AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ, ಮಧ್ಯಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ; ಪರಿವರ್ತನ್ ಸಂಕಲ್ಪ್ ಮಹಾಸಭಾ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಉದ್ದೇಶಿಸಿ ಮೋದಿ ಭಾಷಣ

Narendra Modi Visit To Rajasthan, Madhya Pradesh: ರಾಜಸ್ಥಾನದ ಜೈಪುರದಲ್ಲಿ ಅವರು ಪರಿವರ್ತನ್ ಸಂಕಲ್ಪ್ ಮಹಾಸಭಾದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭ್ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಯಿಂದ ಚುನಾವಣಾ ಯಾತ್ರೆಗಳು ನಡೆದಿದ್ದು, ಇಂದು ಇವೆಲ್ಲವೂ ಸಮಾರೋಪಗೊಳ್ಳಲಿವೆ. ಈ ಸಮಾವೇಶಗಳನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ. ಭೋಪಾಲ್ ಸಮಾವೇಶದಲ್ಲಿ 10 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ.

ರಾಜಸ್ಥಾನ, ಮಧ್ಯಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ; ಪರಿವರ್ತನ್ ಸಂಕಲ್ಪ್ ಮಹಾಸಭಾ ಮತ್ತು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಉದ್ದೇಶಿಸಿ ಮೋದಿ ಭಾಷಣ
ಪ್ರಧಾನಿ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 11:28 AM

Share

ನವದೆಹಲಿ, ಸೆಪ್ಟೆಂಬರ್ 25: ಚುನಾವಣೆಯ ಹೊಸ್ತಿಲಿನಲ್ಲಿರುವ ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸೋಮವಾರ ಪ್ರವಾಸ ನಡೆಸಲಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಅವರು ಪರಿವರ್ತನ್ ಸಂಕಲ್ಪ್ ಮಹಾಸಭಾದ (Parivarta Sankalp Mahasabha) ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭ್ (BJP Workers Mahakumbh) ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.

ಪ್ರಧಾನಿಗಳು ಮಧ್ಯಾಹ್ನ 1 ಗಂಟೆಗೆ ರಾಜಸ್ಥಾನದ ಜೈಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ಅವರು ಧಾಂಕ್ಯ ಗ್ರಾಮಕ್ಕೆ ತೆರಳಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್ ಅವರಿಗೆ ಗೌರವಾರ್ಪಣೆ ಮಾಡಲಿದ್ದಾರೆ. ಬಳಿಕ ದಾಡಿಯಾ ಗ್ರಾಮದಲ್ಲಿ ಅಯೋಜಿಸಲಅದ ಪರಿವರ್ತನ್ ಸಂಕಪ್ಲ್ ಮಹಾಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜಸ್ಥಾನದಲ್ಲಿ ಚುನಾವಣೆಗೆ ತಯಾರಿಯಾಗಿ, ಬಿಜೆಪಿ ರಾಜ್ಯದ ನಾಲ್ಕೂ ದಿಕ್ಕಿನಲ್ಲಿ ಪರಿವರ್ತನ್ ಯಾತ್ರೆಗಳನ್ನು ಕೈಗೊಂಡಿದೆ. ಎಲ್ಲಾ 200 ವಿಧಾನಸಭಾ ಸ್ಥಾನಗಳಲ್ಲಿ ಒಟ್ಟು 9,000 ಕಿಮೀಗಳಷ್ಟು ದೂರ ಈ ಯಾತ್ರೆ ಸಾಗಿದೆ. ಪರಿವರ್ತನ್ ಸಂಕಲ್ಪ್ ಮಹಾಸಭಾ ಸ್ಥಳದಲ್ಲಿ ಈ ನಾಲ್ಕು ಯಾತ್ರೆಗಳು ಸಮಾರೋಪಗೊಳ್ಳಲಿವೆ.

ಇದನ್ನೂ ಓದಿ: ದೇವೇಗೌಡರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದೆ, ಈಗಲೂ ವಿರೋಧಿಸುತ್ತೇನೆ ಎಂದ ಉಮಾ ಭಾರತಿ; ಕಾರಣ ಏನು ಗೊತ್ತಾ?

ಭೋಪಾಲ್​ನಲ್ಲಿ ಮಹಾಕುಂಭ್​ನಲ್ಲಿ 10 ಲಕ್ಷ ಮಂದಿ..?

ಇನ್ನು, ರಾಜಸ್ಥಾನದಂತೆ ಮಧ್ಯಪ್ರದೇಶದಲ್ಲೂ ಬಿಜೆಪಿಯಿಂದ ಐದು ಜನ್ ಆಶೀರ್ವಾದ್ ಯಾತ್ರೆಗಳು ನಡೆದಿವೆ. 10,000ಕ್ಕೂ ಹೆಚ್ಚು ಕಿಮೀ ಸಾಗಿರುವ ಈ ಐದು ಯಾತ್ರೆಗಳು ಇಂದು ಸಮಾರೋಪಗೊಳ್ಳುತ್ತವೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನ ಜಂಬೋರೀ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭ್ ಎಂಬ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇದೇ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಛತ್ತೀಸ್​ಗಡ, ಮಧ್ಯಪ್ರದೇಶ, ಮಿಝೋರಾಮ್, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ.

ಇದನ್ನೂ ಓದಿ: ಭಾರತ ಯಶಸ್ವಿಯಾದರೆ ಬೇರೆಯವರಿಗೂ ಯಶಸ್ಸು; ಭಾರತದ ಬಗ್ಗೆ ಜಾಗತಿಕ ದಕ್ಷಿಣ ದೇಶಗಳಿಂದ ಗುಣಗಾನ

ಈ ಪೈಕಿ ಛತ್ತೀಸ್​ಗಡ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಇದೆ. ಮಿಝೋರಾಮ್​ನಲ್ಲಿ ಎನ್​ಡಿಎ ಮೈತ್ರಿಕೂಟದ ಪಕ್ಷದ ಅಧಿಕಾರದಲ್ಲಿದೆ. ಹೀಗಾಗಿ, ಇಂಡಿಯಾ ಮತ್ತು ಎನ್​ಡಿಎ ಎರಡಕ್ಕೂ ಈ ಚುನಾವಣೆ ಪ್ರತಿಷ್ಠೆಯ ಪಣ ಎನಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ