AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ

Parliament: ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ 'ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ' ಎಂಬ ಭೋಜ್​ಪುರಿ ಗಾದೆಯನ್ನು ಉಲ್ಲೇಖಿಸಿದ್ದಾರೆ.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ
ಲೋಕಸಭೆಯಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 10, 2021 | 8:22 PM

Share

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭೋಜ್​ಪು​ರಿ ಗಾದೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ ‘ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ’ ಎಂಬ ಭೋಜ್​ಪುರಿ ಗಾದೆಯನ್ನುಉಲ್ಲೇಖಿಸಿದ್ದಾರೆ. ‘ಆಟವಾಡಲ್ಲ, ಆಟವಾಡಲೂ ಬಿಡಲ್ಲ, ಆಟವನ್ನು ಕೆಡಿಸಿ ಬಿಡುವುದು’ ಎಂದು ಈ ಗಾದೆ ಮಾತಿನ ಅರ್ಥ.

ಇದಕ್ಕಿಂತ ಮುನ್ನ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ ಮೋದಿ, ಕಾಂಗ್ರೆಸ್ ಈ ದೇಶದ ಹಳೇ ಪಕ್ಷ. ಅವರು ಸುಮಾರು 6 ದಶಕಗಳ ಕಾಲ ಅಧಿಕಾರದಲ್ಲಿದ್ದರು. ಆದರೆ ಈಗ ಆ ಪಕ್ಷ ಯಾವ ರೀತಿ ಆಗಿದೆ? ಕಾಂಗ್ರೆಸ್ ವಿಭಜಿತ ಪಕ್ಷವಾಗಿದೆ. ಅವರು ಎಷ್ಟು ಗೊಂದಲದಲ್ಲಿದ್ದಾರೆ ಎಂದರೆ ರಾಜ್ಯ ಸಭೆಯಲ್ಲೊಂದು, ಲೋಕಸಭೆಯಲ್ಲೊಂದು ರೀತಿ ನಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಕಳೆದ 6 ವರ್ಷಗಳಿಂದ ನೋಡುತ್ತಲೇ ಇದ್ದೇನೆ, ವಿಪಕ್ಷದ ಅಜೆಂಡಾಗಳು ಎಷ್ಟು ಬಾರಿ ಬದಲಾದವು. ನಾವು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿದ್ದೆವು. ಆದರೆ ಈಗ ಯಾರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಶರದ್ ಪವಾರ್ ಅವರ ಮಾತನ್ನು ಉಲ್ಲೇಖಿಸಿದ ಮೋದಿ, ಅವರೀಗ  ಜನರನ್ನು ಮರಳು ಮಾಡುತ್ತಿದ್ದಾರೆ. ಈ ಹಿಂದೆ ಅವರು ಎಪಿಎಂಸಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Narendra Modi In Lok Sabha | ಕೃಷಿ ಸುಧಾರಣೆಗೆ ಸರ್ಕಾರದ ಮಧ್ಯಪ್ರವೇಶ ಅನಿವಾರ್ಯ; ನೂತನ ಕೃಷಿ ಕಾಯ್ದೆಗಳಿಗೆ ನರೇಂದ್ರ ಮೋದಿ ಸಮರ್ಥನೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ