AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ತಡೆಗೆ ನಾಳೆಯಿಂದ ‘ಸಂಜೀವಿನಿ ಲಸಿಕೆ’ ಪರ್ವ! ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ100 ಮಂದಿಗೆ ಲಸಿಕೆ

ನಾಳೆಯಿಂದ(ಜ.16) ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯಲಿದ್ದು ನಾಳೆ ಬೆಳಿಗ್ಗೆ 10.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಮಹಾಮಾರಿ ತಡೆಗೆ ನಾಳೆಯಿಂದ ‘ಸಂಜೀವಿನಿ ಲಸಿಕೆ’ ಪರ್ವ! ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ100 ಮಂದಿಗೆ ಲಸಿಕೆ
ಪ್ರಧಾನಿ ನರೇಂದ್ರ ಮೋದಿ (FILE PHOTO)
ಆಯೇಷಾ ಬಾನು
ಆಯೇಷಾ ಬಾನು|

Updated on:Jan 15, 2021 | 11:51 AM

Share

ಬೆಂಗಳೂರು: ಕೊರೊನಾಗೆ ಬ್ರೇಕ್ ಹಾಕಲು ವ್ಯಾಕ್ಸಿನ್​ ಪರ್ವಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ನಾಳೆಯಿಂದ (ಜ. 16) ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯಲಿದ್ದು ನಾಳೆ ಬೆಳಗ್ಗೆ 10.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಚಾಲನೆಗೆ ದೆಹಲಿಯ ಎರಡು ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬಳಿಕ ಕೆಲ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಶನಿವಾರದಿಂದ ದೇಶದಲ್ಲಿ 3 ಸಾವಿರ‌ ಸ್ಥಳಗಳಲ್ಲಿ ಲಸಿಕೆ ನೀಡಿಕೆ ಶುರುವಾಗುತ್ತೆ. ಜನವರಿ ಅಂತ್ಯದ ವೇಳೆಗೆ 5 ಸಾವಿರ ಸ್ಥಳದಲ್ಲಿ ಲಸಿಕೆ ನೀಡಲಾಗುತ್ತೆ. ಹಾಗೂ ಮಾರ್ಚ್ ಅಂತ್ಯಕ್ಕೆ ದೇಶದ 12 ಸಾವಿರ ಸ್ಥಳದಲ್ಲಿ ಲಸಿಕೆ ನೀಡಲಾಗುತ್ತೆ.

ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ ನೂರು ಮಂದಿಗೆ ಲಸಿಕೆ ಮೊದಲ ದಿನ ಪ್ರತಿಯೊಂದು ಸ್ಥಳದಲ್ಲಿ ನೂರು ಮಂದಿಗೆ ಲಸಿಕೆ ನೀಡಲಾಗುತ್ತೆ. ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಐದು ಮಂದಿ ಸಿಬ್ಬಂದಿ ನಿಯೋಜನೆ ಮಾಡಲಾಗಿರುತ್ತೆ. ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಯಾವುದಾದರೊಂದು ಬ್ರಾಂಡ್ ಲಸಿಕೆ ಮಾತ್ರ ಲಭ್ಯವಿರುತ್ತೆ. ಮೊದಲ ಡೋಸ್ ಬ್ರಾಂಡ್ ಲಸಿಕೆಯನ್ನ ಎರಡನೇ ಡೋಸ್ ಆಗಿ ನೀಡೋದ್ರಿಂದ ಲಸಿಕೆಯ ಬ್ರಾಂಡ್ ಗೊಂದಲಕ್ಕೆ ಅವಕಾಶ ಇರುವುದಿಲ್ಲ. ಲಸಿಕೆ ಬಗೆಗಿನ ಮಾಹಿತಿಯನ್ನು ಕೋ ವಿನ್ ಆ್ಯಪ್​ನಲ್ಲಿ ದಾಖಲು ಮಾಡಲಾಗುತ್ತೆ.

ವಾರದಲ್ಲಿ ನಾಲ್ಕು ದಿನ ಅಂದ್ರೆ ಸೋಮವಾರ, ಬುಧವಾರ, ಗುರುವಾರ, ಶನಿವಾರ ಕೊರೊನಾ ಲಸಿಕೆ ನೀಡಿಕೆಗೆ ಮೀಸಲು. ಮತ್ತು ಮಂಗಳವಾರ, ಶುಕ್ರವಾರ ಇತರೆ ಆರೋಗ್ಯ ಕಾರ್ಯಕ್ರಮ, ಲಸಿಕೆ ನೀಡಿಕೆಗೆ ಮೀಸಲು. ಕೊರೊನಾ ಲಸಿಕೆ ನೀಡಿಕೆಯಿಂದ ಬೇರೆ ಹೆಲ್ತ್‌ಕೇರ್ ಚಟುವಟಿಕೆಗೆ ತೊಂದರೆ ಆಗಬಾರದು ಎಂದು ಈ ರೀತಿ ದಿನಗಳನ್ನು ಗುರುತು ಮಾಡಲಾಗಿದೆ. ಶನಿವಾರವೇ ದೇಶದ 3 ಸಾವಿರ ಸ್ಥಳಗಳಲ್ಲಿ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ‌ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Published On - 11:50 am, Fri, 15 January 21

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ