AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ

Parliament: ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ 'ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ' ಎಂಬ ಭೋಜ್​ಪುರಿ ಗಾದೆಯನ್ನು ಉಲ್ಲೇಖಿಸಿದ್ದಾರೆ.

ಲೋಕಸಭೆಯಲ್ಲಿ ಭೋಜ್​ಪು​ರಿ ಗಾದೆ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟ ನರೇಂದ್ರ ಮೋದಿ
ಲೋಕಸಭೆಯಲ್ಲಿ ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 10, 2021 | 8:22 PM

Share

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭೋಜ್​ಪು​ರಿ ಗಾದೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ತಾವು ಮಾಡುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ವಿಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸೂಚ್ಯವಾಗಿ ಹೇಳಿದ ಮೋದಿ ‘ನಾ ಖೇಲಬ್, ನಾ ಖೇಲೆ ದೇ, ಖೇಲಾ ಕೆ ಬಿಗಾಡೆ’ ಎಂಬ ಭೋಜ್​ಪುರಿ ಗಾದೆಯನ್ನುಉಲ್ಲೇಖಿಸಿದ್ದಾರೆ. ‘ಆಟವಾಡಲ್ಲ, ಆಟವಾಡಲೂ ಬಿಡಲ್ಲ, ಆಟವನ್ನು ಕೆಡಿಸಿ ಬಿಡುವುದು’ ಎಂದು ಈ ಗಾದೆ ಮಾತಿನ ಅರ್ಥ.

ಇದಕ್ಕಿಂತ ಮುನ್ನ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ ಮೋದಿ, ಕಾಂಗ್ರೆಸ್ ಈ ದೇಶದ ಹಳೇ ಪಕ್ಷ. ಅವರು ಸುಮಾರು 6 ದಶಕಗಳ ಕಾಲ ಅಧಿಕಾರದಲ್ಲಿದ್ದರು. ಆದರೆ ಈಗ ಆ ಪಕ್ಷ ಯಾವ ರೀತಿ ಆಗಿದೆ? ಕಾಂಗ್ರೆಸ್ ವಿಭಜಿತ ಪಕ್ಷವಾಗಿದೆ. ಅವರು ಎಷ್ಟು ಗೊಂದಲದಲ್ಲಿದ್ದಾರೆ ಎಂದರೆ ರಾಜ್ಯ ಸಭೆಯಲ್ಲೊಂದು, ಲೋಕಸಭೆಯಲ್ಲೊಂದು ರೀತಿ ನಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಕಳೆದ 6 ವರ್ಷಗಳಿಂದ ನೋಡುತ್ತಲೇ ಇದ್ದೇನೆ, ವಿಪಕ್ಷದ ಅಜೆಂಡಾಗಳು ಎಷ್ಟು ಬಾರಿ ಬದಲಾದವು. ನಾವು ಭ್ರಷ್ಟಾಚಾರದ ವಿರುದ್ಧ ದನಿಯೆತ್ತುತ್ತಿದ್ದೆವು. ಆದರೆ ಈಗ ಯಾರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಶರದ್ ಪವಾರ್ ಅವರ ಮಾತನ್ನು ಉಲ್ಲೇಖಿಸಿದ ಮೋದಿ, ಅವರೀಗ  ಜನರನ್ನು ಮರಳು ಮಾಡುತ್ತಿದ್ದಾರೆ. ಈ ಹಿಂದೆ ಅವರು ಎಪಿಎಂಸಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Narendra Modi In Lok Sabha | ಕೃಷಿ ಸುಧಾರಣೆಗೆ ಸರ್ಕಾರದ ಮಧ್ಯಪ್ರವೇಶ ಅನಿವಾರ್ಯ; ನೂತನ ಕೃಷಿ ಕಾಯ್ದೆಗಳಿಗೆ ನರೇಂದ್ರ ಮೋದಿ ಸಮರ್ಥನೆ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ