AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ
ಅಮಿತ್​ ಶಾ
Lakshmi Hegde
|

Updated on: Oct 09, 2021 | 9:06 AM

Share

ಅಹ್ಮದಾಬಾದ್​: 2024ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಅಭ್ಯರ್ಥಿ. ಮುಂದಿನ ಅವಧಿಗೂ ಖಂಡಿತ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಹಾಗೇ, ಪ್ರಧಾನಿ ಮೋದಿಯವರನ್ನು ಬಿಟ್ಟು ಇನ್ಯಾವ ನಾಯಕನೂ ಹೀಗೆ 20 ವರ್ಷಗಳಿಗಿಂತಲೂ ಹೆಚ್ಚಿನ ಕಾಲ ನಿರಂತರವಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲ ಎಂದೂ ಅವರು ತಿಳಿಸಿದ್ದಾರೆ. 

ಗುಜರಾತ್​​ನ ಗಾಂಧಿನಗರದ ಪಾನ್ಸಾರ್​​​ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್​ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಗೆ ಕಾಲಿಟ್ಟು 20ವರ್ಷವಾಯಿತು. ಜಗತ್ತಿನ ಇನ್ಯಾವ ನಾಯಕನೂ ಹೀಗೆ  20 ವರ್ಷಗಳ ಕಾಲ ಬ್ರೇಕ್​ ಇಲ್ಲದೆ, ನಿರಂತರವಾಗಿ ಜನರ ಸೇವೆ ಮಾಡಿದ ಉದಾಹರಣೆಯಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಕಷ್ಟ. ಅಂಥದ್ದರಲ್ಲಿ ನರೇಂದ್ರ ಮೋದಿಯವರನ್ನು ಜನರು ಮೆಚ್ಚಿ ಆಯ್ಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.  ಇನ್ನು, ನರೇಂದ್ರ ಮೋದಿ 2001ರ ಅಕ್ಟೋಬರ್​ 7ರಂದು ಗುಜರಾತ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. 2014ರಲ್ಲಿ ಪ್ರಧಾನಮಂತ್ರಿಯಾದರು. 2024ರಲ್ಲಿಯೂ ಅವರೇ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು.

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ. ಅಮಿತ್​ ಶಾ ನಿನ್ನೆ ಅಲ್ಲಿಯೇ ಇದ್ದ, ಚಹಾ ಅಂಗಡಿಯಿಂದ ಮಣ್ಣಿನ ಕಪ್​​​ನಲ್ಲಿ ಟೀ ಕುಡಿದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮುರಿದ ಸಾಮಾನು ಇದ್ದರೆ ಆ ಮನೆಯಲ್ಲಿ ಕುಟುಂಬದವರ ಮನಸುಗಳೂ ಮುರಿದುಬೀಳುತ್ತವೆ, ಎಚ್ಚರಾ

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ