AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ತಡೆಗೆ ನಾಳೆಯಿಂದ ‘ಸಂಜೀವಿನಿ ಲಸಿಕೆ’ ಪರ್ವ! ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ100 ಮಂದಿಗೆ ಲಸಿಕೆ

ನಾಳೆಯಿಂದ(ಜ.16) ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯಲಿದ್ದು ನಾಳೆ ಬೆಳಿಗ್ಗೆ 10.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಮಹಾಮಾರಿ ತಡೆಗೆ ನಾಳೆಯಿಂದ ‘ಸಂಜೀವಿನಿ ಲಸಿಕೆ’ ಪರ್ವ! ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ100 ಮಂದಿಗೆ ಲಸಿಕೆ
ಪ್ರಧಾನಿ ನರೇಂದ್ರ ಮೋದಿ (FILE PHOTO)
ಆಯೇಷಾ ಬಾನು
|

Updated on:Jan 15, 2021 | 11:51 AM

Share

ಬೆಂಗಳೂರು: ಕೊರೊನಾಗೆ ಬ್ರೇಕ್ ಹಾಕಲು ವ್ಯಾಕ್ಸಿನ್​ ಪರ್ವಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ನಾಳೆಯಿಂದ (ಜ. 16) ದೇಶಾದ್ಯಂತ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯಲಿದ್ದು ನಾಳೆ ಬೆಳಗ್ಗೆ 10.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಚಾಲನೆಗೆ ದೆಹಲಿಯ ಎರಡು ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬಳಿಕ ಕೆಲ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಶನಿವಾರದಿಂದ ದೇಶದಲ್ಲಿ 3 ಸಾವಿರ‌ ಸ್ಥಳಗಳಲ್ಲಿ ಲಸಿಕೆ ನೀಡಿಕೆ ಶುರುವಾಗುತ್ತೆ. ಜನವರಿ ಅಂತ್ಯದ ವೇಳೆಗೆ 5 ಸಾವಿರ ಸ್ಥಳದಲ್ಲಿ ಲಸಿಕೆ ನೀಡಲಾಗುತ್ತೆ. ಹಾಗೂ ಮಾರ್ಚ್ ಅಂತ್ಯಕ್ಕೆ ದೇಶದ 12 ಸಾವಿರ ಸ್ಥಳದಲ್ಲಿ ಲಸಿಕೆ ನೀಡಲಾಗುತ್ತೆ.

ಪ್ರತಿ ಲಸಿಕಾ ಕೇಂದ್ರದಲ್ಲಿ ದಿನಕ್ಕೆ ನೂರು ಮಂದಿಗೆ ಲಸಿಕೆ ಮೊದಲ ದಿನ ಪ್ರತಿಯೊಂದು ಸ್ಥಳದಲ್ಲಿ ನೂರು ಮಂದಿಗೆ ಲಸಿಕೆ ನೀಡಲಾಗುತ್ತೆ. ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಐದು ಮಂದಿ ಸಿಬ್ಬಂದಿ ನಿಯೋಜನೆ ಮಾಡಲಾಗಿರುತ್ತೆ. ಪ್ರತಿಯೊಂದು ಲಸಿಕಾ ಕೇಂದ್ರದಲ್ಲಿ ಯಾವುದಾದರೊಂದು ಬ್ರಾಂಡ್ ಲಸಿಕೆ ಮಾತ್ರ ಲಭ್ಯವಿರುತ್ತೆ. ಮೊದಲ ಡೋಸ್ ಬ್ರಾಂಡ್ ಲಸಿಕೆಯನ್ನ ಎರಡನೇ ಡೋಸ್ ಆಗಿ ನೀಡೋದ್ರಿಂದ ಲಸಿಕೆಯ ಬ್ರಾಂಡ್ ಗೊಂದಲಕ್ಕೆ ಅವಕಾಶ ಇರುವುದಿಲ್ಲ. ಲಸಿಕೆ ಬಗೆಗಿನ ಮಾಹಿತಿಯನ್ನು ಕೋ ವಿನ್ ಆ್ಯಪ್​ನಲ್ಲಿ ದಾಖಲು ಮಾಡಲಾಗುತ್ತೆ.

ವಾರದಲ್ಲಿ ನಾಲ್ಕು ದಿನ ಅಂದ್ರೆ ಸೋಮವಾರ, ಬುಧವಾರ, ಗುರುವಾರ, ಶನಿವಾರ ಕೊರೊನಾ ಲಸಿಕೆ ನೀಡಿಕೆಗೆ ಮೀಸಲು. ಮತ್ತು ಮಂಗಳವಾರ, ಶುಕ್ರವಾರ ಇತರೆ ಆರೋಗ್ಯ ಕಾರ್ಯಕ್ರಮ, ಲಸಿಕೆ ನೀಡಿಕೆಗೆ ಮೀಸಲು. ಕೊರೊನಾ ಲಸಿಕೆ ನೀಡಿಕೆಯಿಂದ ಬೇರೆ ಹೆಲ್ತ್‌ಕೇರ್ ಚಟುವಟಿಕೆಗೆ ತೊಂದರೆ ಆಗಬಾರದು ಎಂದು ಈ ರೀತಿ ದಿನಗಳನ್ನು ಗುರುತು ಮಾಡಲಾಗಿದೆ. ಶನಿವಾರವೇ ದೇಶದ 3 ಸಾವಿರ ಸ್ಥಳಗಳಲ್ಲಿ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ‌ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Published On - 11:50 am, Fri, 15 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್