Vani Jayaram death: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ

Vani Jayaram: ಹಿರಿಯ ಖ್ಯಾತ ಗಾಯಕಿ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ವಾಣಿ ಜಯರಾಮ್  ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ 78 ವಯಸ್ಸಿನ ವಾಣಿ ಜಯರಾಮ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

Vani Jayaram death: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ
Vani Jairam
Follow us
|

Updated on:Feb 04, 2023 | 4:03 PM

ಹಿರಿಯ ಖ್ಯಾತ ಗಾಯಕಿ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ವಾಣಿ ಜಯರಾಮ್  ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ 78 ವಯಸ್ಸಿನ ವಾಣಿ ಜಯರಾಮ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ ಭಾರತ ಸರ್ಕಾರವು 2023ರ ಗಣರಾಜ್ಯೋತ್ಸವದ ಮೊದಲು ಪದ್ಮಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಿತು. ಇದೀಗ ಅವರ ಹಠಾತ್ ನಿಧನ ಸುದ್ದಿ ದೇಶಾದ್ಯಂತ ಎಲ್ಲರಿಗೂ ಆಶ್ಚರ್ಯ ಮತ್ತು ಅಘಾತವನ್ನು ಉಂಟು ಮಾಡಿದೆ. ತಮ್ಮ ಸಂಗೀತ ಲೋಕದಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಸಾವಿನ ಬಗ್ಗೆ ಹಾಗೂ ಅಂತಿಮ ಸಂಸ್ಕಾರದ ಕುರಿತು ಯಾವುದೇ ಹೆಚ್ಚಿನ ಮಾಹಿತಿ ಬಂದಿಲ್ಲ.

ವಾಣಿ ಜಯರಾಮ್ ಅವರು ಚೆನ್ನೈನ ನುಂಗಂಬಾಕ್ಕಂನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು. ಅವರ ಸಾವಿಗೆ ಕಾರಣ ಇನ್ನೂ ತಿಳಿದಿಲ್ಲ. ಅವರ ಪತಿ ಜಯರಾಮ್ 2018ರಲ್ಲಿ ಸಾವನ್ನಪ್ಪಿದರು. ಕಲಿವಾಣಿಯಾಗಿ ಜನಿಸಿದ ವಾಣಿ ಜಯರಾಮ್ ಅವರ ಕುಟುಂಬವು ಕೂಡ ಸಂಗೀತ ಲೋಕಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ. ಇವರ ತಂದೆ ದುರೈಸಾಮಿ ಅಯ್ಯಂಗಾರ್ ತಾಯಿ ಪದ್ಮಾವತಿ. ಅವರು 1971 ರಲ್ಲಿ ಹಿನ್ನೆಲೆ ಗಾಯಕಿಯಾಗಿ ಐದು ದಶಕಗಳ ಕಾಲ ಹಾಡಿದರು. 19 ಭಾಷೆಗಳಲ್ಲಿ ಹಾಡಿದ್ದಾರೆ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು,  ರಾಜ್ಯ ಸರ್ಕಾರದ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ನಂತರ ವಾಣಿ ಜಯರಾಮ್ ಸಂಗೀತ ಪಯಣಕ್ಕೆ ದೊಡ್ಡ ಬ್ರೇಕ್ ನೀಡಿದ್ದರು, ಅವರು ಎಂಎಸ್ ವಿಶ್ವನಾಥನ್, ಕೆವಿ ಮಹದೇವನ್, ಚಕ್ರವರ್ತಿ, ಇಳಯರಾಜ, ಮತ್ತು ಸತ್ಯಂ ಸೇರಿದಂತೆ ಅನೇಕ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದಾರೆ.

Published On - 3:02 pm, Sat, 4 February 23

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ