AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ₹20,000 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ; ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಕಥೆ ಬರೆಯಲಾಗುತ್ತಿದೆ: ನರೇಂದ್ರ ಮೋದಿ

PM Narendra Modi’s J&K Visit ಈ ವರ್ಷದ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿರುವುದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಪ್ರಜಾಪ್ರಭುತ್ವವು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟವನ್ನು ತಲುಪಿದಾಗ, ನಾನು ಇಲ್ಲಿಂದ ನಿಮ್ಮೆಲ್ಲರೊಂದಿಗೆ ಸಂವಹನ ನಡೆಸುತ್ತಿದ್ದೇನೆ ಎಂಬುದು ಬಹಳ ಹೆಮ್ಮೆಯ ವಿಷಯ"...

ಜಮ್ಮು ಕಾಶ್ಮೀರದಲ್ಲಿ ₹20,000 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ; ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಕಥೆ ಬರೆಯಲಾಗುತ್ತಿದೆ: ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 24, 2022 | 2:38 PM

ಶ್ರೀನಗರ: 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ತಮ್ಮ ಮೊದಲ  ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೇಂದ್ರಾಡಳಿತ ಪ್ರದೇಶದಲ್ಲಿ 20,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದರು. “ಸಂಪರ್ಕ ಮತ್ತು ವಿದ್ಯುತ್‌ಗೆ ಸಂಬಂಧಿಸಿದ 20,000 ಕೋಟಿ ರೂಪಾಯಿಗಳ ಯೋಜನೆಗಳನ್ನು ಇಂದು ಇಲ್ಲಿ ಉದ್ಘಾಟಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಹಲವು ಅಭಿವೃದ್ಧಿ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಪ್ರಧಾನಿ ಮೋದಿ ಹೇಳಿದರು. ಈ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ದೊಡ್ಡ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 24, 1993 ರಿಂದ ಜಾರಿಗೆ ಬಂದ ಸಂವಿಧಾನ (73 ನೇ ತಿದ್ದುಪಡಿ) ಕಾಯಿದೆ, 1992 ರ ಅಂಗೀಕಾರವನ್ನು ಗುರುತಿಸಲು ಏಪ್ರಿಲ್ 24 ರಂದು ಆಚರಿಸಲಾದ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ (Panchayati Raj Day) ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವರ್ಷದ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿರುವುದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಪ್ರಜಾಪ್ರಭುತ್ವವು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟವನ್ನು ತಲುಪಿದಾಗ, ನಾನು ಇಲ್ಲಿಂದ ನಿಮ್ಮೆಲ್ಲರೊಂದಿಗೆ ಸಂವಹನ ನಡೆಸುತ್ತಿದ್ದೇನೆ ಎಂಬುದು ಬಹಳ ಹೆಮ್ಮೆಯ ವಿಷಯ” ಎಂದು ಪ್ರಧಾನಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಆಜಾದಿ ಕಾ ಅಮೃತ್ ಮಹೋತ್ಸವದ ಆಚರಣೆಯ ಭಾಗವಾಗಿ ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಮತ್ತು ಪುನರುಜ್ಜೀವನ ಗುರಿಯನ್ನು ಹೊಂದಿರುವ ‘ಅಮೃತ ಸರೋವರ ಮಿಷನ್’ಗೆ ಚಾಲನೆ ನೀಡಿದ್ದಾರೆ.

ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ನಿರ್ಮಿಸಲಿರುವ 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆ ಮತ್ತು 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆಯನ್ನು ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ಸುಮಾರು 5,300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. 540 MW ಸಾಮರ್ಥ್ಯದ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯ ಮೇಲೆ 4,500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು. ಎರಡೂ ಯೋಜನೆಗಳು ಈ ಪ್ರದೇಶದ ವಿದ್ಯುತ್ ಅವಶ್ಯಕತೆಗಳನ್ನು ಪೂರೈಸಲು ಸಹಾಯ ಮಾಡುತ್ತವೆ’ ಎಂದು ಪಿಎಂಒ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

3,100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿರುವ ಬನಿಹಾಲ್ ಖಾಜಿಗುಂಡ್ ರಸ್ತೆ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 8.45 ಕಿಮೀ ಉದ್ದದ ಸುರಂಗವು ಬನಿಹಾಲ್ ಮತ್ತು ಖಾಜಿಗುಂಡ್ ನಡುವಿನ ರಸ್ತೆಯ ಅಂತರವನ್ನು 16 ಕಿಮೀ ಕಡಿಮೆ ಮಾಡುತ್ತದೆ ಮತ್ತು ಪ್ರಯಾಣದ ಸಮಯವನ್ನು ಸುಮಾರು ಒಂದೂವರೆ ಗಂಟೆಗಳಷ್ಟು ಕಡಿಮೆ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದ್ದಾರೆ. ಸಾಂಬಾದಲ್ಲಿ 108 ಜನೌಷಧಿ ಕೇಂದ್ರಗಳೊಂದಿಗೆ ಪಲ್ಲಿ ಗ್ರಾಮದಲ್ಲಿ 500KW ಸೌರ ವಿದ್ಯುತ್ ಸ್ಥಾವರವನ್ನು ಉದ್ಘಾಟಿಸಿದರು. ಜಮ್ಮುವಿನ ಪಲ್ಲಿ ಗ್ರಾಮದಲ್ಲಿ ತನ್ನ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಲ್ಲಿಯಲ್ಲಿ 500 KW ಸೌರ ವಿದ್ಯುತ್ ಸ್ಥಾವರವನ್ನು ಉದ್ಘಾಟಿಸುವುದರೊಂದಿಗೆ, ಸಾಂಬಾ ಜಿಲ್ಲೆಯು ಕಾರ್ಬನ್  ನ್ಯೂಟ್ರಲ್ ಆಗಿರುವ ದೇಶದ ಮೊದಲ ಪಂಚಾಯತ್ ಆಗುವತ್ತ ಸಾಗುತ್ತಿದೆ ಎಂದು ಹೇಳಿದರು. ‘ಸಬ್ ಕಾ ಪ್ರಯಾಸ್’ ಏನು ಮಾಡಬಲ್ಲದು ಎಂಬುದನ್ನು ಪಲ್ಲಿಯ ಜನರು ಪ್ರದರ್ಶಿಸಿದ್ದಾರೆ’’ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಎಲ್ಲಾ ಹವಾಮಾನಗಳಲ್ಲಿ ಸಂಪರ್ಕವನ್ನು ಒದಗಿಸುವುದು ನಮ್ಮ ಗುರಿ: ಪ್ರಧಾನಿ ಮೋದಿ ನಾನು ‘ಏಕ್ ಭಾರತ್, ಶ್ರೇಷ್ಠ್ ಭಾರತ’ ಕುರಿತು ಮಾತನಾಡುವಾಗ, ನಮ್ಮ ಗಮನವು ಸಂಪರ್ಕ ಮತ್ತು ಸೇತುವೆಯ ದೂರದ ಮೇಲೆ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಎಲ್ಲಾ ಹವಾಮಾನದ ಸಂಪರ್ಕವನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಜಮ್ಮುವಿನಿಂದ ರಾಷ್ಟ್ರದಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಕಥೆ ಬರೆಯಲಾಗುತ್ತಿದೆ: ಮೋದಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಜಮ್ಮುವಿನಿಂದ ರಾಷ್ಟ್ರದಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಕಥೆಯನ್ನು ಬರೆಯಲಾಗುತ್ತಿದೆ. ಅನೇಕ ಖಾಸಗಿ ಹೂಡಿಕೆದಾರರು ಜಮ್ಮು ಮತ್ತು ಕಾಶ್ಮೀರಕ್ಕೆ ಬರಲು ಆಸಕ್ತಿ ಹೊಂದಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ:ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​

Published On - 1:55 pm, Sun, 24 April 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ