AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಿ ಸುನಕ್​​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಭಾರತ-ಯುಕೆ ಮುಕ್ತ ವಹಿವಾಟು ಒಪ್ಪಂದ ಬಗ್ಗೆ ಚರ್ಚೆ

ಇಂದು ರಿಷಿ ಸುನಕ್ ಜತೆ ಮಾತನಾಡಲು ಸಂತೋಷವಾಗಿದೆ. ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ.

ರಿಷಿ ಸುನಕ್​​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಭಾರತ-ಯುಕೆ ಮುಕ್ತ ವಹಿವಾಟು ಒಪ್ಪಂದ ಬಗ್ಗೆ ಚರ್ಚೆ
ರಿಷಿ ಸುನಕ್
TV9 Web
| Edited By: |

Updated on:Oct 27, 2022 | 10:16 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬ್ರಿಟನ್‌ನ ನೂತನ ಪ್ರಧಾನಿ ರಿಷಿ ಸುನಕ್ (Rishi Sunak)ಅವರೊಂದಿಗೆ ಇಂದು ಮಾತನಾಡಿದ್ದು ಭಾರತ ಮತ್ತು ಯುಕೆ ನಡುವಿನ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಇಂದು ರಿಷಿ ಸುನಕ್ ಜತೆ ಮಾತನಾಡಲು ಸಂತೋಷವಾಗಿದೆ. ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಗ್ರ ಮತ್ತು ಸಮತೋಲಿತ ಮುಕ್ತ ವಹಿವಾಟು ಒಪ್ಪಂದದ ಆರಂಭಿಕ ತೀರ್ಮಾನದ ಪ್ರಾಮುಖ್ಯತೆಯನ್ನು ಸಹ ನಾವು ಒಪ್ಪಿಕೊಂಡಿದ್ದೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಿಷಿ ಸುನಕ್ ಧನ್ಯವಾದ ಎಂದಿದ್ದಾರೆ

ನಾನು ನನ್ನ ಹೊಸ ಪಾತ್ರನ್ನು ಪ್ರಾರಂಭಿಸುತ್ತಿರುವಾಗ ವಿನಯದ ಮಾತುಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಯುಕೆ ಮತ್ತು ಭಾರತ ಬಹಳಷ್ಟು ಹಂಚಿಕೊಂಡಿದೆ. ಮುಂದಿನ ತಿಂಗಳುಗಳು ಮತ್ತು ವರ್ಷಗಳಲ್ಲಿ ನಮ್ಮ ಭದ್ರತೆ, ರಕ್ಷಣೆ ಮತ್ತು ಆರ್ಥಿಕ ಪಾಲುದಾರಿಕೆಯನ್ನು ನಾವು ಗಾಢಗೊಳಿಸುವುದರಿಂದ ನಮ್ಮ ಎರಡು ಮಹಾನ್ ಪ್ರಜಾಪ್ರಭುತ್ವಗಳು ಏನನ್ನು ಸಾಧಿಸಬಹುದು ಎಂಬುದರ ಕುರಿತು ನಾನು ಉತ್ಸುಕನಾಗಿದ್ದೇನೆ ಎಂದು ಸುನಕ್ ಟ್ವೀಟ್ ಮಾಡಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಲು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಕೂಡ ಶುಕ್ರವಾರ ಭಾರತಕ್ಕೆ ಬರುತ್ತಿದ್ದಾರೆ. ಇಬ್ಬರೂ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬ್ರಿಟನ್‌ನ ವಿದೇಶಾಂಗ ಕಚೇರಿ ಇಂದು ತಿಳಿಸಿದೆ.

ಬ್ರಿಟನ್ ಭಾರತದೊಂದಿಗೆ ಮುಕ್ತ-ವ್ಯಾಪಾರ ಒಪ್ಪಂದದ ಬಹುಪಾಲು ವಿಭಾಗಗಳನ್ನು ಪೂರ್ಣಗೊಳಿಸಿದೆ. ಆದರೆ ಅದು ನ್ಯಾಯಯುತ ಮತ್ತು ಪರಸ್ಪರ ಎಂದು ತಿಳಿದ ನಂತರ ಮಾತ್ರ ಒಪ್ಪಂದಕ್ಕೆ ಸಹಿ ಹಾಕುತ್ತದೆ ಎಂದು ವ್ಯಾಪಾರ ಇಲಾಖೆ ಸಚಿವ ಗ್ರೆಗ್ ಹ್ಯಾಂಡ್ಸ್ ನಿನ್ನೆ ಹೇಳಿದ್ದಾರೆ.  “ನಾವು ಈಗಾಗಲೇ ಹೆಚ್ಚಿನ ವಿಷಯಗಳನ್ನು ಚರ್ಚಿಸಿದ್ದು ಶೀಘ್ರದಲ್ಲೇ ಮುಂದಿನ ಸುತ್ತಿನ ಮಾತುಕತೆಗಳನ್ನು ಎದುರು ನೋಡುತ್ತಿದ್ದೇವೆ” ಎಂದು ಹ್ಯಾಂಡ್ಸ್ ಸಂಸತ್ ನಲ್ಲಿ ತಿಳಿಸಿದರು. ಈ ವಾರದ ಆರಂಭದಲ್ಲಿ ಗಡುವು ಮುಗಿದ್ದಿದ್ದು ದೀಪಾವಳಿಯೊಳಗೆ ಒಪ್ಪಂದವನ್ನು ಪೂರ್ಣಗೊಳಿಸಬೇಕೆಂದು ಸರ್ಕಾರವು ಹಿಂದೆ ಹೇಳಿತ್ತು.

Published On - 9:59 pm, Thu, 27 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ