ ತೋರಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ಹಾಗೆಯೇ, ನೀರು ಮತ್ತು ರಕ್ತ ಒಟ್ಟಿಗೆ ಹರಿಯೋದಿಲ್ಲ ಎಂದು ಹೇಳುವ ಮೂಲಕ ಅವರು ಸಿಂಧೂ ನದಿ ನೀರನ್ನು ಪಾಕಿಸ್ತಾನಕ್ಕೆ ಬಿಡುವ ನಿರ್ಧಾರ ಸದ್ಯಕಂತೂ ಇಲ್ಲ ಎನ್ನುವ ಸಂದೇಶ ನೀಡಿದರು. ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನದೊಂದಿಗೆ ಮಾಡಿಕೊಳ್ಳಲಾದ ಸಿಂಧೂ ಜಲ ಒಪ್ಪಂದದಿಂದ ಭಾರತ ಹಿಂದಕ್ಕೆ ಸರಿಯಿತು. ತನ್ನ ಅಣೆಕಟ್ಟೆಯಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದೆ. ಈ ಸಿಂಧೂ ನದಿಯು ಪಾಕಿಸ್ತಾನದ ಶೇ. 40ರಷ್ಟು ಕೃಷಿಗೆ ಆಧಾರವಾಗಿದೆ. ಭಾರತದ ಈ ನಿರ್ಧಾರವು ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಏನಾಗುತ್ತೆ ನೋಡಿ…

ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಸೇನೆ ನಡೆಸಿದ ಆಪರೇಷನ್ ಸಿಂದೂ ಯಶಸ್ವಿಯಾಯಿತು ಎಂದು ಹೇಳಿದರು. ಸೇನೆಯ ಈ ಪರಾಕ್ರಮವನ್ನು ಎಲ್ಲಾ ದೇಶವಾಸಿಗಳು ಹಾಗೂ ಹೆಣ್ಮಕ್ಕಳಿಗೆ ಅರ್ಪಿಸುತ್ತೇವೆ ಎಂದರು.

ಇದನ್ನೂ ಓದಿ: ದೇಶದ ಹೆಣ್ಣುಮಕ್ಕಳಿಗೆ ‘ಆಪರೇಷನ್ ಸಿಂಧೂರ’ ಅರ್ಪಿಸಿದ ಪ್ರಧಾನಿ ಮೋದಿ

ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಪರಿಣಾಮ ಏನು ಎಂಬುದು ಉಗ್ರರಿಗೆ ಗೊತ್ತಾಗಿದೆ. ಭಾರತದಿಂದ ಈ ದೊಡ್ಡ ನಡೆ ಎದುರಾಗುತ್ತದೆ ಎಂದು ಉಗ್ರರು ಕನಸು ಮನಸಿನಲ್ಲೂ ಯೋಚಿಸಿರಲಿಲ್ಲ ಎಂದು ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!