AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೂಪಕ ರೋಹಿತ್ ರಂಜನ್ ಅವರನ್ನು ಬಂಧಿಸುವಂತಿಲ್ಲ : ಸುಪ್ರೀಂ

ರಾಹುಲ್ ಗಾಂಧಿ ಸುಳ್ಳು ಸುದ್ದಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಅವರನ್ನು ರಾಜಸ್ಥಾನ ಅಥವಾ ಛತ್ತೀಸ್‌ಗಢ ಪೊಲೀಸರು ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಿರೂಪಕ ರೋಹಿತ್ ರಂಜನ್ ಅವರನ್ನು ಬಂಧಿಸುವಂತಿಲ್ಲ : ಸುಪ್ರೀಂ
Rohit Ranjan
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 1:41 PM

ರಾಹುಲ್ ಗಾಂಧಿ (Rahul Gandhi) ಸುಳ್ಳು ಸುದ್ದಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಝೀ ನ್ಯೂಸ್ (Zee news) ನಿರೂಪಕ ರೋಹಿತ್ ರಂಜನ್ (Rohit Ranjan) ಅವರನ್ನು ಬಂಧಿಸಿಬೇಕು ಎಂದು ತಿಳಿಸಲಾಗಿತ್ತು ಆದರೆ ಇದೀಗ  ಅವರನ್ನು ರಾಜಸ್ಥಾನ ಅಥವಾ ಛತ್ತೀಸ್‌ಗಢ ಪೊಲೀಸರು ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ರೋಹಿತ್ ರಾಜನ್ ಅವರ ಮೇಲೆ ಯಾವುದೇ ಬಲವಂತದ ಕ್ರಮ ಅಥವಾ ಅವರನ್ನು ವಶಕ್ಕೆ ತೆಗೆದುಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ನಿರೂಪಕನನ್ನು ಬಂಧಿಸಲು ಮಂಗಳವಾರ ಛತ್ತೀಸ್​ಗಡ ಪೊಲೀಸ್ ತಂಡ ಉತ್ತರ ಪ್ರದೇಶದ ಗಾಜಿಯಾಬಾದ್ ನಗರಕ್ಕೆ ಬಂದಿದ್ದರು. ಆದರೆ ನಿರೂಪಕನನ್ನು ನೋಯ್ಡಾ ಪೊಲೀಸ್ ಬಂಧಿಸಿದ್ದು ಮಂಗಳವಾರ ರಾತ್ರಿ ಜಾಮೀನು ಮೂಲಕ ಬಿಡುಗಡೆ ಮಾಡಿತ್ತು. ನಿರೂಪಕ ರೋಹಿತ್ ರಂಜನ್ ವಿರುದ್ಧ  ಐಪಿಸಿ ಸೆಕ್ಷನ್ 153 ಎ(ವಿವಿಧ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ), ), 295A (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಿತ ಅಥವಾ ದುರುದ್ದೇಶಿತ ಕೃತ್ಯ), 467 (ಸುಳ್ಳು ಮಾಹಿತಿ), 469 (ಮಾನಹಾನಿ), 504 (ಉದ್ದೇಶಪೂರ್ವಕ ಅಮಮಾನ) ಅಡಿಯಲ್ಲಿ ರಾಯ್ಪುರ್​​ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಲವಂತದ ಕ್ರಮದಿಂದ ರಕ್ಷಣೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ ಸಮೀಪಿಸಿದ ರಾಜನ್ ತುರ್ತಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ತಪ್ಪಾದ ಮಾಹಿತಿಯೊಂದಿಗೆ ವಿಡಿಯೊ ಪ್ರಸರವಾಗಿದ್ದರ ಬಗ್ಗೆ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಕ್ಷಮೆ ಕೇಳಿದ್ದರು.

ಇದನ್ನೂ ಓದಿ
Image
Health Tips: ದೇಹದ ಚಯಾಪಚಯ ಹೆಚ್ಚಿಸಲು ಇಲ್ಲಿದೆ ಸಲಹೆ
Image
Health Tips: ಕೂದಲಿನ ಬೆಳವಣಿಗೆ ಈ ಆಹಾರಗಳಿಂದ ಸಾಧ್ಯ
Image
International Yoga Day 2022 : ನೀವು ಸರಿಯಾದ ಕ್ರಮದಲ್ಲಿ ಉಸಿರಾಡುತ್ತಿದ್ದೀರಾ?
Image
International Yoga Day 2022: ಈ ಆಸನಗಳು ಮಧುಮೇಹ, ರಕ್ತದೊತ್ತಡ ನಿಯಂತ್ರಣಕ್ಕೆ

ಝೀ ನ್ಯೂಸ್ ಪ್ರಸಾರ ಮಾಡಿದ ವಿಡಿಯೊದಲ್ಲೇನಿತ್ತು? ಉದಯಪುರ್ ಟೇಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಹಂತಕರನ್ನು ರಾಹುಲ್ ಗಾಂಧಿ ಅವರು ಮಕ್ಕಳು ಎಂದು ಹೇಳಿದ್ದಾರೆ ಎಂದು ಝೀನ್ಯೂಸ್ ವರದಿ ಮಾಡಿತ್ತು. ಕೇರಳದ ವಯನಾಡ್ ಗೆ ರಾಹುಲ್ ಗಾಂಧಿ ಭೇಟಿ ನೀಡಿದಾಗ ಮಾಧ್ಯಮದರಲ್ಲಿ ಮಾತನಾಡುತ್ತಿರುವ ವಿಡಿಯೊದ ಒಂದು ತುಣುಕನ್ನು ಸುದ್ದಿಯಲ್ಲಿ ಪ್ರಸಾರ ಮಾಡಲಾಗಿತ್ತು.

ವಯನಾಡ್​ನಲ್ಲಿರುವ ತಮ್ಮ ಕಚೇರಿ ಮೇಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ನಡೆಸಿದ ದಾಳಿ ಬಗ್ಗೆ ಪ್ರತಿಕ್ರಿಯಿಸುವಾಗ ರಾಹುಲ್ ಗಾಂಧಿಯವರು ಅವರು ಮಕ್ಕಳು, ಬೇಜವಾಬ್ದಾರಿಯಿಂದ ಈ ಕೃತ್ಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಜುಲೈ 1ರಂದು ಝೀ ನ್ಯೂಸ್, ರಾಹುಲ್, ಉದಯಪುರ ಹಂತಕರನ್ನು ಮಕ್ಕಳು ಎಂದು ಹೇಳಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

Published On - 1:00 pm, Fri, 8 July 22

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ