AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ.

2024ರ ಚುನಾವಣೆಯಲ್ಲೂ ಗೆಲ್ಲುತ್ತೇವೆ, ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ: ಅಮಿತ್​ ಶಾ
ಅಮಿತ್​ ಶಾ
Lakshmi Hegde
|

Updated on: Oct 09, 2021 | 9:06 AM

Share

ಅಹ್ಮದಾಬಾದ್​: 2024ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಅಭ್ಯರ್ಥಿ. ಮುಂದಿನ ಅವಧಿಗೂ ಖಂಡಿತ ಅವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಹಾಗೇ, ಪ್ರಧಾನಿ ಮೋದಿಯವರನ್ನು ಬಿಟ್ಟು ಇನ್ಯಾವ ನಾಯಕನೂ ಹೀಗೆ 20 ವರ್ಷಗಳಿಗಿಂತಲೂ ಹೆಚ್ಚಿನ ಕಾಲ ನಿರಂತರವಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲ ಎಂದೂ ಅವರು ತಿಳಿಸಿದ್ದಾರೆ. 

ಗುಜರಾತ್​​ನ ಗಾಂಧಿನಗರದ ಪಾನ್ಸಾರ್​​​ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್​ 7ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಗೆ ಕಾಲಿಟ್ಟು 20ವರ್ಷವಾಯಿತು. ಜಗತ್ತಿನ ಇನ್ಯಾವ ನಾಯಕನೂ ಹೀಗೆ  20 ವರ್ಷಗಳ ಕಾಲ ಬ್ರೇಕ್​ ಇಲ್ಲದೆ, ನಿರಂತರವಾಗಿ ಜನರ ಸೇವೆ ಮಾಡಿದ ಉದಾಹರಣೆಯಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಕಷ್ಟ. ಅಂಥದ್ದರಲ್ಲಿ ನರೇಂದ್ರ ಮೋದಿಯವರನ್ನು ಜನರು ಮೆಚ್ಚಿ ಆಯ್ಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.  ಇನ್ನು, ನರೇಂದ್ರ ಮೋದಿ 2001ರ ಅಕ್ಟೋಬರ್​ 7ರಂದು ಗುಜರಾತ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. 2014ರಲ್ಲಿ ಪ್ರಧಾನಮಂತ್ರಿಯಾದರು. 2024ರಲ್ಲಿಯೂ ಅವರೇ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು.

ಅಮಿತ್​ ಶಾ ಗುಜರಾತ್​​ನ ಗಾಂಧಿನಗರಕ್ಕೆ ಸರ್ಕಾರಿ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ ಮಾಡಲು ಆಗಮಿಸಿದ್ದರು. ಇದೇ ವೇಳೆ ಪಾನ್ಸಾರ್​​ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಉದ್ಘಾಟಿಸಿದ್ದಾರೆ. ಅಮಿತ್​ ಶಾ ನಿನ್ನೆ ಅಲ್ಲಿಯೇ ಇದ್ದ, ಚಹಾ ಅಂಗಡಿಯಿಂದ ಮಣ್ಣಿನ ಕಪ್​​​ನಲ್ಲಿ ಟೀ ಕುಡಿದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಮುರಿದ ಸಾಮಾನು ಇದ್ದರೆ ಆ ಮನೆಯಲ್ಲಿ ಕುಟುಂಬದವರ ಮನಸುಗಳೂ ಮುರಿದುಬೀಳುತ್ತವೆ, ಎಚ್ಚರಾ

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ