AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ

Delhi Rain: ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಗುಡುಗು ಸಹಿತ ಗಾಳಿ ಮಳೆ; ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಾವಣೆ
ದೆಹಲಿ ಮಳೆ
ರಶ್ಮಿ ಕಲ್ಲಕಟ್ಟ
|

Updated on:Mar 30, 2023 | 10:13 PM

Share

ದೆಹಲಿ: ದೆಹಲಿಯಲ್ಲಿ ಗುರುವಾರ ಸಂಜೆ ಭಾರೀ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ (Delhi Airport) 22 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. ಈ ವಿಮಾನಗಳನ್ನು ಲಕ್ನೋ, ಜೈಪುರ, ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ(Delhi Rain) ಸುರಿದಿದೆ. 11 ವಿಮಾನಗಳನ್ನು ಲಕ್ನೋಗೆ, 8 ಜೈಪುರಕ್ಕೆ ಮತ್ತು ತಲಾ 1 ವಿಮಾನಗಳನ್ನು ಅಹಮದಾಬಾದ್, ಚಂಡೀಗಢ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸತತ ಎರಡನೇ ದಿನವೂ ಗುಡುಗು ಸಹಿತ ಮಳೆ, ಬಲವಾದ ಗಾಳಿ ಬೀಸಿದ್ದು, ಶುಕ್ರವಾರ ಕೂಡ ಇದೇ ರೀತಿಯ ಹವಾಮಾನವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಅಧಿಕೃತ ಮಾರ್ಕರ್ ಎಂದು ಪರಿಗಣಿಸಲಾದ ಸಫ್ದರ್‌ಜಂಗ್ ವೀಕ್ಷಣಾಲಯವು 8.30 ರಿಂದ ರಾತ್ರಿ 8.30 ರ ನಡುವೆ 5.8 ಮಿಮೀ ಮಳೆಯನ್ನು ಪಡೆದಿದೆ.ಪಾಲಂ ವೀಕ್ಷಣಾಲಯವು 1.1 ಮಿಮೀ ಮಳೆಯನ್ನು ಪಡೆದರೆ ಲೋಧಿ ರಸ್ತೆ, ರಿಡ್ಜ್ ಮತ್ತು ಅಯಾನಗರದಲ್ಲಿ ಕ್ರಮವಾಗಿ 7.6 ಮಿಮೀ, 4.5 ಮಿಮೀ ಮಳೆಯಾಗಿದೆ. ಪೂರ್ವ ದೆಹಲಿಯಲ್ಲೂ ಆಲಿಕಲ್ಲು ಮಳೆಯಾಗಿದೆ ಎಂದು ವರದಿಯಾಗಿದೆ.

ಗುರುವಾರ ಸಂಜೆ ಪಟೇಲ್ ನಗರ, ಬುದ್ಧ ಜಯಂತಿ ಪಾರ್ಕ್, ರಾಷ್ಟ್ರಪತಿ ಭವನ, ರಾಜೀವ್ ಚೌಕ್, ದೆಹಲಿ ಕಂಟೋನ್ಮೆಂಟ್, ಇಂಡಿಯಾ ಗೇಟ್, ಸಫ್ದರ್‌ಜಂಗ್ ಮತ್ತು ಲೋಡಿ ರಸ್ತೆಯಲ್ಲಿ ಮಳೆ ಸುರಿದಿದೆ.

ಇದನ್ನೂ ಓದಿ: ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಮಾರ್ಚ್ 30 ಮತ್ತು ಏಪ್ರಿಲ್ 5 ರ ನಡುವೆ ವಾರದ ಹೆಚ್ಚಿನ ದಿನಗಳಲ್ಲಿ ದೆಹಲಿ ಮತ್ತು ಪಂಜಾಬ್, ಚಂಡೀಗಢ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು-ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 30 March 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್