AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು

ನಾಸಿಕ್​ನ ಐಟಿ ಕಂಪನಿಯಲ್ಲಿ ಮತಾಂತರ ದಂಧೆ ಬೆಳಕಿಗೆ ಬಂದಿದೆ. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ. ಈ ತಂಡದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸಂದೀಪ್ ಮಿಟ್ಕೆ ಮತ್ತು ವಿವಿಧ ಪೊಲೀಸ್ ಠಾಣೆಗಳ ಅನುಭವಿ ಇನ್ಸ್‌ಪೆಕ್ಟರ್‌ಗಳು ಸೇರಿದ್ದಾರೆ. ಇಲ್ಲಿಯವರೆಗೆ, 7 ಶಂಕಿತರಲ್ಲಿ 6 ಜನರನ್ನು ಬಂಧಿಸಲಾಗಿದೆ. ಅವರ ಸಂಪೂರ್ಣ ತನಿಖೆ ನಡೆಯುತ್ತಿದೆ.

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು
Nashik Crime NewsImage Credit source: TV9
ಸುಷ್ಮಾ ಚಕ್ರೆ
|

Updated on:Apr 09, 2026 | 5:42 PM

Share

ನಾಸಿಕ್, ಏಪ್ರಿಲ್ 9: ಮಹಾರಾಷ್ಟ್ರದ (Maharashtra) ನಾಸಿಕ್‌ನ ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯೊಂದರಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಅವರನ್ನು ಬಂಧಿಸಲಾಗಿದೆ. ಒಟ್ಟು 8 ಮಹಿಳಾ ಉದ್ಯೋಗಿಗಳು  ದೂರುಗಳನ್ನು ದಾಖಲಿಸಿದ್ದಾರೆ ಮತ್ತು ಒಬ್ಬ ಪುರುಷ ಉದ್ಯೋಗಿಯಿಂದ ಒಂದು ದೂರು ದಾಖಲಾಗಿದೆ. ಅವರ ಮೇಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ.

ನಾಸಿಕ್‌ನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯ ಆಘಾತಕಾರಿ ಪ್ರಕರಣಗಳು ಬಹಿರಂಗಗೊಂಡಿವೆ. ಈ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯರಿಗೆ ಉತ್ತಮ ವೃತ್ತಿಜೀವನದ ಆಮಿಷವೊಡ್ಡಲಾಯಿತು. ಆ ಕಂಪನಿಯಲ್ಲಿ ಕೆಲಸ ಮಾಡುವ 8 ಯುವತಿಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು. ಮತಾಂತರಕ್ಕೆ ಅವರ ಮೇಲೆ ಒತ್ತಡ ಹೇರಲು ಪ್ರಯತ್ನಿಸಲಾಗುತ್ತಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಪ್ರಕರಣವು ರಾಜ್ಯಾದ್ಯಂತ ಕೋಲಾಹಲವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಗಳು

ಕಂಪನಿಯ ಕೆಲವು ತಂಡದ ನಾಯಕರು ಯುವತಿಯರನ್ನು ವ್ಯವಸ್ಥಿತವಾಗಿ ಬ್ರೈನ್ ವಾಶ್ ಮಾಡುತ್ತಿದ್ದರು. ಅವರನ್ನು ಪ್ರೀತಿಯ ಬಲೆಗೆ ಬೀಳಿಸಿ ಮದುವೆಗೆ ಆಮಿಷ ಒಡ್ಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ವಿವಾಹಿತ ಮಹಿಳೆಯರು ಸೇರಿದಂತೆ 8 ಯುವತಿಯರು ಒಟ್ಟು 9 ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದರು. ಮಹಿಳೆಯರನ್ನು ಮಾತ್ರವಲ್ಲದೆ ಒಬ್ಬ ಯುವಕನನ್ನೂ ಬಲವಂತವಾಗಿ ಮತಾಂತರಿಸಲಾಗಿದೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Thu, 9 April 26

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು