AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆಗೆ ಅಂಗೀಕಾರ

ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಅವರು ಮಸೂದೆಯ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸುವಾಗ ಪ್ರಸ್ತುತ ಭಾರತವು ವರ್ಷಕ್ಕೆ ಸುಮಾರು 6,000 ಪರೀಕ್ಷೆಗಳನ್ನು ಮಾತ್ರ ನಡೆಸಬಹುದು. ಪರೀಕ್ಷಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಈ ಕಾನೂನು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಸಂಸತ್​​ನಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆಗೆ ಅಂಗೀಕಾರ
ಅನುರಾಗ್ ಠಾಕೂರ್
TV9 Web
| Edited By: |

Updated on: Aug 03, 2022 | 9:14 PM

Share

ದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (National Anti-Doping Agency)ಮತ್ತು ರಾಷ್ಟ್ರೀಯ ಡೋಪ್ ಟೆಸ್ಟಿಂಗ್ ಲ್ಯಾಬೋರೇಟರಿಯ(National Dope Testing Laboratory) ಕಾರ್ಯನಿರ್ವಹಣೆಗೆ ಶಾಸನಬದ್ಧ ಚೌಕಟ್ಟನ್ನು ಒದಗಿಸುವ ಉದ್ದೀಪನ ಮದ್ದು ತಡೆ ಮಸೂದೆಯನ್ನು ಸಂಸತ್ ಬುಧವಾರ ಅಂಗೀಕರಿಸಿದೆ. ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ, 2022 (National Anti-Doping Bill, 2022) ಅನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಕೆಲವು ಅಧಿಕೃತ ತಿದ್ದುಪಡಿಗಳೊಂದಿಗೆ ಲೋಕಸಭೆಯು ಕಳೆದ ವಾರ ಈ ಮಸೂದೆಯನ್ನು ಅಂಗೀಕರಿಸಿತ್ತು. ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಅವರು ಮಸೂದೆಯ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸುವಾಗ ಪ್ರಸ್ತುತ ಭಾರತವು ವರ್ಷಕ್ಕೆ ಸುಮಾರು 6,000 ಪರೀಕ್ಷೆಗಳನ್ನು ಮಾತ್ರ ನಡೆಸಬಹುದು. ಪರೀಕ್ಷಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಈ ಕಾನೂನು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಯಾವುದೇ ದೊಡ್ಡ ಅಂತರರಾಷ್ಟ್ರೀಯ ಚಾಂಪಿಯನ್‌ಶಿಪ್ ಮಾಡುವುದಾದರೆ ಅಗತ್ಯವಿರುವ ಪರೀಕ್ಷೆಗಳ ಸಂಖ್ಯೆ ತಿಂಗಳಿಗೆ 10,000 ಆಗಿರುತ್ತದೆ ಎಂದು ಅವರು ಹೇಳಿದರು.

ಈ ಮಸೂದೆ ಅಂಗೀಕಾರದೊಂದಿಗೆ ಕ್ರೀಡೆಗಳಲ್ಲಿ ಉದ್ದೀಪನ ಮದ್ದು ತಪಾಸಣೆಗೆ ಸಂಬಂಧಿಸಿದಂತೆ ತಮ್ಮದೇ ಆದ ಕಾನೂನುಗಳನ್ನು ಹೊಂದಿರುವ ಅಮೆರಿಕ , ಚೀನಾ, ಜಪಾನ್ ಮತ್ತು ಫ್ರಾನ್ಸ್‌ನಂತಹ ರಾಷ್ಟ್ರಗಳ ಗುಂಪಿಗೆ ಭಾರತ ಸೇರಲಿದೆ ಎಂದು ಠಾಕೂರ್ ಹೇಳಿದರು.

ಪ್ರತಿಪಕ್ಷಗಳು ಮಂಡಿಸಿದ ಹಲವಾರು ತಿದ್ದುಪಡಿಗಳನ್ನು ನಿರಾಕರಿಸಲಾಯಿತು.

ಮಸೂದೆಯು “ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಏಜೆನ್ಸಿ (ನಾಡಾ), ರಾಷ್ಟ್ರೀಯ ಡೋಪ್ ಪರೀಕ್ಷಾ ಪ್ರಯೋಗಾಲಯ (ಎನ್‌ಡಿಟಿಎಲ್) ಮತ್ತು ಇತರ ಉದ್ದೀಪನಾ ಪರೀಕ್ಷಾ ಪ್ರಯೋಗಾಲಯಗಳ ಕಾರ್ಯಾಚರಣೆಗೆ ಶಾಸನಬದ್ಧ ಚೌಕಟ್ಟನ್ನು ಒದಗಿಸಲು ಮತ್ತು ಉದ್ದೀಪನಾ ಮದ್ದು ವಿರೋಧಿ ರಾಷ್ಟ್ರೀಯ ಮಂಡಳಿ ರಚಿಸುವ ಉದ್ದೇಶ ಹೊಂದಿದೆ.

ಇದು ನಾಡಾಗೆ ತನಿಖೆ, ಉದ್ದೀಪನ ಮದ್ದು ವಿರೋಧಿ ನಿಯಮ ಉಲ್ಲಂಘನೆಗಳಿಗೆ ನಿರ್ಬಂಧಗಳನ್ನು ವಿಧಿಸುವುದು, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಕಾರ್ಯವಿಧಾನಗಳು ಮತ್ತು ತಪಾಸಣೆ, ಮಾದರಿ ಸಂಗ್ರಹಣೆ ಮತ್ತು ಮಾಹಿತಿಯ ಮುಕ್ತ ಹರಿವಿನ ಅಧಿಕಾರಗಳನ್ನು ನೀಡಲು ಪ್ರಯತ್ನಿಸುತ್ತದೆ.

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!